Homeಕರೋನಾ ತಲ್ಲಣಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪತ್ತೆಯಾದ ಮೊದಲ ಒಮೈಕ್ರಾನ್‌ ಸೋಂಕಿತ 33 ವರ್ಷದ ಮೆರೈನ್ ಎಂಜಿನಿಯರ್ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಅವರ ಕೊರೊನಾ ಪರೀಕ್ಷೆಯು ನೆಗೆಟಿವ್‌ ಬಂದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಇಂದು ವರದಿ ಮಾಡಿದೆ. ಮುಂಬೈ ಸಮೀಪದ ಕಲ್ಯಾಣ್-ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ನಿವಾಸಿಯಾಗಿರುವ ವ್ಯಕ್ತಿಯು ಕೊರೊನಾ ಲಸಿಕೆಯನ್ನು ಪಡೆದಿರಲಿಲ್ಲ.

ನವೆಂಬರ್ ಕೊನೆಯ ವಾರದಲ್ಲಿ ಮುಂಬೈಗೆ ತಲುಪುವ ಮೊದಲು ಅವರು ದಕ್ಷಿಣ ಆಫ್ರಿಕಾದಿಂದ ದುಬೈ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅವರನ್ನು ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಏಳು ದಿನಗಳ ಕಾಲ ಹೋಮ್ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರು ಲಸಿಕೆ ಪಡೆದುಕೊಳ್ಳಲು ಪ್ರಯತ್ನಿಸಿದ್ದರಾದರೂ, ಖಾಸಗಿ ವ್ಯಾಪಾರಿ ಹಡಗಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಅವರಿಗೆ ಅದು ಸಾಧ್ಯವಾಗಿರಲಿಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ ಅವರು ಭಾರತದಿಂದ ತೆರಳಿದ್ದರು. ಆ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮುಂಚೂಣಿ ಕೆಲಸಗಾರರಿಗೆ ಮಾತ್ರ ಕೊರೊನಾ ಲಸಿಕೆ ಲಭ್ಯವಿತ್ತು.

ಇದನ್ನೂ ಓದಿ:ಮಾರ್ಚ್‌ ಹೊತ್ತಿಗೆ ಮಹಾರಾಷ್ಟ್ರದಲ್ಲಿ BJP ಸರ್ಕಾರ ರಚಿಸಲಿದೆ: ಒಕ್ಕೂಟ ಸರ್ಕಾರದ ಸಚಿವ

ಮಹಾರಾಷ್ಟ್ರದಲ್ಲಿ ಆರೋಗ್ಯ ಅಧಿಕಾರಿಗಳು ಅವರ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷಾ ವರದಿಯಲ್ಲಿ ಅವರಿಗೆ ಒಮೈಕ್ರಾನ್‌ ಸೋಂಕಿರುವುದು ದೃಢವಾಗಿತ್ತು. ನಂತರ ಅವರನ್ನು ಕಲ್ಯಾಣ್ ಪಟ್ಟಣದ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ಆಯುಕ್ತ ಡಾ. ವಿಜಯ್ ಸೂರ್ಯವಂಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಕಾಕತಾಳಿಯವಾಗಿ, ಇಂದು ಅವರ ಜನ್ಮದಿನವಾಗಿತ್ತು” ಎಂದು ಆಯುಕ್ತರು ಹೇಳಿದ್ದಾರೆ.

“ಅವರ ಪರಿಕ್ಷಾ ವರದಿ ನೆಗೆಟಿವ್‌ ಬಂದಿರುವುದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಸ್ಟ್ಯಾಂಡರ್ಡ್ ಪ್ರೋಟೋಕಾಲ್ ಪ್ರಕಾರ, ಅವರ ಎರಡು ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಯಿತು, ಅವು ಎರಡರಲ್ಲೂ ನೆಗೆಟಿವ್ ಬಂದಿದೆ. ಈಗ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಮತ್ತು ಯಾವುದೇ ರೋಗಲಕ್ಷಣಗಳಿಲ್ಲ” ಎಂದು ಆಯುಕ್ತರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಇದುವರೆಗೆ 10 ಒಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿ ಆಗಿದೆ.

ಅಂತರಾಷ್ಟ್ರೀಯ ಪ್ರಯಾಣಿಕರಿಗೆ, ವಿಶೇಷವಾಗಿ “ಅಪಾಯದಲ್ಲಿರುವ” ದೇಶಗಳಿಂದ ಬರುವ ಪ್ರಯಾಣಿಕರಿಗೆ ಮಹಾರಾಷ್ಟ್ರವು ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಚಿವ ಆದಿತ್ಯ ಠಾಕ್ರೆ ಅವರು ಬೂಸ್ಟರ್ ಶಾಟ್‌ಗಳನ್ನು ಅನುಮತಿಸಲು, ಲಸಿಕೆ ಅಂತರವನ್ನು ಕಡಿಮೆ ಮಾಡಲು ಮತ್ತು ಲಸಿಕೆಗಳ ಕಟ್-ಆಫ್ ವಯಸ್ಸನ್ನು 15 ಕ್ಕೆ ಇಳಿಸಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...