Homeಕರೋನಾ ತಲ್ಲಣಸ್ಪುಟ್ನಿಕ್ ಲೈಟ್ ಲಸಿಕೆ ತಯಾರಿಸಲು ಸಜ್ಜಾದ ಭಾರತ

ಸ್ಪುಟ್ನಿಕ್ ಲೈಟ್ ಲಸಿಕೆ ತಯಾರಿಸಲು ಸಜ್ಜಾದ ಭಾರತ

- Advertisement -
- Advertisement -

ರಷ್ಯಾದ ಸ್ಪುಟ್ನಿಕ್ ಲೈಟ್ ಕೋವಿಡ್ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಭಾರತದೊಂದಿಗೆ ಮಾತುಕತೆ ಮುಕ್ತಾಯದ ಹಂತದಲ್ಲಿದೆ ಮತ್ತು ಸ್ಪುಟ್ನಿಕ್ ವಿ ತಯಾರಿಕೆಯ ಒಪ್ಪಂದವನ್ನು ಸಹ ಕಾರ್ಯಗತಗೊಳಿಸಲಾಗುತ್ತಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಸೋಮವಾರ ಬಹಿರಂಗಪಡಿಸಿದ್ದಾರೆ. ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗಿನ 2+2 ಸಭೆಯ ನಂತರ ಲಾವ್ರೊವ್ ಈ ಹೇಳಿಕೆ ನೀಡಿದ್ದಾರೆ.

“ಪ್ರತಿ ವರ್ಷ ಸುಮಾರು ನೂರು ಮಿಲಿಯನ್ ಡೋಸ್‌ಗಳಷ್ಟು ದೊಡ್ಡ ಪ್ರಮಾಣದಲ್ಲಿ ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದ್ದಾರೆಂದು ರಷ್ಯಾದ ಸುದ್ದಿ ಸಂಸ್ಥೆ TASS ಉಲ್ಲೇಖಿಸಿದೆ. ಸೆಪ್ಟೆಂಬರ್ ಮಧ್ಯದಲ್ಲಿ, ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಅಡಿಯಲ್ಲಿ ತಜ್ಞರ ಸಮಿತಿಯು ಭಾರತದಲ್ಲಿ ಸ್ಪುಟ್ನಿಕ್ ಲೈಟ್ ಅಧ್ಯಯನದ ಮೂರನೇ (ಅಂತಿಮ) ಹಂತದ ಮಧ್ಯಂತರ ಪರೀಕ್ಷೆಗಳಿಗೆ ಅನುಮತಿಯನ್ನು ನೀಡಿತು.

ಇದನ್ನೂ ಓದಿ:ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

ದೇಶದಲ್ಲಿ ಭವಿಷ್ಯದ ಉತ್ಪಾದನೆಯ ಭರವಸೆಯೊಂದಿಗೆ ಸ್ಪುಟ್ನಿಕ್ ಲೈಟ್ ಪ್ರಯತ್ನವನ್ನು ಬೆಂಬಲಿಸುತ್ತಿರುವ ರಷ್ಯಾದ ನೇರ ಹೂಡಿಕೆ ನಿಧಿ (RDIF)ಯು 12-17 ವರ್ಷ ವಯಸ್ಸಿನ ಹದಿಹರೆಯದವರಿಗೆ ಉದ್ದೇಶಿಸಿರುವ ಸ್ಪುಟ್ನಿಕ್ M ಲಸಿಕೆಯ ವಿವರಗಳನ್ನು ಭಾರತೀಯ ನಿಯಂತ್ರಕರಿಗೆ ಒದಗಿಸಿದೆ ಎಂದು ಬಹಿರಂಗಪಡಿಸಿದೆ.

ರಷ್ಯಾದ ನೇರ ಹೂಡಿಕೆ ನಿಧಿಯ ಸಿಇಒ ಕಿರಿಲ್ ಡಿಮಿಟ್ರಿವ್ ಅವರು ಸ್ಪುಟ್ನಿಕ್ ಲೈಟ್ ಉತ್ಪಾದನೆಯನ್ನು ಭಾರತದ ಅತಿದೊಡ್ಡ ಲಸಿಕೆ ಉತ್ಪಾದಕರಾದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಹಯೋಗದೊಂದಿಗೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. “ನಾವು ಡಿಸೆಂಬರ್‌ನಲ್ಲಿ ಭಾರತದಲ್ಲಿ ಸ್ಪುಟ್ನಿಕ್ ಲೈಟ್ ಅನ್ನು ಪ್ರಾರಂಭಿಸುವ ಭರವಸೆ ಹೊಂದಿದ್ದೇವೆ ಮತ್ತು ಭಾರತೀಯ ಸಂಸ್ಥೆಗಳೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಭಾರತವು ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಅಸ್ಟ್ರಾಜೆನೆಕಾದ ಕೋವಿಶೀಲ್ಡ್, ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳನ್ನು ಬಳಸುತ್ತಿದೆ. ಮಾಡರ್ನಾ ಮತ್ತು ಜಾನ್ಸನ್ ಆಂಡ್‌ ಜಾನ್ಸನ್ ಸಹ ಭಾರತೀಯರಿಗೆ ಲಸಿಕೆಗಳನ್ನು ಬಿಡುಗಡೆ ಮಾಡಲು ಅನುಮತಿಗಾಗಿ ಅರ್ಜಿ ಸಲ್ಲಿಸಿವೆ.

ಇದನ್ನೂ ಓದಿ:ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...