Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...