Homeಮುಖಪುಟಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

- Advertisement -
- Advertisement -

ಹೊಸದಿಲ್ಲಿ: ಡಿಸೆಂಬರ್ 19ರಂದು ಗುರ್ಗಾಂವ್ ಕಾಮಿಡಿ ಫೆಸ್ಟಿವಲ್‌ನಲ್ಲಿ ನಿಗದಿಯಾಗಿದ್ದ ಹಾಸ್ಯನಟ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಲಾಗಿದೆ.

ಫಾರೂಖಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಹಲವಾರು ಕರೆಗಳು ಬಂದ ಬಳಿಕ ಕ್ರಮ ಜರುಗಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫಾರೂಖಿಯವರು ವೇದಿಕೆಗೆ ಬರದಂತೆ ತಡೆಯಲು ಹರಿಯಾಣದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ಪೊಲೀಸರನ್ನು ಸಂಪರ್ಕಿಸಿ ಒತ್ತಾಯಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಎಸಿಪಿ (ಸೋಹ್ನಾ) ಅವರಿಗೆ ನೀಡಿದ ದೂರಿನಲ್ಲಿ ಬಿಜೆಪಿಯ ಮುಖಂಡ ಅರುಣ್ ಯಾದವ್, ಫಾರೂಖಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದ ಸಂಘಟಕರಾದ ಎಂಟರ್‌ಟೈನ್‌ಮೆಂಟ್ ಫ್ಯಾಕ್ಟರಿ (TEF), ಫಾರೂಖಿ ಹೆಸರನ್ನು ಕೈಬಿಡಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದೆ.

ಪ್ರದರ್ಶನಕ್ಕೆ ಅಡ್ಡಿಯಾಗಲಿದೆ ಎಂದು ಸಂಘಟಕರಿಗೆ ಕರೆಗಳು ಬಂದಿದ್ದು, ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಪತ್ರಿಕೆಗೆ ತಿಳಿಸಿವೆ. “ಮುನಾವರ್ ಅವರನ್ನು ಡ್ರಾಪ್ ಮಾಡುವಂತೆ ನಿನ್ನೆಯಿಂದ (ಭಾನುವಾರ) ನಮಗೆ ಹಲವು ಕರೆಗಳು ಬಂದಿದ್ದವು. ನಮ್ಮ ಕೆಲಸ ಜನರನ್ನು ರಂಜಿಸುವುದು ಮತ್ತು ನಾವು ಯಾವುದೇ ವಿವಾದವನ್ನು ಬಯಸುವುದಿಲ್ಲ. ಆದ್ದರಿಂದ, ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕ ಮುಬಿನ್ ಟಿಸೇಕರ್ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಫಾರೂಖಿ ಅವರ ಕಾರ್ಯಕ್ರಮವು ಸೆಕ್ಟರ್ 68ರ ಗುರುಗ್ರಾಮ್‌ನ ಏರಿಯಾ ಮಾಲ್‌ನಲ್ಲಿ ನಡೆಯಬೇಕಿತ್ತು. ಕಳೆದ ವಾರ, ಫಾರೂಖಿಯವರನ್ನು “ವಿವಾದಾತ್ಮಕ ವ್ಯಕ್ತಿ” ಎಂದು ಕರೆದು “ಕಾನೂನು ಮತ್ತು ಸುವ್ಯವಸ್ಥೆ” ನೆಪದಲ್ಲಿ ಪೊಲೀಸರು ಸಂಘಟಕರಿಗೆ ಪತ್ರ ಬರೆದ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು. ನಂತರ, ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫಾರೂಖಿ, ‘ನಫ್ರತ್ ಜೀತ್ ಗೈ, ಆರ್ಟಿಸ್ಟ್ ಹಾರ್ ಗಯಾ (ದ್ವೇಷ ಗೆದ್ದಿದೆ, ಕಲಾವಿದ ಸೋತಿದ್ದಾನೆ). ನಾನು ಮುಗಿಸಿದ್ದೇನೆ! ವಿದಾಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಶಾಸಕಿ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ ಏಕಲವ್ಯ ಸಿಂಗ್ ಗೌಡ್ ನೀಡಿದ ದೂರಿನ ಮೇರೆಗೆ ಜನವರಿ 1ರಂದು ಇಂದೋರ್‌ನ ಕೆಫೆಯಲ್ಲಿ ಫಾರೂಖಿಯವರನ್ನು ಬಂಧಿಸಲಾಗಿತ್ತು. ದೂರುದಾರರು ‘ಹಿಂದೂ ರಕ್ಷಕ ಸಂಘಟನೆ’ ಎಂಬುದರ ಮುಖ್ಯಸ್ಥರಾಗಿದ್ದರು.

ಫಾರೂಖಿ ಅವರು ತಮ್ಮ ಕಾರ್ಯಕ್ರಮದ ಪೂರ್ವಾಭ್ಯಾಸದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ, ಹಿಂದೂ ದೇವರುಗಳು ವಿರುದ್ಧ ಹಾಸ್ಯ ಮಾಡಿದ್ದಾರೆ ಎಂದು ಗೌಡ್ ಆರೋಪಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಫಾರೂಖಿ ವಿರುದ್ಧ ಐಪಿಸಿ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

“ಇದು ಫಾರೂಖಿ ಅವರ ವಾಕ್ ಸ್ವಾತಂತ್ರ್ಯದ ಮೇಲೆ ಮಾತ್ರವಲ್ಲ, ಎಲ್ಲ ಹಾಸ್ಯ ಕಲಾವಿದರ ಸ್ವಾತಂತ್ರ್ಯದ ಮೇಲೆ ನಡೆದ ನೇರ ದಾಳಿಯಾಗಿದೆ” ಎಂದು ಸುಪ್ರೀಂ ಕೋರ್ಟ್ ವಕೀಲ ವೃಂದಾ ಗ್ರೋವರ್ ಆರೋಪಿಸಿದ್ದಾರೆ.

ಫಾರೂಖಿ ಜಾಮೀನು ಅರ್ಜಿಯನ್ನು ಇಂದೋರ್ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ತಿರಸ್ಕರಿಸಿತು. ಅಂತಿಮವಾಗಿ ಫೆಬ್ರವರಿ 7ರಂದು, ಅಂದರೆ ಬಂಧಿಸಲ್ಪಟ್ಟ 36 ದಿನಗಳ ನಂತರ ಮಧ್ಯಂತರ ಜಾಮೀನು ನೀಡಲಾಯಿತು.

ಮುಂಬೈನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ನಂತರ, ಫಾರೂಖಿ NDTV ಜೊತೆಗೆ ಮಾತನಾಡುತ್ತಾ, “ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ, ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಯಿತು. ನನ್ನ ಮೊಬೈಲ್‌ ನಂಬರ್‌‌ ಸೋರಿಕೆಯಾದಾಗ, ಜನರು ಕರೆ ಮಾಡಿ ನನ್ನನ್ನು ನಿಂದಿಸುತ್ತಾರೆ. ನನ್ನ ವಿಷಯದಲ್ಲಿ, ಅವರು ನನ್ನ ಧರ್ಮವನ್ನು ಬಳಸುತ್ತಾರೆ” ಎಂದು ಆರೋಪಿಸಿದ್ದರು.


ತಪ್ಪದೇ ಓದಿರಿ: ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...