Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...