Homeಕರ್ನಾಟಕಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಮೈಸೂರಿನ ಮಹಾರಾಣಿ ವಿದ್ಯಾರ್ಥಿನಿಲಯದಲ್ಲಿ ಎರಡು ತಿಂಗಳಿಂದ ಊಟ ನೀಡುತ್ತಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆಯಾಗಿಲ್ಲ ಎಂದು ಆರೋಪಿಸಿ ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ನೂರಾರು ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅ.18ರಿಂದ ಕಾಲೇಜು ಪುನಾರಾರಂಭಗೊಂಡಿದೆ. ಹೀಗಿದ್ದರೂ, ವಿದ್ಯಾರ್ಥಿನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಇನ್ನೂ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡು ತಿಂಗಳಿಂದ ಹೋಟೆಲ್‌ನಲ್ಲಿ ಊಟ ಮಾಡುತ್ತಿದೇವೆ. ಹೋಟೆಲ್ ಊಟದಿಂದ ಬಹುತೇಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಎಲ್ಲ ವಿದ್ಯಾರ್ಥಿನಿಯರು ದಿನದ ಮೂರು ಹೊತ್ತು ಹೋಟೆಲ್‌ನಲ್ಲಿಯೇ ತಿನ್ನುವಷ್ಟು ಸ್ಥಿತಿವಂತರಲ್ಲ ಎಂದು ತಿಳಿಸಿದರು.

ಎಷ್ಟೋ ವಿದ್ಯಾರ್ಥಿನಿಯರು ಒಂದೆರಡು ದಿನ ಉಪವಾಸ ಮಾಡಿದ್ದಾರೆ. ಮನೆಯಿಂದ ಬರುವ ವಿದ್ಯಾರ್ಥಿನಿಯರು ಊಟ ತಂದು ಕೊಟ್ಟಿದ್ದಾರೆ. ಒಟ್ಟಾರೆ ಎರಡು ತಿಂಗಳಿಂದ ವಿದ್ಯಾರ್ಥಿನಿಯರ ಪಾಡು ಹೇಳತೀರದಾಗಿದೆ ಎಂದು ಪ್ರತಿಭಟನಾನಿತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಅದಷ್ಟು ಬೇಗ ಊಟದ ವ್ಯವಸ್ಥೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಪರದಾಡಬೇಕಿದೆ. ಹಣ ಕೊಟ್ಟು ಪ್ರತಿನಿತ್ಯ ಹೊರಗಿನಿಂದ ನೀರು ತರಬೇಕಾದ ದುಸ್ಥಿತಿ ನಮ್ಮದು. ಶೀಘ್ರವೇ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿದೆ. ವಾರ್ಡನ್‌ ಹಾಗೂ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ್ದೇವೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರ ಪರವಾಗಿ ಅವರ ಕೈಯಲ್ಲಿ ಆದ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಈ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ . ಹಾಗಾಗೀ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

15 ದಿನಗಳ ತಾತ್ಕಾಲಿಕ ಊಟದ ವ್ಯವಸ್ಥೆ: ಶಾಸಕ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, “ಊಟದ ವ್ಯವಸ್ಥೆ ಆರಂಭಿಸಲು ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಮಾತನಾಡದ್ದೇನೆ. ಇನ್ನೂ 15 ದಿನ ಕಾಲ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ಊಟ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮಹಾರಾಣಿ ಕಾಲೇಜಿನಲ್ಲೇ ಓದಬೇಕೆಂಬ ಹಠ ಏಕೆ?

ಸರಕಾರ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪದವಿ ಕಾಲೇಜು ಆರಂಭಿಸಿದೆ. ವಿದ್ಯಾರ್ಥಿನಿಯರು ತಮಗೆ ಹತ್ತಿರ ಆಗುವ ಕಾಲೇಜುಗಳಲ್ಲಿಯೇ ಸೇರಿಕೊಳ್ಳಬೇಕು. ಮಹಾರಾಣಿ ಕಾಲೇಜಿನಲ್ಲಿಯೇ ಓದಬೇಕೆಂಬುದು ಸರಿಯಾದ ವರ್ತನೆಯಲ್ಲ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಎನ್‌ಇಪಿ ಪಠ್ಯಕ್ರಮ ಬದಲು ಫಜೀತಿ

ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆ ಮಾಡಿಲ್ಲ ಎಂಬುದು ಮಹಾರಾಣಿ ಕಾಲೇಜಿನ ಸಮಸ್ಯೆಯಾದರೆ, ತರಗತಿಗಳು ಆರಂಭವಾಗಿ ಒಂದು ತಿಂಗಳಾದ ಬಳಿಕ ಪಠ್ಯಕ್ರಮ ಬದಲಿಸಿ ಮತ್ತೊಂದು ಯಡವಟ್ಟು ಮಾಡಲು ಮೈಸೂರು ವಿವಿ ಹೊರಟಿದೆ. ಈ ದಿಢೀರ್‌ ಬದಲಾವಣೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಎನ್‌ಇಪಿ ಜಾರಿಯಲ್ಲಿ ಮುಂಚೂಣಿಯಲ್ಲಿರುವ ಮೈಸೂರು ವಿವಿಯು ಹಲವು ಎಡವಟ್ಟುಗಳನ್ನು ಮಾಡುತ್ತಲೇ ಇದೆ. ಬಹುಶಿಸ್ತೀಯ ಪಠ್ಯಕ್ರಮದ ಹೆಸರಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ವಿರುದ್ಧವಾಗಿ ಪಠ್ಯವನ್ನು ಹೇರಲು ಹೊರಟು ವಿವಿ ಈಗ ಸುದ್ದಿಯಲ್ಲಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಮೈಸೂರು ವಿವಿಯು ವಿದ್ಯಾರ್ಥಿಗಳ ಇಷ್ಟ-ಕಷ್ಟಗಳನ್ನು ಆಲಿಸುತ್ತಿಲ್ಲ ಅನಿಸುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...