Homeಮುಖಪುಟಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

- Advertisement -
- Advertisement -

ಗೌರಿ ಲಂಕೇಶ್‌ ದಿಟ್ಟ ಪತ್ರಕರ್ತೆ ಮಾತ್ರ ಆಗಿರಲಿಲ್ಲ, ಹೋರಾಟಗಾರ್ತಿಯೂ, ಪ್ರೀತಿ ತುಂಬಿದ ತಾಯಿಯೂ, ಸಾಮಾಜಿಕ ಚಳವಳಿಗಳ ಶಕ್ತಿಯೂ ಆಗಿದ್ದರು. ಆ ಮೂಲಕ ಕೋಮುವಾದಿಗಳಿಗೆ ಸಿಂಹಸ್ವಪ್ನವಾಗಿದ್ದರು. ಕೋಮು ಸೌಹಾರ್ದಕ್ಕಾಗಿ, ಬಹುತ್ವದ ಉಳಿವಿಗಾಗಿ ಅವರು ನಿರಂತರ ಶ್ರಮಿಸುತ್ತಿದ್ದರು. ಶೋಷಿತರು ದನಿಯಾಗಿದ್ದರು. ಅದಕ್ಕಾಗಿಯೇ ಅವರು ಸನಾತನಾವಾದಿಗಳ ಗುಂಡಿಗೆ ಎದೆಯೊಡ್ಡಬೇಕಾಯಿತು. ಆದರೆ ಯಾವ ಗೌರಿ ಲಂಕೇಶ್‌ರವರ ದನಿಯನ್ನು ಅಡಗಿಸಲು ಅವರನ್ನು ಹತ್ಯೆ ಮಾಡಲಾಯಿತೊ ಆ ದನಿ ದ್ವಿಗುಣಗೊಂಡಿತು. ರಾಜ್ಯ-ದೇಶ-ಪ್ರಪಂಚದೆಲ್ಲೆಡೆ ನಾನು ಗೌರಿ ನಾವೆಲ್ಲರೂ ಗೌರಿ ಎಂಬ ದನಿ ಎದ್ದಿತು. ಅದು ಇಂದಿಗೂ ಮುಂದುವರೆಯುತ್ತಿದೆ. ಅದು ಮತ್ತಷ್ಟು ಮಾರ್ಧನಿಸುವಂತೆ ಮಾಡಲು ಅವರ ಸಹೋದರಿ ಕವಿತಾ ಲಂಕೇಶ್‌ ಮುಂದಾಗಿದ್ದು ಗೌರಿ ಲಂಕೇಶ್‌ರವರ ಬದುಕು, ಹೋರಾಟದ ಕುರಿತು ಸಾಕ್ಷ್ಯಚಿತ್ರವೊಂದನ್ನು ತಯಾರಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್ ಅವರು ಗೌರಿ ಲಂಕೇಶ್ ರವರ ಹತ್ಯೆಗೆ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಅದರೊಟ್ಟಿಗೆ ಗೌರಿಯವರ ಕುರಿತು ಪ್ರಪಂಚಕ್ಕೆ ತಿಳಿಸುವ ಕೆಲಸದಲ್ಲಿಯೂ ನಿರತರಾಗಿದ್ದಾರೆ. ಅದಕ್ಕಾಗಿ ಇಡೀ ಕರ್ನಾಟಕ ಸುತ್ತುತ್ತಿರುವ ಅವರು ಈ ತಿಂಗಳಿನಲ್ಲಿ ಸಾಕ್ಷ್ಯಚಿತ್ರ ಪೂರ್ಣಗೊಳಿಸಿ 2022ರ ಜನವರಿಯಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದಾರೆ.

ಆಮ್ಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ ಸಂಸ್ಥೆಯು ಕಳೆದ ವರ್ಷ ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ” ಎಂದು ಕವಿತಾ ಲಂಕೇಶ್‌ ಹೇಳಿದ್ದಾರೆ.

“ಗೌರಿ ನನಗೆ ಸಹೋದರಿ ಎಂಬುದಕ್ಕಿಂತಲೂ ಮಿಗಿಲಾಗಿ ಆಕೆಯ ಜೀವನವು ಆಕೆಯ ಬಗ್ಗೆ ಚಿತ್ರಮಾಡಬೇಕೆಂಬ ಕಠಿಣ ನಿರ್ಧಾರಕ್ಕೆ ಕಾರಣವಾಗಿತ್ತು. ಆಕೆ ನನ್ನ ಸ್ನೇಹಿತೆ, ಮಾರ್ಗದರ್ಶಕಿಯಾಗಿದ್ದಳು. ಆಕೆ ನನ್ನ ಹತ್ತಿರದಲ್ಲಿಲ್ಲ ಎಂದು ನಾನು ಇನ್ನೂ ಅರ್ಥಮಾಡಿಕೊಳ್ಳಬೇಕಾಗಿದೆ. ಚಿತ್ರ ಮಾಡುವುದು ಎಂದರೆ, ಆ ಆಘಾತಕಾರಿ ನೆನಪುಗಳಿಗೆ ಹಿಂತಿರುಗುವುದು. ಆದರೆ, ನ್ಯಾಯ ಮತ್ತು ಜನರ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುವಾಗ ಯಾವುದೇ ಭಯವಿಲ್ಲದ ಆಕೆಯ ಕಥೆಯನ್ನು ನಾನು ಹೇಳಲೇಬೇಕು ಎಂದು ನಾನು ಭಾವಿಸಿದ್ದೇನೆ” ಎಂದು ಕವಿತಾ ಲಂಕೇಶ್ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

2000 ರಲ್ಲಿ ನಮ್ಮ ತಂದೆಯ ಪ್ರಕಾಶನ ಲಂಕೇಶ್ ಪತ್ರಿಕೆಯ ಜವಾಬ್ದಾರಿಯನ್ನು ಗೌರಿ ವಹಿಸಿಕೊಂಡಿರು. ನಂತರದ ಅವರ ಜೀವನ ಮತ್ತು ಅವರ ಕ್ರಿಯಾಶೀಲತೆಯನ್ನು ಈ ಚಿತ್ರ ಸೆರೆಹಿಡಿಯುತ್ತದೆ. ಸಾಕ್ಷ್ಯಚಿತ್ರವು ನೆದರ್ಲ್ಯಾಂಡ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ಪ್ರದರ್ಶನಗೊಳ್ಳುವ ಸಾಧ್ಯತೆಯಿದೆ.

ಸೆಪ್ಟೆಂಬರ್ 5, 2017 ರ ಸಂಜೆ, ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯಲ್ಲಿ ಗೌರಿ ಹತ್ಯೆಯಾದರು. ಆಗಿನ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವು ಸ್ಥಾಪಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) 18 ಆರೋಪಿಗಳನ್ನು ಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆ ಆರೋಪಿಗಳು ಬಲಪಂಥೀಯ ಗುಂಪುಗಳಿಗೆ ನಿಷ್ಠರಾಗಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವರದಿ ಮಾಡಿದ್ದಾರೆ. ಅವರ ಮೇಲೆ ಕಠಿಣ ಕೋಕಾ ಪ್ರಕರಣವನ್ನು ಹೇರಲಾಗಿದೆ. ಕರ್ನಾಟಕ ಹೈಕೋರ್ಟ್ ಒಬ್ಬ ಆರೋಪಿ ಮೇಲಿನ ಕೋಕಾ ಪ್ರಕರಣ ರದ್ದುಗೊಳಿಸಲು ಮುಂದಾಗಿತ್ತು. ಆಗ ಕವಿತಾ ಲಂಕೇಶ್‌ರವರು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಅದಕ್ಕೆ ತಡೆ ತಂದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...