Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...