Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...