Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...