Homeಮುಖಪುಟರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಶಾಲಾ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಕೃತ್ಯಕ್ಕೆ ಸಹಾಯ ಮಾಡಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರು ಸೇರಿದಂತೆ 15 ಸಿಬ್ಬಂದಿಗಳ ವಿರುದ್ದ ರಾಜಸ್ಥಾನ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. 

ದೌರ್ಜನ್ಯಕ್ಕೆ ತುತ್ತಾದ ವಿದ್ಯರ್ಥಿಯರು  3, 4, 6 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ತನ್ನ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇತರ ಶಿಕ್ಷಕರು ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದಾರೆ. ಇಬ್ಬರು ಮಹಿಳಾ ಶಿಕ್ಷಕರು ಆ ಕೃತ್ಯದ ವಿಡಿಯೋಗಳನ್ನು ಕೂಡ ಮಾಡಿದ್ದಾರೆ” ಎಂದು 10ನೇ ತರಗತಿಯ ಸಂತ್ರಸ್ತ ವಿದ್ಯಾರ್ಥಿನಿ ದೂರಿದ್ದಾರೆ.

ಈ ಕೃತ್ಯದ ಬಗ್ಗೆ ಸಂತ್ರಸ್ತೆಯೊಬ್ಬರು ಮಹಿಳಾ ಶಿಕ್ಷಕರಿಗೆ ದೂರು ನೀಡಿದಾಗ, ಅವರೂ ಕೂಡ ಬಾಲಕಿಗೆ ಶಾಲಾ ಶುಲ್ಕ ಮತ್ತು ಪುಸ್ತಕಗಳನ್ನು ಕೊಡಿಸುವುದಾಗಿ ಆಮಿಷವೊಡ್ಡಿದರು ಮತ್ತು ಈ ಬಗ್ಗೆ ಯಾರಿಗೂ ದೂರು ನೀಡದಂತೆ ಕೇಳಿಕೊಂಡರು ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ನಾಲ್ವರು ಸಂತ್ರಸ್ತ ಅಪ್ರಾಪ್ತ ಬಾಲಕಿಯರ ಕುಟುಂಬದ ಸದಸ್ಯರು ಮಂಗಳವಾರ ರಾತ್ರಿ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಲೆಯ ಒಟ್ಟು ಸಿಬ್ಬಂದಿ 15 ಜನರ ವಿರುದ್ದ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿದ್ದಾರೆ” ಎಂದು ಭಿವಾಡಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಮೂರ್ತಿ ಜೋಶಿ ತಿಳಿಸಿದ್ದಾರೆ.

ಪ್ರತಿಕಾರದ ಆರೋಪ?

“ಕಳೆದ ವರ್ಷ ಡಿಸೆಂಬರ್ 17 ರಂದು ಅದೇ ಶಾಲೆಯ ಶಿಕ್ಷಕರೊಬ್ಬರು ದಲಿತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಶಿಕ್ಷಕನನ್ನು ಬಂಧಿಸಿ, ಪ್ರಕರಣದ ಆರೋಪಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿ ಶಿಕ್ಷಕನಿಗೆ ಇತ್ತೀಚೆಗೆ ಜಾಮೀನು ಸಿಕ್ಕಿದೆ. ಈಗ ಹೊಸದಾಗಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬ್ಬಂದಿಗಳೆಲ್ಲರೂ ಆ ಆರೋಪಿ ಶಿಕ್ಷಕನ ವಿರುದ್ಧದ ಸಾಕ್ಷಿಯಾಗಿ ಹೇಳಿಕೆ ನೀಡಿದ್ದವರೇ ಆಗಿದ್ದಾರೆ. ಹೀಗಾಗಿ, ಇತ್ತೀಚೆಗೆ ದಾಖಲಾದ ಎಫ್‌ಐಆರ್‌ಗಳ ಹಿಂದೆ ಆತನ ಕೈವಾಡವಿದೆಯೇ ಎಂದು ಅನುಮಾನಿಸಲಾಗಿದೆ. ಅದಕ್ಕಾಗಿ, ನಾವು ಸಂಭವನೀಯ ಸಾಕ್ಷಿ, ಕಿರುಕುಳದ ಆಯಾಮವನ್ನು ಸಹ ತನಿಖೆ ಮಾಡುತ್ತಿದ್ದೇವೆ” ಎಂದು ಜೋಶಿ ಹೇಳಿದ್ದಾರೆ.

“ಇತ್ತೀಚಿನ ಪ್ರಕರಣವನ್ನು ಪ್ರತ್ಯೇಕವಾಗಿ ನೋಡಲಾಗುವುದಿಲ್ಲ. ಏಕೆಂದರೆ ಎಲ್ಲಾ ಆರೋಪಿಗಳು ತಮ್ಮ ಮಾಜಿ ಸಹೋದ್ಯೋಗಿಯ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ. ಆ ಆರೋಪಿ ಶಿಕ್ಷಕ ನಿನ್ನೆ ಎಫ್‌ಐಆರ್ ದಾಖಲಿಸಲು ಬಾಲಕಿಯರ ಪೋಷಕರನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾನೆ. ಆತ ಪೊಲೀಸ್ ಠಾಣೆಗೆ ಪ್ರವೇಶಿಸಲಿಲ್ಲ. ಆದರೆ ಹೊರಗೆ ಕಾಯುತ್ತಿದ್ದ. ಇದು ಅನುಮಾನವನ್ನು ಹುಟ್ಟುಹಾಕಿದ್ದು, ನೈಜವಾಗಿ ಅಪರಾಧ ನಡೆದಿದೆಯೇ ಎಂಬುದನ್ನೂ ಒಳಗೊಂಡಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಪಿ ಜೋಶಿ ತಿಳಿಸಿದ್ದಾರೆ.

ಈವರೆಗೆ ಯಾರನ್ನೂ ಬಂಧಿಸಿಲ್ಲ. ಐಪಿಸಿ ಸೆಕ್ಷನ್‌ಗಳು ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಜವಾಗಿಯೂ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಸಂಭವವೂ ಇದೆ. ಹಿಂದಿನ ಆರೋಪಿ ಶಿಕ್ಷಕ ಮತ್ತು ಹೀಗಿನ ಆರೋಪಿ ಶಿಕ್ಷಕರೆಲ್ಲಾ ಕೂಡಿಯೇ ವಿದ್ಯಾರ್ಥಿನಿಗಳ ಮೇಲೆ ಅತ್ಯಾಚಾರ ಎಸಗಿರುವ ಸಂಭವವೂ ಇದೆ. ತಾನು ಮಾತ್ರ ಸಿಕ್ಕಿಬಿದ್ದಿದ್ದು, ಉಳಿದವರು ತನ್ನ ವಿರುದ್ಧ ಸಾಕ್ಷಿ ಹೇಳಿದ್ದಾರೆ ಎಂದು ಆತ ಎಲ್ಲರ ಮೇಲೆ ದೂರು ನೀಡುವಂತೆ ಒತ್ತಾಯಿಸಿರುವ ಅನುಮಾನಗಳಿವೆ. ಹಾಗಾಗಿ ಈ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ಪರಿಗಣಿಸಿ ಆರೋಪಿಗಿಗಳಿಗೆ ಶಿಕ್ಷೆ ಆಗುವಂತೆ ಮತ್ತು ಈ ರೀತಿಯ ಪ್ರಕರಣಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕಿದೆ.


ಇದನ್ನೂ ಓದಿ: ವಾರಣಾಸಿಯಲ್ಲಿ ಹೇಯ ಕೃತ್ಯ: 3 ನೇ ತರಗತಿ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...