Homeಕರ್ನಾಟಕಸಂವಿಧಾನ ಬದಲಿಸಬೇಕು ಎನ್ನುವವರಿಗೆ ಪಂಚಾಯತ್ ವ್ಯವಸ್ಥೆ ಬಗ್ಗೆ ನಂಬಿಕೆ ಇದೆಯಾ? - ಹರಿಪ್ರಸಾದ್ ಪ್ರಶ್ನೆ

ಸಂವಿಧಾನ ಬದಲಿಸಬೇಕು ಎನ್ನುವವರಿಗೆ ಪಂಚಾಯತ್ ವ್ಯವಸ್ಥೆ ಬಗ್ಗೆ ನಂಬಿಕೆ ಇದೆಯಾ? – ಹರಿಪ್ರಸಾದ್ ಪ್ರಶ್ನೆ

- Advertisement -
- Advertisement -

ಸಂವಿಧಾನವನ್ನೆ ಬದಲಿಸುವುದಾಗಿ ಹೇಳುವ ಬಿಜೆಪಿ ಪಕ್ಷದವರಿಗೆ ಪಂಚಾಯತ್ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ. ಆ ಪಕ್ಷದವರಿಗೆ ಜನರ ಸಂಕಷ್ಟದ ಅರಿವಿಲ್ಲ. ಅಭಿವೃದ್ದಿ ಪರಿಕಲ್ಪನೆಗಳಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಅವರು ಮಂಗಳವಾರ ಭಟ್ಕಳದಲ್ಲಿ ನಡೆದ ಕಾಂಗ್ರೆಸ್‌ನ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತಾಡುತ್ತ ಕೇಂದ್ರ ಮತ್ತು ರಾಜ್ಯದಲ್ಲಿ ಜನವಿರೋಧಿ ನೀತಿಯ ಹೊಣೆಗೇಡಿ ಸರ್ಕಾರಗಳಿವೆಯೆಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ರೈತ ವಿರೋಧಿ ಕಾಯ್ದೆ ರದ್ದತಿಗಾಗಿ ಪ್ರತಿಭಟನೆ ನಡೆಸಿದ ರೈತರಲ್ಲಿ 700ಕೂ ಹೆಚ್ಚು ಮಂದಿ ಮೃತರಾದರೂ ಪ್ರಧಾನಿ ಮೋದಿ ಒಂದು ವಿಷಾಧವಾಗಲಿ, ಕ್ಷಮೆಯಾಗಲಿ ಕೇಳಲಿಲ್ಲ. ಜನರ ಸಮಸ್ಯೆ ಧಿಕ್ಕರಿಸಿ ಕೇಂದ್ರ ಸರ್ಕಾರ ಅಗತ್ಯ ವಸ್ತು, ತೈಲ ಬೆಲೆ ಏರಿಸುತ್ತಲೇ ಇದೆ. ಮೋದಿ ಸರ್ಕಾರ ಎಲ್ಲ ರಂಗದಲ್ಲೂ ಖಾಸಗೀಕರಣ ಮಾಡಲು ಹೊರಟಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳ ಜನ ವಿರೋಧಿ ಧೋರಣೆಗೆ ಜನರು ಬೇಸತ್ತಿದ್ದು ಅದು ಸ್ಥಳಿಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಈಗ ನಡೆಯುವ ಚುನಾವಣೆಯಲ್ಲಿ ಆಸ್ಪೋಟವಾಗಲಿದೆ ಎಂದು ಹರಿಪ್ರಸಾದ್ ಉತ್ತರ ಕನ್ನಡವೂ ಸೇರಿದಂತೆ ರಾಜ್ಯದ ಹೆಚ್ಚಿನ ಕಡೆ ಕಾಂಗ್ರೆಸ್ ಗೆಲ್ಲಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು.

ಭಟ್ಕಳದಲ್ಲಿ ಹಿಂದಿನ ಅವಧಿಯಲ್ಲಿ ಶಾಸಕರಾಗಿದ್ದ ಮಂಕಾಳ ವೈದ್ಯ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ದೊಡ್ಡ ಪ್ರಮಾಣದಲ್ಲಿ ಮಾಡಿದ್ದರು. ಆದರೆ ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಮರಣ ಹೊಂದಿದ್ದ ಪರೇಶ್ ಮೇಸ್ತ ಪ್ರಕರಣ ಕೋಮು ರಾಜಕಾರಣಕ್ಕೆ ಬಳಸಿಕೊಂಡು ಚುನಾವಣೆ ಗೆದ್ದಿತು. ಕೇಂದ್ರ ಹಾಗೂ ರಾಜ್ಯ ಎರಡು ಕಡೆ ಬಿಜೆಪಿಯವರೆ ಆಡಳಿತ ನಡೆಸುತ್ತಿದ್ದರೂ ಪರೇಶ್ ಸಾವಿನ ಕಾರಣವಾಗಲಿ, ಆರೋಪಿಗಳನ್ನಾಗಲಿ ಪತ್ತೆಹಚ್ಚಲಾಗಿಲ್ಲ. ಸರಿಯಾದ ತನಿಖೆ ನಡೆದರೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯವರೆ ಸಿಕ್ಕಿಬೀಳಲಿದ್ದಾರೆಂದು ಹೇಳಿದ ಹರಿಪ್ರಸಾದ್ ಸುಪ್ರೀಮ್ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪರೇಶ್ ಸಾವಿನ ತನಿಖೆ ನಡೆಸುವಂತೆ ಆಗ್ರಹಿಸಿದರು.


ಇದನ್ನೂ ಓದಿ: ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...