Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...