Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....