Homeಮುಖಪುಟಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

ಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಲಿದೆ. ಆಡಳಿತರೂಢ ಪಕ್ಷವಾದ ಬಿಜೆಪಿ ಅಭಿವೃದ್ದಿ ಹೆಸರಲ್ಲಿ ಮತ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷವು ಮತ್ತೆ ಹಿಂದುತ್ವದ ಬೆನ್ನು ಬಿದ್ದಿದೆ. ಗುರುವಾರ ಬಿಜೆಪಿ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಭೂ ವಿವಾದದ ವಿಷಯವನ್ನು ಪ್ರಸ್ತಾಪಿಸಿ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಕಾನೂನನ್ನು ರದ್ದುಗೊಳಿಸುವ ಕಾನೂನಿಗಾಗಿ ಒತ್ತಾಯಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಹರನಾಥ್ ಸಿಂಗ್ ಯಾದವ್ ಅವರು ‘‘1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಕಾಯಿದೆಯು, ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿರುವ ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತದೆ.

ಇದನ್ನೂ ಓದಿ:ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಈ ಕಾಯಿದೆಯು ಅಯೋಧ್ಯೆಯ ಬಾಬರಿ ಮಸೀದಿ ಪ್ರಕರಣಕ್ಕೆ ವಿನಾಯಿತಿ ನೀಡುತ್ತದೆಯಾದರೂ, ಇತರ ಯಾವುದೇ ಧಾರ್ಮಿಕ ಸ್ಥಳಗಳ ಮೇಲಿನ ನ್ಯಾಯಾಲಯಗಳಲ್ಲಿನ ಎಲ್ಲಾ ಕಾನೂನು ವಿವಾದಗಳನ್ನು 1991 ರ ಕಾಯಿದೆಯ ಪ್ರಕಾರ ಇತ್ಯರ್ಥಗೊಳಿಸಬೇಕಾಗಿದೆ.

“ಈ ನಿಬಂಧನೆಯು ಸಮಾನತೆಯ ಹಕ್ಕಿನ ಸಾಂವಿಧಾನಿಕ ನಿಬಂಧನೆಯನ್ನು ಮಾತ್ರವಲ್ಲದೆ ಸಾಂವಿಧಾನಿಕ ಪೀಠಿಕೆಯ ಭಾಗವಾಗಿರುವ ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ. ಯಾವುದೇ ನಾಗರಿಕರು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬಾರದು ಎಂದು ಈ ಕಾನೂನು ಹೇಳುವುದು ವಿಚಿತ್ರವಾಗಿದೆ. ಈ ಕಾನೂನನ್ನು ಪ್ರಶ್ನಿಸುವಂತಿಲ್ಲ” ಎಂದು ಹರನಾಥ್ ಸಿಂಗ್‌ ಹೇಳಿದ್ದಾರೆ.

“ವಿದೇಶಿ ಆಕ್ರಮಣಕಾರರು ಕೃಷ್ಣ ಜನ್ಮಭೂಮಿ ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ಬಲವಂತವಾಗಿ ಆಕ್ರಮಿಸಿಕೊಂಡಿರುವುದಕ್ಕೆ ಕಾನೂನು ‘ಕಾನೂನು ಮಾನ್ಯತೆ’ ನೀಡುತ್ತದೆ. ಈ ಅನಿಯಂತ್ರಿತ ಮತ್ತು ಅಸಂವಿಧಾನಿಕ ಕಾನೂನು ಹಿಂದೂಗಳು, ಜೈನರು, ಸಿಖ್ ಮತ್ತು ಬೌದ್ಧರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಕಸಿದುಕೊಂಡಿದೆ. ಜೊತೆಗೆ, ಈ ಕಾನೂನು ಭಗವಾನ್ ರಾಮ ಮತ್ತು ಭಗವಾನ್ ಕೃಷ್ಣನ ನಡುವೆ ತಾರತಮ್ಯವನ್ನು ಮಾಡುತ್ತದೆ. ಆದರೆ ಇವರಿಬ್ಬರೂ ವಿಷ್ಣುವಿನ ಅವತಾರಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

“ಒಂದೇ ಕಾರ್ಯಗಳು ಮತ್ತು ಸನ್ನಿವೇಶಗಳಿಗೆ ಎರಡು ಕಾನೂನುಗಳು ಇರುವಂತಿಲ್ಲ. ನಾಗರಿಕರಿಗೆ ನ್ಯಾಯಾಲಯಗಳ ಬಾಗಿಲುಗಳನ್ನು ಮುಚ್ಚಲು ಸಾಧ್ಯವಿಲ್ಲ. ಈ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯು ಕೇವಲ ಅಸಂವಿಧಾನಿಕ ಮಾತ್ರವಲ್ಲ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರ ಧಾರ್ಮಿಕ ಭಾವನೆಗಳ ವಿರುದ್ಧದ ಕ್ರೌರ್ಯವಾಗಿದೆ. ಈ ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸಂಸದ ಈ ಪ್ರಸ್ತಾವನೆಗೆ ವಿರೋಧ ಪಕ್ಷದ ಕೆಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆರ್‌ಜೆಡಿಯ ಮನೋಜ್ ಕುಮಾರ್ ಝಾ, “ಸೌಹಾರ್ದತೆ ಮತ್ತು ಸಾಮರಸ್ಯದ ಕಲ್ಪನೆಯನ್ನು ರಕ್ಷಿಸಲು ಸಂಸತ್ತಿನಲ್ಲಿ 1991 ರ ಕಾಯಿದೆಯನ್ನು ಅಂಗೀಕರಿಸಲಾಯಿತು. ಬಿಜೆಪಿ ಸಂಸದರು ಪಂಡೋರಾ ಪೆಟ್ಟಿಗೆಯನ್ನು ತೆರೆದಿದ್ದಾರೆ. ಧಾರ್ಮಿಕ ಘರ್ಷಣೆಗಳ ಹೆಸರಿನಲ್ಲಿ ರಾಷ್ಟ್ರವು ಸಾಕಷ್ಟು ನಷ್ಟವನ್ನು ಅನುಭವಿಸಿದೆ, ಭಾರತದ ಸಾಮಾಜಿಕ ರಚನೆಯನ್ನು ಕದಡಬೇಡಿ” ಎಂದು ಹೇಳಿದ್ದಾರೆ.

ಅಯೋಧ್ಯೆ ಮತ್ತು ವಾರಣಾಸಿ ಮಾದರಿಯಲ್ಲಿ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಳೆದ ವಾರ ಟ್ವೀಟ್ ಮಾಡಿದ್ದನ್ನು ಅನುಸರಿಸಿ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾವನೆಯಾಗಿದೆ.

ಇದನ್ನೂ ಓದಿ:ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾದಲ್ಲಿ ಪ್ರಮುಖವಾದ ಶಾಹಿ ಈದ್ಗಾ ಮಸೀದಿ ಇದ್ದು, ಅದರ ಪಕ್ಕವೇ ದೇವಸ್ಥಾನವಿದೆ. ಮಸೀದಿಯ ಜಾಗ ಕೃಷ್ಣನ ಜನ್ಮಸ್ಥಳ ಎಂದು ಬಿಜೆಪಿ ಬೆಂಬಲಿತ ಸಂಘಟನೆಳು ವಾದಿಸುತ್ತಿವೆ. ಹೀಗಾಗಿ ಮಸೀದಿಯು ವರ್ಷಗಳಿಂದ ಕಾನೂನು ಹೋರಾಟದ ಕೇಂದ್ರವಾಗಿದೆ.

ಈ ಹಿಂದೆ ದೀರ್ಘಕಾಲ ಇದ್ದ ವಿವಾದವನ್ನು ಅಕ್ಟೋಬರ್ 1968 ರಲ್ಲಿ ನ್ಯಾಯಾಲಯವು ಅದನ್ನು ನಿರ್ವಹಿಸುವ ಟ್ರಸ್ಟ್ ಮತ್ತು ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಘದ ನಡುವೆ ಒಪ್ಪಂದ ನಡೆಸಿ ವಿವಾದವನ್ನು ಇತ್ಯರ್ಥ ಮಾಡಲಾಗಿತ್ತು. ಆದರೆ ಅಯೋಧ್ಯೆ ಬಾಬರಿ ಮಸೀದಿ ಧ್ವಂಸಗೊಂಡ ನಂತರ ವಿವಾದವನ್ನು ಮತ್ತೆ ಪುನಶ್ಚೇತನಗೊಳಿಸಲಾಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಈ ಒಪ್ಪಂದವನ್ನು ರದ್ದುಗೊಳಿಸಬೇಕು ಮತ್ತು ಮಥುರಾದ ಈದ್ಗಾ ಮತ್ತು ದೇವಾಲಯದ ಸಂಪೂರ್ಣ ಸಂಕೀರ್ಣವನ್ನು ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದೆ.

ಇದನ್ನೂ ಓದಿ:ಕಾಶಿ ಮತ್ತು ಮಥುರಾದಲ್ಲಿ ಇನ್ನೂ ಎರಡು ಉಳಿದಿವೆ ಅವುಗಳನ್ನು ಅಳಿಸಿಹಾಕಬೇಕು: ಕೆ. ಎಸ್. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಡಲು ಕೆಲಸವಿಲ್ಲದ, ಹೇಳಿಕೊಳ್ಳಲು ಸಾಧನೆಗಳಿಲ್ಲದ ಎಲ್ಲದಕ್ಕೂ ಮೀರಿ ಮಾನವ ಕುಲಕ್ಕೆ ರಾಕ್ಷಸರಂತೆ ಕಾಡುತ್ತಿರುವ ದುರುಳರು ಇದನ್ನ ಬಿಟ್ಟು ಇನ್ನೇನು ಮಾಡಲು ಸಾಧ್ಯ.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...