Homeಮುಖಪುಟವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 13 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಲಿದ್ದು, ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮಸೀದಿಗೆ ಸ್ಥಳೀಯ ಅಧಿಕಾರಿಗಳು “ಕೇಸರಿ” ಬಣ್ಣ ಬಳಿದಿದ್ದಾರೆ ಎಂದು ಮಸೀದಿ ಸಮಿತಿಯ ಸದಸ್ಯರು ಹೇಳಿದ್ದಾರೆ.

ಮಸೀದಿಗೆ ಕೇಸರಿ ಬಣ್ಣ ಬಳಿದಿರುವ ಆರೋಪಕ್ಕೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡಿಲ್ಲ. ರಸ್ತೆಯಲ್ಲಿರುವ ಎಲ್ಲಾ ಕಟ್ಟಡಗಳಿಗೆ ಏಕರೂಪದ ಬಣ್ಣವನ್ನು ಬಳಿಯಲಾಗುತ್ತಿದೆ. ಅದು “ತಿಳಿ ಗುಲಾಬಿ” ಬಣ್ಣವಾಗಿದೆ ಎಂದು ಅಧಿಕಾರಿಯೊಬ್ಬರು ಈ ಹಿಂದೆ ಹೇಳಿದ್ದರು.

ಮಸೀದಿಗೆ ಕೇಸರಿ ಬಣ್ಣ ಬಳಿದಿರುವುದಕ್ಕೆ ಮುಸ್ಲಿಂ ಸಮುದಾಯದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ನಂತರ, ಬುಲನಾಳ ಪ್ರದೇಶದಲ್ಲಿ ಇರುವ ಮಸೀದಿಗೆ ಮತ್ತೆ ಬಿಳಿ ಬಣ್ಣ ಬಳಿಯಲಾಗುತ್ತಿದೆ ಎಂದು ವರದಿಯಾಗಿದೆ.

 “ಮಸೀದಿಯು ಮೊದಲು ಬಿಳಿ ಬಣ್ಣದ್ದಾಗಿತ್ತು. ಅದಕ್ಕೆ ಅಧಿಕಾರಿಗಳು ಕೇಸರಿ ಬಣ್ಣ ಬಳಿಸಿದ್ದರು. ಈ ವೇಳೆ ಅವರು ಮಸೀದಿ ಸಮಿತಿಯ ಸಲಹೆಯನ್ನೂ ಪಡೆದಿಲ್ಲ” ಎಂದು ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿಯ ಮೊಹಮ್ಮದ್ ಎಜಾಜ್ ಇಸ್ಲಾಹಿ ಹೇಳಿದ್ದಾರೆ.

ನಮ್ಮ ಅನುಮತಿಯಿಲ್ಲದೆ ಈ ಕೇಸರಿ ಬಣ್ಣ ಬಳಿಯುವ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಿರುವ ಅವರು, ಕಾಶಿ ವಿಶ್ವನಾಥ ದೇವಸ್ಥಾನದ ಕಚೇರಿಗೆ ತಮ್ಮ ಆಕ್ಷೇಪಣೆ ಸಲ್ಲಿಸಿದ್ದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಆಕ್ಷೇಪಣೆಯನ್ನು ಎತ್ತಲು ಪ್ರಯತ್ನಿಸಿದ್ದೆವು. ಆದರೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಇಸ್ಲಾಹಿ ಹೇಳಿದ್ದಾರೆ.

“ನಂತರ, ಸ್ಥಳೀಯ ಆಡಳಿತವು ಇದನ್ನು ಅರ್ಥಮಾಡಿಕೊಂಡಿದೆ. ಈಗ ಮಸೀದಿಗೆ ಬಿಳಿ ಬಣ್ಣ ಬಳಿಯಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ವಾರಣಾಸಿ ಅಭಿವೃದ್ಧಿ ಪ್ರಾಧಿಕಾರದ (ವಿಡಿಎ) ಕಾರ್ಯದರ್ಶಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ವರ್ಮಾ ಅವರು ಈ ಹಿಂದೆ ದೇಗುಲಕ್ಕೆ ಹೋಗುವ ರಸ್ತೆಯಲ್ಲಿರುವ ಕಟ್ಟಡಗಳಿಗೆ ಏಕರೂಪದ ಬಣ್ಣವನ್ನು ಬಳಿಯಲಾಗುತ್ತದೆ ಎಂದು ಹೇಳಿದ್ದರು ಎಂದು ವರದಿಯಾಗಿದೆ.

ಈ ಪ್ರದೇಶದಲ್ಲಿನ ಹೆಚ್ಚಿನ ಕಟ್ಟಡಗಳು ಮರಳುಗಲ್ಲಿನಿಂದ ಮಾಡಲ್ಪಟ್ಟಿದೆ. ಇವುಗಳಿಗೆ ಬಳಿದಿರುವ ಬಣ್ಣ “ತಿಳಿ ಗುಲಾಬಿ” ಬಣ್ಣದ್ದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಕಳೆದ ವರ್ಷ ಸಹ ಪ್ರಯಾಗ್‌ರಾಜ್‌ನ ಸ್ಥಳೀಯ ಅಧಿಕಾರಿಗಳು ಬಿಜೆಪಿ ಪ್ರಚಾರಕ್ಕಾಗಿ ಹಲವಾರು ಮನೆಗಳಿಗೆ ಕೇಸರಿ ಬಣ್ಣ ಬಳಿದಿದ್ದರು. ಇದರಿಂದ ಆಕ್ರೋಶಿತಗೊಂಡ ಸ್ಥಳೀಯರು ಪೊಲೀಸ್ ದೂರು ನೀಡಿದ್ದರು. ನಂತರ ಕೇಸರಿ ಬಣ್ಣದ ಮೇಲೆ ಬೇರೆ ಬಣ್ಣಗಳನ್ನು ಬಳಿಯಲಾಗಿತ್ತು.


ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...