Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...