Homeಕರ್ನಾಟಕಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಮೈಸೂರಿನ ಮಹಾರಾಣಿ ವಿದ್ಯಾರ್ಥಿನಿಲಯದಲ್ಲಿ ಎರಡು ತಿಂಗಳಿಂದ ಊಟ ನೀಡುತ್ತಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆಯಾಗಿಲ್ಲ ಎಂದು ಆರೋಪಿಸಿ ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ನೂರಾರು ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅ.18ರಿಂದ ಕಾಲೇಜು ಪುನಾರಾರಂಭಗೊಂಡಿದೆ. ಹೀಗಿದ್ದರೂ, ವಿದ್ಯಾರ್ಥಿನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಇನ್ನೂ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡು ತಿಂಗಳಿಂದ ಹೋಟೆಲ್‌ನಲ್ಲಿ ಊಟ ಮಾಡುತ್ತಿದೇವೆ. ಹೋಟೆಲ್ ಊಟದಿಂದ ಬಹುತೇಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಎಲ್ಲ ವಿದ್ಯಾರ್ಥಿನಿಯರು ದಿನದ ಮೂರು ಹೊತ್ತು ಹೋಟೆಲ್‌ನಲ್ಲಿಯೇ ತಿನ್ನುವಷ್ಟು ಸ್ಥಿತಿವಂತರಲ್ಲ ಎಂದು ತಿಳಿಸಿದರು.

ಎಷ್ಟೋ ವಿದ್ಯಾರ್ಥಿನಿಯರು ಒಂದೆರಡು ದಿನ ಉಪವಾಸ ಮಾಡಿದ್ದಾರೆ. ಮನೆಯಿಂದ ಬರುವ ವಿದ್ಯಾರ್ಥಿನಿಯರು ಊಟ ತಂದು ಕೊಟ್ಟಿದ್ದಾರೆ. ಒಟ್ಟಾರೆ ಎರಡು ತಿಂಗಳಿಂದ ವಿದ್ಯಾರ್ಥಿನಿಯರ ಪಾಡು ಹೇಳತೀರದಾಗಿದೆ ಎಂದು ಪ್ರತಿಭಟನಾನಿತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಅದಷ್ಟು ಬೇಗ ಊಟದ ವ್ಯವಸ್ಥೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದ ಪರದಾಡಬೇಕಿದೆ. ಹಣ ಕೊಟ್ಟು ಪ್ರತಿನಿತ್ಯ ಹೊರಗಿನಿಂದ ನೀರು ತರಬೇಕಾದ ದುಸ್ಥಿತಿ ನಮ್ಮದು. ಶೀಘ್ರವೇ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿದೆ. ವಾರ್ಡನ್‌ ಹಾಗೂ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ್ದೇವೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರ ಪರವಾಗಿ ಅವರ ಕೈಯಲ್ಲಿ ಆದ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಈ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ . ಹಾಗಾಗೀ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿನಿಯರು ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

15 ದಿನಗಳ ತಾತ್ಕಾಲಿಕ ಊಟದ ವ್ಯವಸ್ಥೆ: ಶಾಸಕ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, “ಊಟದ ವ್ಯವಸ್ಥೆ ಆರಂಭಿಸಲು ಉಂಟಾಗಿರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಮಾತನಾಡದ್ದೇನೆ. ಇನ್ನೂ 15 ದಿನ ಕಾಲ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ಊಟ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮಹಾರಾಣಿ ಕಾಲೇಜಿನಲ್ಲೇ ಓದಬೇಕೆಂಬ ಹಠ ಏಕೆ?

ಸರಕಾರ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪದವಿ ಕಾಲೇಜು ಆರಂಭಿಸಿದೆ. ವಿದ್ಯಾರ್ಥಿನಿಯರು ತಮಗೆ ಹತ್ತಿರ ಆಗುವ ಕಾಲೇಜುಗಳಲ್ಲಿಯೇ ಸೇರಿಕೊಳ್ಳಬೇಕು. ಮಹಾರಾಣಿ ಕಾಲೇಜಿನಲ್ಲಿಯೇ ಓದಬೇಕೆಂಬುದು ಸರಿಯಾದ ವರ್ತನೆಯಲ್ಲ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಎನ್‌ಇಪಿ ಪಠ್ಯಕ್ರಮ ಬದಲು ಫಜೀತಿ

ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಊಟದ ವ್ಯವಸ್ಥೆ ಮಾಡಿಲ್ಲ ಎಂಬುದು ಮಹಾರಾಣಿ ಕಾಲೇಜಿನ ಸಮಸ್ಯೆಯಾದರೆ, ತರಗತಿಗಳು ಆರಂಭವಾಗಿ ಒಂದು ತಿಂಗಳಾದ ಬಳಿಕ ಪಠ್ಯಕ್ರಮ ಬದಲಿಸಿ ಮತ್ತೊಂದು ಯಡವಟ್ಟು ಮಾಡಲು ಮೈಸೂರು ವಿವಿ ಹೊರಟಿದೆ. ಈ ದಿಢೀರ್‌ ಬದಲಾವಣೆಯನ್ನು ಖಂಡಿಸಿ ಇತ್ತೀಚೆಗೆ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಎನ್‌ಇಪಿ ಜಾರಿಯಲ್ಲಿ ಮುಂಚೂಣಿಯಲ್ಲಿರುವ ಮೈಸೂರು ವಿವಿಯು ಹಲವು ಎಡವಟ್ಟುಗಳನ್ನು ಮಾಡುತ್ತಲೇ ಇದೆ. ಬಹುಶಿಸ್ತೀಯ ಪಠ್ಯಕ್ರಮದ ಹೆಸರಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ವಿರುದ್ಧವಾಗಿ ಪಠ್ಯವನ್ನು ಹೇರಲು ಹೊರಟು ವಿವಿ ಈಗ ಸುದ್ದಿಯಲ್ಲಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಮೈಸೂರು ವಿವಿಯು ವಿದ್ಯಾರ್ಥಿಗಳ ಇಷ್ಟ-ಕಷ್ಟಗಳನ್ನು ಆಲಿಸುತ್ತಿಲ್ಲ ಅನಿಸುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...