Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...