Homeಮುಖಪುಟ1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ &...

1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ & ಅತ್ಯಂತ ಅಸಮಾನ ದೇಶ’

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ.

- Advertisement -
- Advertisement -

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ.

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ದೇಶದ ಸರಾಸರಿ ಕುಟುಂಬವೊಂದರ ಸಂಪತ್ತು ₹9,83,010 ರಷ್ಟಿದ್ದರೆ, ಕೆಳಗಿನ 50 ಪ್ರತಿಶತದಷ್ಟು ಜನರು ಬಹುತೇಕ ಏನನ್ನೂ ಹೊಂದಿಲ್ಲ, ರೂ 66,280 ರ ಸರಾಸರಿ ಆದಾಯ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ಈ ವರದಿಯು ದೇಶದ ಲಿಂಗ ಅಸಮಾನತೆಯನ್ನು ಎತ್ತಿ ತೋರಿಸಿದ್ದು, ದೇಶದ ಆದಾಯದಲ್ಲಿ ಮಹಿಳಾ ಕಾರ್ಮಿಕರ ಆದಾಯದ ಪಾಲು 18% ಎಂದು ಉಲ್ಲೇಖಿಸಿದ್ದು, ಇದು ಪ್ರಪಂಚದಲ್ಲೇ ಅತ್ಯಂತ ಕಡಿಮೆ ಎಂದು ವರದಿ ತಿಳಿಸಿದೆ. ಆದರೆ ಮಧ್ಯಪ್ರಾಚ್ಯ ದೇಶಕ್ಕಿಂತ ಹೆಚ್ಚಿದ್ದು, ಮಧ್ಯಪ್ರಾಚ್ಯದಲ್ಲಿ ಮಹಿಳಾ ಕಾರ್ಮಿರ ಆದಾಯದ ಪಾಲು 15% ಎಂದು ವರದಿ ತಿಳಿಸಿದೆ.

ನೀತಿ ಆಯೋಗವು ಇತ್ತೀಚೆಗೆ ಸಿದ್ಧಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (MPI) ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಬಹು ಆಯಾಮದ ಬಡವರಾಗಿದ್ದರು. ಬಹುಆಯಾಮದ ಬಡವರಾಗಿರುವ ಬಿಹಾರವು ಅತಿ ಹೆಚ್ಚು ಜನರನ್ನು (ರಾಜ್ಯದ ಜನಸಂಖ್ಯೆಯ ಶೇಕಡಾ 51.91) ಹೊಂದಿದೆ, ನಂತರ ಜಾರ್ಖಂಡ್ ಶೇಕಡಾ 42.16 ಮತ್ತು ಉತ್ತರ ಪ್ರದೇಶವು ಶೇಕಡಾ 37.79 ರಷ್ಟಿದೆ.

“ಅಸಮಾನತೆಯಲ್ಲಿ ವಿಶ್ವದ ಎಲ್ಲಾ ದೇಶಗಳು ಒಂದೇ ರೀತಿಯಲ್ಲಿ ಏರಿಕೆಯಾಗಿಲ್ಲ. ಅಮೆರಿಕಾ, ರಷ್ಯಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಸಮಾನತೆ ತೀವ್ರವಾಗಿ ಹೆಚ್ಚಗಿದ್ದರೆ, ಚೀನಾ ಮತ್ತು ಯುರೋಪಿಯನ್ ದೇಶಗಳಲ್ಲಿ ತುಲನಾತ್ಮಕವಾಗಿ ಸಣ್ಣ ಪ್ರಮಾಣದಲ್ಲಿ ಏರಿಕೆಗಳನ್ನು ಅನುಭವಿದೆ” ಎಂದು ವರದಿಯು ಹೇಳಿದೆ.

ಅನಿಯಂತ್ರಣ ಮತ್ತು ಉದಾರೀಕರಣದಿಂದಾಗಿ 1980 ರ ದಶಕದಿಂದಲೂ ವಿಶ್ವದ ಅನೇಕ ದೇಶದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆಗಳು ಹೆಚ್ಚುತ್ತಿದೆ ಎಂದು ವರದಿ ಕಂಡುಕೊಂಡಿದೆ. ಮೂರು ದಶಕಗಳ ವ್ಯಾಪಾರ ಮತ್ತು ಆರ್ಥಿಕ ಜಾಗತೀಕರಣದ ನಂತರ 2021 ರಲ್ಲಿ, ಜಾಗತಿಕ ಅಸಮಾನತೆಗಳು ಅತ್ಯಂತ ಸ್ಪಷ್ಟವಾಗಿವೆ ಎಂದು ವರದಿಯು ಗಮನ ಸೆಳೆದಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಅವರು ವರದಿಯನ್ನು ರಚಿಸಿದ್ದು, ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಸೇರಿದಂತೆ ಹಲವಾರು ತಜ್ಞರು ಸಂಯೋಜಿಸಿದ್ದಾರೆ.

ಇದನ್ನೂ ಓದಿ:’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...