Homeಮುಖಪುಟವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 13 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಲಿದ್ದು, ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮಸೀದಿಗೆ ಸ್ಥಳೀಯ ಅಧಿಕಾರಿಗಳು “ಕೇಸರಿ” ಬಣ್ಣ ಬಳಿದಿದ್ದಾರೆ ಎಂದು ಮಸೀದಿ ಸಮಿತಿಯ ಸದಸ್ಯರು ಹೇಳಿದ್ದಾರೆ.

ಮಸೀದಿಗೆ ಕೇಸರಿ ಬಣ್ಣ ಬಳಿದಿರುವ ಆರೋಪಕ್ಕೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡಿಲ್ಲ. ರಸ್ತೆಯಲ್ಲಿರುವ ಎಲ್ಲಾ ಕಟ್ಟಡಗಳಿಗೆ ಏಕರೂಪದ ಬಣ್ಣವನ್ನು ಬಳಿಯಲಾಗುತ್ತಿದೆ. ಅದು “ತಿಳಿ ಗುಲಾಬಿ” ಬಣ್ಣವಾಗಿದೆ ಎಂದು ಅಧಿಕಾರಿಯೊಬ್ಬರು ಈ ಹಿಂದೆ ಹೇಳಿದ್ದರು.

ಮಸೀದಿಗೆ ಕೇಸರಿ ಬಣ್ಣ ಬಳಿದಿರುವುದಕ್ಕೆ ಮುಸ್ಲಿಂ ಸಮುದಾಯದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ನಂತರ, ಬುಲನಾಳ ಪ್ರದೇಶದಲ್ಲಿ ಇರುವ ಮಸೀದಿಗೆ ಮತ್ತೆ ಬಿಳಿ ಬಣ್ಣ ಬಳಿಯಲಾಗುತ್ತಿದೆ ಎಂದು ವರದಿಯಾಗಿದೆ.

 “ಮಸೀದಿಯು ಮೊದಲು ಬಿಳಿ ಬಣ್ಣದ್ದಾಗಿತ್ತು. ಅದಕ್ಕೆ ಅಧಿಕಾರಿಗಳು ಕೇಸರಿ ಬಣ್ಣ ಬಳಿಸಿದ್ದರು. ಈ ವೇಳೆ ಅವರು ಮಸೀದಿ ಸಮಿತಿಯ ಸಲಹೆಯನ್ನೂ ಪಡೆದಿಲ್ಲ” ಎಂದು ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿಯ ಮೊಹಮ್ಮದ್ ಎಜಾಜ್ ಇಸ್ಲಾಹಿ ಹೇಳಿದ್ದಾರೆ.

ನಮ್ಮ ಅನುಮತಿಯಿಲ್ಲದೆ ಈ ಕೇಸರಿ ಬಣ್ಣ ಬಳಿಯುವ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಿರುವ ಅವರು, ಕಾಶಿ ವಿಶ್ವನಾಥ ದೇವಸ್ಥಾನದ ಕಚೇರಿಗೆ ತಮ್ಮ ಆಕ್ಷೇಪಣೆ ಸಲ್ಲಿಸಿದ್ದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಆಕ್ಷೇಪಣೆಯನ್ನು ಎತ್ತಲು ಪ್ರಯತ್ನಿಸಿದ್ದೆವು. ಆದರೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಇಸ್ಲಾಹಿ ಹೇಳಿದ್ದಾರೆ.

“ನಂತರ, ಸ್ಥಳೀಯ ಆಡಳಿತವು ಇದನ್ನು ಅರ್ಥಮಾಡಿಕೊಂಡಿದೆ. ಈಗ ಮಸೀದಿಗೆ ಬಿಳಿ ಬಣ್ಣ ಬಳಿಯಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ವಾರಣಾಸಿ ಅಭಿವೃದ್ಧಿ ಪ್ರಾಧಿಕಾರದ (ವಿಡಿಎ) ಕಾರ್ಯದರ್ಶಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ವರ್ಮಾ ಅವರು ಈ ಹಿಂದೆ ದೇಗುಲಕ್ಕೆ ಹೋಗುವ ರಸ್ತೆಯಲ್ಲಿರುವ ಕಟ್ಟಡಗಳಿಗೆ ಏಕರೂಪದ ಬಣ್ಣವನ್ನು ಬಳಿಯಲಾಗುತ್ತದೆ ಎಂದು ಹೇಳಿದ್ದರು ಎಂದು ವರದಿಯಾಗಿದೆ.

ಈ ಪ್ರದೇಶದಲ್ಲಿನ ಹೆಚ್ಚಿನ ಕಟ್ಟಡಗಳು ಮರಳುಗಲ್ಲಿನಿಂದ ಮಾಡಲ್ಪಟ್ಟಿದೆ. ಇವುಗಳಿಗೆ ಬಳಿದಿರುವ ಬಣ್ಣ “ತಿಳಿ ಗುಲಾಬಿ” ಬಣ್ಣದ್ದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಕಳೆದ ವರ್ಷ ಸಹ ಪ್ರಯಾಗ್‌ರಾಜ್‌ನ ಸ್ಥಳೀಯ ಅಧಿಕಾರಿಗಳು ಬಿಜೆಪಿ ಪ್ರಚಾರಕ್ಕಾಗಿ ಹಲವಾರು ಮನೆಗಳಿಗೆ ಕೇಸರಿ ಬಣ್ಣ ಬಳಿದಿದ್ದರು. ಇದರಿಂದ ಆಕ್ರೋಶಿತಗೊಂಡ ಸ್ಥಳೀಯರು ಪೊಲೀಸ್ ದೂರು ನೀಡಿದ್ದರು. ನಂತರ ಕೇಸರಿ ಬಣ್ಣದ ಮೇಲೆ ಬೇರೆ ಬಣ್ಣಗಳನ್ನು ಬಳಿಯಲಾಗಿತ್ತು.


ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...