Homeಫ್ಯಾಕ್ಟ್‌ಚೆಕ್Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಡಿಸೆಂಬರ್ 08 ರಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ರವರಿದ್ದ IAFನ Mi-17 V5 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್‌ನಲ್ಲಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಬಿಪಿನ್‌ ರಾವತ್, ಅವರ ಪತ್ನಿ ಸೇರಿ ಒಟ್ಟು 13 ಜನ ಮೃತಪಟ್ಟಿದ್ದಾರೆ. ಈ ಕುರಿತು ತನಿಖೆಗೆ ವಾಯುಸೇನೆ ಆದೇಶಿಸಿದೆ.

ಇಂತಹ ಸಂದರ್ಭದಲ್ಲಿ ದೇಶ-ವಿದೇಶದಾದ್ಯಂತ ಸಂತಾಪ ಸೂಚಿಸಲಾಗುತ್ತಿದೆ. ಅದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತ ಸಂಭವಿಸಿದ ಲೈವ್ ವಿಡಿಯೋ ಎಂದು ಸಂಬಂಧವಿಲ್ಲದ ವಿಡಿಯೋಗಳು ಸಹ ಹರಿದಾಡುತ್ತಿವೆ.

ಟ್ವಿಟ್ಟರ್ ಬಳಕೆದಾರರಾದ Sir Don Bradman ಆಕಾಶದಲ್ಲಿ ಹೆಲಿಕಾಪ್ಟರ್ ಒಂದಕ್ಕೆ ಬೆಂಕಿ ಹೊತ್ತಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಮಾಡಿ “ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ” ಎಂದು ಬರೆದಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಲಕ್ಷ ಜನರು ವೀಕ್ಷಿಸಿದ್ದಾರೆ. ಟ್ವಿಟರ್ ಬಳಕೆದಾರರು @MarwadiClub ಸಹ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿಯೂ ವಿಡಿಯೋ ಹರಿದಾಡಿದೆ.

ಫ್ಯಾಕ್ಟ್‌ಚೆಕ್

ಸೂಲೂರು ವಾಯುನೆಲೆಯಿಂದ ಟೇಕಾಫ್ ಆದ ಐಎಎಫ್ ಹೆಲಿಕಾಪ್ಟರ್ ವೆಲ್ಲಿಂಗ್ಟನ್‌ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ತೆರಳುತ್ತಿರುವಾಗ ಪತನಗೊಂಡು ನೆಲಕ್ಕೆ ಅಪ್ಪಳಿಸಿದ ನಂತರ ಬೆಂಕಿಗೆ ಆಹುತಿಯಾಗಿದೆ ಎಂದು ದಿ ಹಿಂದೂ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಮೇಲಿನ ವಿಡಿಯೋದಲ್ಲಿ ಹೆಲಿಕಾಪ್ಟರ್ ಆಕಾಶದಲ್ಲಿರುವಾಗಲೇ ಬೆಂಕಿ ಹೊತ್ತಿಕೊಂಡಿರುವುದರಿಂದ ಈ ಘಟನೆಗೆ ಸಂಬಂಧಿಸಿಲ್ಲ ಎಂದು ತಿಳಿಯಬಹುದು.

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಮೂಲಕ ಹುಡುಕಿದಾಗ ಈ ವೀಡಿಯೊವು ಫೆಬ್ರವರಿ 2020 ರ ಹಿಂದಿನದು ಎಂದು ತಿಳಿದುಬಂದಿದೆ. ಇದನ್ನು ಅಥೆನ್ಸ್ ಮೂಲದ ಪತ್ರಕರ್ತ ಬಾಬಕ್ ತಘ್ವೇ ಪೋಸ್ಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಪ್ರಕಾರ, ಸಿರಿಯಾದ ಅರಬ್ ಏರ್ ಫೋರ್ಸ್‌ನ Mi-17 ಅನ್ನು ಟರ್ಕಿಶ್ ಸೇನೆಯು ಸಿರಿಯಾದ ಅಲ್-ನೈರಾಬ್ ಬಳಿ ಹೊಡೆದುರುಳಿಸಿದೆ ಎಂದು ವಿವರಿಸಲಾಗಿದೆ.

ಹಾಗಾಗಿ ಈ ವಿಡಿಯೋ ಇತ್ತೀಚಿನದ್ದಲ್ಲ ಎಂದು ಸ್ಪಷ್ಟವಾಗಿ ತಿಳಿದುಬರುತ್ತದೆ.

ಮಾಧ್ಯಮ ಸಂಸ್ಥೆ ಎನ್‌ಡಿಟಿವಿ ಬಿಪಿನ್ ರಾವತ್‌ರವರಿದ್ದ ಹೆಲಿಕಾಪ್ಟರ್ ಪತನಕ್ಕೂ ಮುಂಚೆ ಹಾರುವುದರ ಸಣ್ಣ ಅಧಿಕೃತ ವಿಡಿಯೋ ತುಣುಕನ್ನು ಬಿಡುಗಡೆ ಮಾಡಿವೆ. ಅದನ್ನು ಇಲ್ಲಿ ನೋಡಬಹುದು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...