Homeಮುಖಪುಟಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

- Advertisement -
- Advertisement -

ಐತಿಹಾಸಿಕ ರೈತ ಚಳವಳಿ ಗೆಲುವು ಸಾಧಿಸಿದೆ. ಕೃಷಿ ಕಾಯ್ದೆಗಳು ರದ್ದಾದ ನಂತರ ಎಂಎಸ್‌ಪಿ ಸೇರಿದಂತೆ ರೈತರ ಇತರ ಹಕ್ಕೊತ್ತಾಯಗಳ ಎದುರು ಮೋದಿ ಸರ್ಕಾರ ಮಂಡಿಯೂರಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ತೆರೆ ಎಳೆಯುವುದಾಗಿ ರೈತ ಹೋರಾಟದ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಆದರೆ ಎಂಎಸ್‌ಪಿ ಸಿಗುವವರೆಗೂ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಚಳವಳಿ ನಿರಂತರವಾಗಿ ನಡೆಯಲಿದ್ದ, ಮುಂದಕ್ಕೂ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ದೆಹಲಿ ಗಡಿಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ಸ್ಥಳಗಳಲ್ಲಿನ ಪ್ರತಿಭಟನಾ ಧರಣಿಗಳನ್ನು ತೆರವುಗೊಳಿಸುವುದಾಗಿ ಎಸ್‌ಕೆಎಂ ಔಪಚಾರಿಕವಾಗಿ ಘೋಷಿಸುತ್ತದೆ. ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

ಈ ಜಯವನ್ನು 715 ಹುತಾತ್ಮ ರೈತರಿಗೆ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅರ್ಪಿಸುತ್ತೇವೆ. ಹೋರಾಟದಲ್ಲಿ ಜೊತೆಗೂಡಿದ ಬೆಂಬಲಿಸಿದ ದೇಶದ ಎಲ್ಲಾ ರೈತರು ಮತ್ತು ನಾಗರೀಕರನ್ನು ಅಭಿನಂದಿಸುತ್ತೇವೆ. ಪ್ರತಿಭಟನೆ ವೇಳೆ ತೊಂದರೆಗೊಳಗಾದವರಲ್ಲಿ ಕ್ಷಮೆಯಾಚಿಸುತ್ತೇವೆ. ಶಾಂತಿ, ತಾಳ್ಮೆ ಗೆಲುವಿನ ಸೂತ್ರವಾಗಿದ್ದ, ಮುಂದೆಯೂ ಅದನ್ನು ಕಾಪಿಟ್ಟುಕೊಳ್ಳಲಾಗುವುದು ಎಂದು ಎಸ್‌ಕೆಎಂ ಹೇಳಿದೆ.

ಕೇಂದ್ರ ಸರ್ಕಾರ ರೈತರಿಗೆ ಅಧಿಕೃತ ಪತ್ರ ಬರೆದಿದೆ. ಅದರಲ್ಲಿ ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುತ್ತವೆ. ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೇಸುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಏಜೆನ್ಸಿಗಳು ಒಪ್ಪಿಕೊಂಡಿವೆ. ರೈತರಿಗೆ ಪರಿಹಾರ ನೀಡಲು ಹರಿಯಾಣ, ಯುಪಿ ಸರ್ಕಾರಗಳು ಸಿದ್ಧವಾಗಿವೆ. ರೈತ ಸಂಘಟನೆಗಳೊಂದಿಗೆ ಚರ್ಚಿಸದೆ ವಿದ್ಯುತ್ ಬಿಲ್ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಚಳುವಳಿ ಮುಗಿದಿಲ್ಲ. ಎಂಎಸ್‌ಪಿ ಮತ್ತು ಲಖಿಂಪುರ ಮತ್ತಿತರ ಸಮಸ್ಯೆಗಳ ಕುರಿತು ಹೋರಾಟ ಮುಂದುವರಿಯಲಿದೆ. ಜನವರಿ 15 ರಂದು SKM ಮತ್ತೆ ಸಭೆ ಸೇರಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮುಂದುವರಿಯುತ್ತದೆ ಎಂದು ಘೋಷಿಸಿದೆ.


ಇದನ್ನೂ ಓದಿ; ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...