Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...