Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...