Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ನಾಗಾಲ್ಯಾಂಡ್ ಹತ್ಯಾಕಾಂಡ-‘AFSPA ನೆರಳಿನಲ್ಲಿ ಶಾಂತಿ ಮಾತುಕತೆ ಇಲ್ಲ’: ಮಾಜಿ ಬಂಡಾಯ ನಾಗಾ ಸಂಘಟನೆ

ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ‘ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ’ ಎಂದು NSCN-IM ಬಣ್ಣಿಸಿದೆ

- Advertisement -
- Advertisement -

ನಾಗಾ ರಾಜಕೀಯ ಸಂವಾದದಲ್ಲಿ ಒಕ್ಕೂಟ ಸರ್ಕಾರದೊಂದಿಗೆ ಪ್ರಮುಖ ಸಮಾಲೋಚಕರಾಗಿರುವ, “ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ಇಸಾಕ್‌‌ ಮುಯಿವಾ”( NSCN-IM) “AFSPA ‘ನೆರಳಿನಲ್ಲಿ’ ಯಾವುದೇ ಶಾಂತಿ ಮಾತುಕತೆ ಸಾಧ್ಯವಿಲ್ಲ” ಎಂದು ಬುಧವಾರ ಹೇಳಿದೆ. ಮಾಜಿ ಬಂಡುಕೋರ ಗುಂಪು ಕೂಡಾ ಅಗಿರುವ NSCN-IM, ಸಂಸತ್ತಿನಲ್ಲಿ ಅಮಿತ್ ಶಾ ಅವರು ಬಂಡಾಯ ನಿಗ್ರಹ ಕಾರ್ಯಾಚರಣೆಯ ಬಗ್ಗೆ ನೀಡಿದ ಹೇಳಿಕೆಯನ್ನು “ಬೇಜವಾಬ್ದಾರಿ” ಎಂದು ಬಣ್ಣಿಸಿದೆ.

“AFSPA ನೆರಳಿನಲ್ಲಿ ಯಾವುದೇ ರಾಜಕೀಯ ಮಾತುಕತೆಗಳು ಅರ್ಥಪೂರ್ಣವಾಗುವುದಿಲ್ಲ. ಮಾನವ ಘನತೆಯನ್ನು ಉಳಿಸಿಕೊಳ್ಳಲಿ, ನಂತರ ನಾಗಾ ರಾಜಕೀಯ ಶಾಂತಿ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಲಿ” ಎಂದು NSCN-IM ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA

ಡಿಸೆಂಬರ್ 4 ರಂದು ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕನಿಷ್ಠ 14 ಕಲ್ಲಿದ್ದಲು ಗಣಿ ಕಾರ್ಮಿಕರ ಹತ್ಯೆಯ ಕುರಿತು ಸಂಸತ್ತಿನಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು NSCN-IM ತೀವ್ರವಾಗಿ ಖಂಡಿಸಿದೆ.

“ಇಂತಹ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರು ಸಾಮಾಜಿಕ-ರಾಜಕೀಯ ಏರುಪೇರುಗಳನ್ನು ತಣ್ಣಗಾಗಿಸಲು ರಾಜಕೀಯ ಪ್ರಬುದ್ಧತೆ ಮತ್ತು ಪ್ರಾಯೋಗಿಕ ರಾಜನೀತಿಯನ್ನು ತೋರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ವಿಪರ್ಯಾಸವೆಂದರೆ, ಅವರು ಪ್ಯಾರಾ ಕಮಾಂಡೋಗಳ ಹಿಂದೆ ನಿಂತು ಜ್ವಲಂತ ಸಮಸ್ಯೆಗೆ ಇಂಧನವನ್ನು ಸುರಿದರು” ಎಂದು ಮಾಜಿ ಬಂಡಾಯ ಗುಂಪು ಹೇಳಿದೆ.

ಅಮಿತ್‌ ಶಾ ಅವರ ಹೇಳಿಕೆಯನ್ನು “ನಾಗ ಜನಾಂಗದ ಗಾಯಗಳಿಗೆ ಉಪ್ಪು ಮತ್ತು ಮೆಣಸಿನಕಾಯಿಯನ್ನು ಉಜ್ಜಿದಂತೆ” ಎಂದು NSCN-IM ಬಣ್ಣಿಸಿದ್ದು, ಕೊಲ್ಲುವ ಉದ್ದೇಶದಿಂದಲೇ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಭಾರತ ಸರ್ಕಾರವು ನಾಗಾ ಜನರಿಗೆ ನ್ಯಾಯವನ್ನು ಮಾಡಲು ಬಯಸಿದರೆ, AFSPA ಅನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ದ ಸರಿಯಾದ ಕಾನೂನು ಕ್ರಮಕ್ಕಾಗಿ ತನಿಖೆಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು NSCN-IM ವಾದಿಸಿದೆ.

ಮಾಧ್ಯಮಗಳ ದೃಷ್ಟಿಯಲ್ಲಿ ಮೃತಪಟ್ಟವರು ಉಗ್ರಗಾಮಿಗಳು ಎಂಬ ಭಾವನೆಯನ್ನು ಮೂಡಿಸಲು ಮೃತಪಟ್ಟ ನಾಗಾ ಜನರ ಮೃತದೇಹಕ್ಕೆ ಮಿಲಿಟರಿ ಉಡುಗೆಯನ್ನು ಸೇನೆಯು ಧರಿಸುವಲ್ಲಿ ಹೊರಟಿತ್ತು, ಅದೃಷ್ಟವಶಾತ್, ಅವರು ತಮ್ಮ ಯೋಜನೆಯಲ್ಲಿ ಯಶಸ್ವಿಯಾಗುವ ಮೊದಲು ಗ್ರಾಮಸ್ಥರಿಂದ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು ಎಂದು NSCN-IM ಹೇಳಿಕೆ ನೀಡಿದೆ.

ನಾಗಾ ರಾಜಕೀಯ ಸಮಸ್ಯೆಯ ಪರಿಹಾರಕ್ಕಾಗಿ 1997 ರಿಂದ NSCN-IM ಒಕ್ಕೂಟ ಸರ್ಕಾರದೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಗಸ್ಟ್ 2015 ರಲ್ಲಿ ಅವುಗಳ ಸಮಸ್ಯೆಯ ಪರಿಹಾರ ಕಾರ್ಯದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆದಾಗ್ಯೂ, ನಾಗಾಗಳಿಗೆ ಪ್ರತ್ಯೇಕ ಧ್ವಜ ಮತ್ತು ಸಂವಿಧಾನದ ಬೇಡಿಕೆಯನ್ನು ಈಡೇರಿಸುವಲ್ಲಿ ಯಾವುದೇ ಪರಿಹಾರ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...