Homeಮುಖಪುಟಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

- Advertisement -
- Advertisement -

ಹೊಸದಿಲ್ಲಿ: ಡಿಸೆಂಬರ್ 19ರಂದು ಗುರ್ಗಾಂವ್ ಕಾಮಿಡಿ ಫೆಸ್ಟಿವಲ್‌ನಲ್ಲಿ ನಿಗದಿಯಾಗಿದ್ದ ಹಾಸ್ಯನಟ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಲಾಗಿದೆ.

ಫಾರೂಖಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಹಲವಾರು ಕರೆಗಳು ಬಂದ ಬಳಿಕ ಕ್ರಮ ಜರುಗಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫಾರೂಖಿಯವರು ವೇದಿಕೆಗೆ ಬರದಂತೆ ತಡೆಯಲು ಹರಿಯಾಣದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ಪೊಲೀಸರನ್ನು ಸಂಪರ್ಕಿಸಿ ಒತ್ತಾಯಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಎಸಿಪಿ (ಸೋಹ್ನಾ) ಅವರಿಗೆ ನೀಡಿದ ದೂರಿನಲ್ಲಿ ಬಿಜೆಪಿಯ ಮುಖಂಡ ಅರುಣ್ ಯಾದವ್, ಫಾರೂಖಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದ ಸಂಘಟಕರಾದ ಎಂಟರ್‌ಟೈನ್‌ಮೆಂಟ್ ಫ್ಯಾಕ್ಟರಿ (TEF), ಫಾರೂಖಿ ಹೆಸರನ್ನು ಕೈಬಿಡಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದೆ.

ಪ್ರದರ್ಶನಕ್ಕೆ ಅಡ್ಡಿಯಾಗಲಿದೆ ಎಂದು ಸಂಘಟಕರಿಗೆ ಕರೆಗಳು ಬಂದಿದ್ದು, ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಪತ್ರಿಕೆಗೆ ತಿಳಿಸಿವೆ. “ಮುನಾವರ್ ಅವರನ್ನು ಡ್ರಾಪ್ ಮಾಡುವಂತೆ ನಿನ್ನೆಯಿಂದ (ಭಾನುವಾರ) ನಮಗೆ ಹಲವು ಕರೆಗಳು ಬಂದಿದ್ದವು. ನಮ್ಮ ಕೆಲಸ ಜನರನ್ನು ರಂಜಿಸುವುದು ಮತ್ತು ನಾವು ಯಾವುದೇ ವಿವಾದವನ್ನು ಬಯಸುವುದಿಲ್ಲ. ಆದ್ದರಿಂದ, ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕ ಮುಬಿನ್ ಟಿಸೇಕರ್ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಫಾರೂಖಿ ಅವರ ಕಾರ್ಯಕ್ರಮವು ಸೆಕ್ಟರ್ 68ರ ಗುರುಗ್ರಾಮ್‌ನ ಏರಿಯಾ ಮಾಲ್‌ನಲ್ಲಿ ನಡೆಯಬೇಕಿತ್ತು. ಕಳೆದ ವಾರ, ಫಾರೂಖಿಯವರನ್ನು “ವಿವಾದಾತ್ಮಕ ವ್ಯಕ್ತಿ” ಎಂದು ಕರೆದು “ಕಾನೂನು ಮತ್ತು ಸುವ್ಯವಸ್ಥೆ” ನೆಪದಲ್ಲಿ ಪೊಲೀಸರು ಸಂಘಟಕರಿಗೆ ಪತ್ರ ಬರೆದ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು. ನಂತರ, ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫಾರೂಖಿ, ‘ನಫ್ರತ್ ಜೀತ್ ಗೈ, ಆರ್ಟಿಸ್ಟ್ ಹಾರ್ ಗಯಾ (ದ್ವೇಷ ಗೆದ್ದಿದೆ, ಕಲಾವಿದ ಸೋತಿದ್ದಾನೆ). ನಾನು ಮುಗಿಸಿದ್ದೇನೆ! ವಿದಾಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಶಾಸಕಿ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ ಏಕಲವ್ಯ ಸಿಂಗ್ ಗೌಡ್ ನೀಡಿದ ದೂರಿನ ಮೇರೆಗೆ ಜನವರಿ 1ರಂದು ಇಂದೋರ್‌ನ ಕೆಫೆಯಲ್ಲಿ ಫಾರೂಖಿಯವರನ್ನು ಬಂಧಿಸಲಾಗಿತ್ತು. ದೂರುದಾರರು ‘ಹಿಂದೂ ರಕ್ಷಕ ಸಂಘಟನೆ’ ಎಂಬುದರ ಮುಖ್ಯಸ್ಥರಾಗಿದ್ದರು.

ಫಾರೂಖಿ ಅವರು ತಮ್ಮ ಕಾರ್ಯಕ್ರಮದ ಪೂರ್ವಾಭ್ಯಾಸದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ, ಹಿಂದೂ ದೇವರುಗಳು ವಿರುದ್ಧ ಹಾಸ್ಯ ಮಾಡಿದ್ದಾರೆ ಎಂದು ಗೌಡ್ ಆರೋಪಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಫಾರೂಖಿ ವಿರುದ್ಧ ಐಪಿಸಿ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

“ಇದು ಫಾರೂಖಿ ಅವರ ವಾಕ್ ಸ್ವಾತಂತ್ರ್ಯದ ಮೇಲೆ ಮಾತ್ರವಲ್ಲ, ಎಲ್ಲ ಹಾಸ್ಯ ಕಲಾವಿದರ ಸ್ವಾತಂತ್ರ್ಯದ ಮೇಲೆ ನಡೆದ ನೇರ ದಾಳಿಯಾಗಿದೆ” ಎಂದು ಸುಪ್ರೀಂ ಕೋರ್ಟ್ ವಕೀಲ ವೃಂದಾ ಗ್ರೋವರ್ ಆರೋಪಿಸಿದ್ದಾರೆ.

ಫಾರೂಖಿ ಜಾಮೀನು ಅರ್ಜಿಯನ್ನು ಇಂದೋರ್ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ತಿರಸ್ಕರಿಸಿತು. ಅಂತಿಮವಾಗಿ ಫೆಬ್ರವರಿ 7ರಂದು, ಅಂದರೆ ಬಂಧಿಸಲ್ಪಟ್ಟ 36 ದಿನಗಳ ನಂತರ ಮಧ್ಯಂತರ ಜಾಮೀನು ನೀಡಲಾಯಿತು.

ಮುಂಬೈನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ನಂತರ, ಫಾರೂಖಿ NDTV ಜೊತೆಗೆ ಮಾತನಾಡುತ್ತಾ, “ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ, ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಯಿತು. ನನ್ನ ಮೊಬೈಲ್‌ ನಂಬರ್‌‌ ಸೋರಿಕೆಯಾದಾಗ, ಜನರು ಕರೆ ಮಾಡಿ ನನ್ನನ್ನು ನಿಂದಿಸುತ್ತಾರೆ. ನನ್ನ ವಿಷಯದಲ್ಲಿ, ಅವರು ನನ್ನ ಧರ್ಮವನ್ನು ಬಳಸುತ್ತಾರೆ” ಎಂದು ಆರೋಪಿಸಿದ್ದರು.


ತಪ್ಪದೇ ಓದಿರಿ: ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...