Homeಕರ್ನಾಟಕಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಅಧ್ಯಕ್ಷರಾದ ಮಹೇಶ್ ಜೋಶಿಯವರು ಇತ್ತೀಚೆಗೆ ಧಾರಾವಾಡದಲ್ಲಿ ಸಮಾರಂಭವೊಂದರಲ್ಲಿ ಮಾತನಾಡುತ್ತಾ, “ನಮ್ಮಲ್ಲಿ ಪ್ರದೇಶಗಳಿಗೆ ಅನುಗುಣವಾಗಿ ಉಚ್ಚಾರಣೆ ಬದಲಾಗುತ್ತವೆ. ಆದರೆ ಶುದ್ಧ ಹಾಗೂ ಸ್ಪಷ್ಟ ಕನ್ನಡವನ್ನು ನಾವು ಉಳಿಸಬೇಕು. ಇಡೀ ಜಗತ್ತಿನಲ್ಲಿ ಸಂಸ್ಕೃತ ಹಾಗೂ ಕನ್ನಡ ಭಾಷೆಗಳು ಮಾತ್ರ ಅತ್ಯಂತ ಶುದ್ಧ ಎಂಬ ಕೀರ್ತಿಗೆ ಪಾತ್ರವಾಗಿವೆ. ನಾವು ಅದರ ವೈಶಿಷ್ಟ್ಯವನ್ನು ಕಾಪಾಡಬೇಕಿದೆ” ಎಂದಿದ್ದಾರೆ.

ಮುಂದುವರಿದು, “ರಾಜಧಾನಿ ಬೆಂಗಳೂರಿನಲ್ಲಿ ‘ಅ’ಕಾರ ಹಾಗೂ ‘ಹ’ಕಾರ ವ್ಯತ್ಯಾಸ ತಿಳಿದ ಕನ್ನಡಿಗರು, ಶುದ್ಧ ಕನ್ನಡ ಕನ್ನಡ ಗೊತ್ತಿರುವವರ ಸಂಖ್ಯೆ ಶೇ 26ರಷ್ಟು ಮಾತ್ರ” ಎಂದು ಹೇಳಿರುವುದು ಕನ್ನಡಿಗರ ವಿರೋಧಕ್ಕೆ ಕಾರಣವಾಗಿದೆ. ಕನ್ನಡದಲ್ಲಿ ‘ಹ’ ಎಂಬುದಿಲ್ಲ, ಅದು ಸಂಸ್ಕೃತದಿಂದ ಬಂದ ಪದ ಎಂಬ ಚರ್ಚೆಗಳಿವೆ. ಯಾವುದೇ ಭಾಷೆಯಲ್ಲಿ ಶುದ್ಧ, ಅಶುದ್ಧ ಎಂಬುದಿಲ್ಲ ಎಂದು ಭಾಷಾ ವಿಜ್ಞಾನಿಗಳು, ವಿಚಾರವಂತರು ಹೇಳುತ್ತಲೇ ಬಂದಿದ್ದಾರೆ.

ಜನಪದರ ಭಾಷಾ ಬಳಕೆಯನ್ನು ಅಲ್ಲಗಳೆದು ಶಿಷ್ಟ ಭಾಷೆಯನ್ನೇ ಶುದ್ಧ ಎಂದು ಪ್ರತಿಪಾದಿಸುವವರು ಮಾತ್ರ ಕನ್ನಡದಲ್ಲಿ ‘ಶುದ್ಧ, ಅಶುದ್ಧ’, ‘ಅ’ಕಾರ, ‘ಹ’ಕಾರಗಳ ಉಚ್ಚಾರಣೆ ಇತ್ಯಾದಿಗಳ ಮೇಲೆ ವಿವಾದ ಸೃಷ್ಟಿಸುವುದು ನಡೆಯುತ್ತಲೇ ಇದೆ.

ಕಳೆದ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯೂ ಇಂತಹದ್ದೇ ವಿವಾದಕ್ಕೆ ಕಾರಣವಾಗಿತ್ತು. ಈಗ ಕಸಾಪ ಅಧ್ಯಕ್ಷರು ಶುದ್ಧ ಕನ್ನಡದ ವರಸೆ ಶುರು ಮಾಡಿ, ಟೀಕೆಗೆ ಒಳಗಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ ಆಯೋಜಿಸಿದ್ದಾಗ ಚಿಂತಕರು ‘ನಾನುಗೌರಿ.ಕಾಂ’ ಜೊತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಈ ಅಭಿಪ್ರಾಯಗಳು ಮಹೇಶ್‌ ಜೋಶಿಯವರ ವಿಚಾರಕ್ಕೂ ಅನ್ವಯವಾಗುತ್ತಿರುವುದರಿಂದ ಪರಿಷ್ಕರಿಸಿ ಮರು ಪ್ರಕಟಿಸಲಾಗುತ್ತಿದೆ.

‘ನಾನುಗೌರಿ.ಕಾಂ’ನೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ಚಿಂತಕರಾದ ಡಾ.ಬಂಜಗೆರೆ ಜಯಪ್ರಕಾಶ್‌, ಭಾಷಾತಜ್ಞ ಡಾ.ರಂಗನಾಥ್‌ ಕಂಟನಕುಂಟೆ ಅವರು ಹಂಚಿಕೊಂಡ ವಿಚಾರಗಳು ಇಲ್ಲಿವೆ.


ಇದನ್ನೂ ಓದಿರಿ: ಬರಿದೇ ಬಾರಿಸದಿರು ತಂಬೂರಿ


ಕನ್ನಡದಲ್ಲಿ ಶೇ. 19ರಷ್ಟು ಪದಗಳು ಮಾತ್ರ ಕನ್ನಡದ್ದಾಗಿವೆ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಜೀವಂತ ಭಾಷೆಯೊಳಗೆ ಶುದ್ಧವಾದ ಭಾಷೆ ಎಂಬುದು ಯಾವುದೂ ಇಲ್ಲ. ಜಗತ್ತಿನ ಯಾವುದಾದರೂ ಭಾಷೆ ಮಡಿವಂತಿಕೆಯನ್ನು ಇಟ್ಟುಕೊಂಡರೆ ಆ ಭಾಷೆ ಸಾಯುತ್ತದೆ. ಅದಕ್ಕೆ ಬಹುದೊಡ್ಡ ಉದಾಹರಣೆ ಸಂಸ್ಕೃತ. ಅದು ಸತ್ತಿದೆ. ಸಂಸ್ಕೃತಕ್ಕೆ ಜೀವ ಕೊಡಲಿಕ್ಕೆ ಪ್ರಯತ್ನ ಪಟ್ಟರೂ ಅದು ಗ್ರಂಥಿಕವಾಗಿ ಉಳಿಯುತ್ತದೆ ಹೊರತು, ಮೌಖಿಕವಾಗಿ ಬಳಕೆಗೆ ಬರುವುದಿಲ್ಲ, ಬಳಕೆಗೆ ಬಂದಿದೆ ಎಂದು ಹೇಳುತ್ತಿದ್ದರೆ ಅದು ದೊಡ್ಡ ಸುಳ್ಳು.

ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಕನ್ನಡದಲ್ಲಿ ಇಂದು ಕನ್ನಡ ಶಬ್ದಗಳು ಉಳಿದಿರುವುದು ಶೇ. 19ರಷ್ಟು ಮಾತ್ರ. ಮಿಕ್ಕೆಲ್ಲವೂ ಅನ್ಯಭಾಷೆಯ ಶಬ್ದಗಳಾಗಿವೆ. ಹೇರಳವಾಗಿ ಸಂಸ್ಕೃತದಿಂದ ಕನ್ನಡ ಶಬ್ದಗಳನ್ನು ತೆಗೆದುಕೊಂಡಿದ್ದೇವೆ. ‘ಅನ್ನ’ ಕನ್ನಡ ಅಲ್ಲ, ‘ಸೂರ್ಯ’ ಕನ್ನಡ ಅಲ್ಲ, ‘ಚಂದ್ರ’ ಕನ್ನಡ ಅಲ್ಲ, ‘ಲೋಕ’ ಕನ್ನಡ ಅಲ್ಲ. ಇವೆಲ್ಲವೂ ಸಂಸ್ಕೃತದಿಂದ ಬಂದಿರುವ ಪದಗಳು. ‘ಸುಮಾರು’ ಎನ್ನುವ ಶಬ್ದವೂ ಕನ್ನಡ ಅಲ್ಲ. ‘ಸುಮಾರು’ ಎಂಬ ಶಬ್ದವನ್ನು ಫ್ರೆಂಚ್‌ನಿಂದ ತೆಗೆದುಕೊಳ್ಳಲಾಗಿದೆ. ಪೊಲೀಸ್ ಎಂಬ ಶಬ್ದಕ್ಕೆ ‘ಆರಕ್ಷಕ’ ಎಂದು ಬಳಸುತ್ತಾರೆ. ‘ಆರಕ್ಷಕ’ ಸಂಸ್ಕೃತ ಶಬ್ದ. ‘ಪೊಲೀಸ್‌’ ಇಂಗ್ಲಿಷ್‌ ಶಬ್ದ. ಕನ್ನಡಿಗರಿಗೆ ಗೊತ್ತಿರುವುದು ‘ಪೊಲೀಸ್‌’ ಹೊರತು, ‘ಆರಕ್ಷಕ’ ಅಲ್ಲ. ಕನ್ನಡಿಗರಿಗೆ ಗೊತ್ತಿರುವುದು ‘ಇಂಜಿನಿಯರ್‌ ’ಶಬ್ದವೇ ಹೊರತು, ‘ಅಭಿಯಂತರ’ ಅಲ್ಲ. ಆದ್ದರಿಂದ ‘ಇಂಜಿನಿಯರ್‌’, ‘ಪೊಲೀಸ್‌’, ‘ಕಾಲೇಜ್‌’ ಇಂತಹ ಶಬ್ದಗಳೆಲ್ಲವೂ ಕನ್ನಡವಾಗಿಬಿಟ್ಟಿವೆ. ಈ ಶಬ್ದಗಳಲ್ಲದ ಸಂಸ್ಕೃತ ಶಬ್ದಗಳು ಕನ್ನಡ ಆಗಿಲ್ಲ.

ಭಾಷೆ ನಿರಂತರ ಬದಲಾಗುವ ವಿದ್ಯಮಾನ: ಪ್ರೊ.ರಾಜೇಂದ್ರ ಚೆನ್ನಿ

ಭಾಷೆಯನ್ನು ಅಧ್ಯಯನ ಮಾಡುವ ಎಲ್ಲ ಭಾಷಾ ತಜ್ಞರಿಗೆ ಗೊತ್ತಿರುವ ಹಾಗೆ ಭಾಷೆ ಎನ್ನುವುದು ನಿರಂತರವಾಗಿರುವ ಬದಲಾಗುತ್ತಿರುವ, ಹೆಚ್ಚು ಕಡಿಮೆ ದಿನ ದಿನವೂ ಪರಿವರ್ತನೆಯಾಗುವ ಒಂದು ವಿದ್ಯಮಾನವಾಗಿದೆ. ಹೀಗಾಗಿ ಜಗತ್ತಿನ ಯಾವುದೇ ಭಾಷೆ (ಅದು ಗ್ರೀಕ್‌, ಲ್ಯಾಟೀನ್‌ ಥರದ ಕ್ಲಾಸಿಕಲ್‌ ಭಾಷೆಗಳಾಗಿರಬಹುದು ಅಥವಾ ಲಿಪಿ ಇಲ್ಲದೆ ಆಡುಮಾತಿನಲ್ಲಿರುವ ಭಾಷೆಯೇ ಆಗಿರಬಹುದು) ಯಾವಾಗಲೂ ಬದಲಾಗುತ್ತಿರುತ್ತವೆ, ಬೆಳೆಯುತ್ತಿರುತ್ತವೆ, ಅವುಗಳಲ್ಲಿ ಬೇರೆ ಬೇರೆ ಭಾಷೆಗಳಿಂದ, ಬೇರೆ ಬೇರೆ ಸಾಮಾಜಿಕ ಲೋಕಗಳಿಂದ ಹೊಸ ಶಬ್ದಗಳು, ಹೊಸ ಅಭಿವ್ಯಕ್ತಿಯ ಕ್ರಮಗಳು ಸೇರಿಕೊಳ್ಳುತ್ತಿರುತ್ತವೆ. ಇತಿಹಾಸ ಹೇಳುವಂತೆ ಯಾವುದೇ ಭಾಷೆ ಶುದ್ಧ ಭಾಷೆ ಅಲ್ಲವೇ ಅಲ್ಲ.

ಪ್ರೊ.ರಾಜೇಂದ್ರ ಚೆನ್ನಿ

ಶುದ್ಧ ಅನ್ನುವಂತಹದ್ದು, ಭಾಷೆ ಬೆಳೆದು, ಬಹಳ ವರ್ಷಗಳಾದ ಮೇಲೆ, ಕೆಲವು ಶಾಸ್ತ್ರಜ್ಞರು, ಪಂಡಿತರು ಸೇರಿಕೊಂಡು ಮಾಡಿದ್ದಾಗಿದೆ. ಇದು ಭಾಷೆಯ ಮೂಲ ಲಕ್ಷಣ ಅಲ್ಲ. ಶುದ್ಧ, ಅಶುದ್ಧ ಎನ್ನುವುದು ಶಾಸ್ತ್ರ ಮತ್ತು ವ್ಯಾಕರಣಗಳಿಂದ ಬರುವಂತಹ ಕೃತ್ತಿಮ ಚೌಕಟ್ಟು. ಯಾವುದೇ ಭಾಷೆಯಾದರೂ ಶುದ್ಧ, ಅಶುದ್ಧ ಎಂಬುದು ಚರ್ಚೆಗೆ ಬಂದರೆ ಸಮಾಜದಲ್ಲಿರುವ ಅಸಮಾನತೆ ಪ್ರವೇಶಿಸುತ್ತದೆ. ಇಂಗ್ಲಿಷ್‌ ಅನ್ನೇ ಉದಾಹರಣೆಯಾಗಿ ನೋಡುವುದಾದರೆ ಬಿಬಿಸಿಯಲ್ಲಿ ಕೇಳುವುದು, ಪುಸ್ತಕದಲ್ಲಿ ಓದುವುದು ಮಾತ್ರ ಇಂಗ್ಲಿಷ್‌ ಭಾಷೆ ಅಲ್ಲ. ಕನ್ನಡ ಭಾಷೆಯಲ್ಲಿರುವಂತೆಯೇ ಪ್ರಾದೇಶಿಕ ವೈವಿಧ್ಯಗಳಿವೆ. ಅಲ್ಲಿ ಬಡಜನರು ಮಾತನಾಡುವ ಕ್ರಮವೇ ಬೇರೆ, ಶ್ರೀಮಂತ, ಶಿಕ್ಷಿತ ಜನರು ಮಾತನಾಡುವ ಕ್ರಮವೇ ಬೇರೆ. ಅಶಿಕ್ಷಿತ, ಕೆಳವರ್ಗಗಳಲ್ಲಿನವರು, ಸಾಮಾನ್ಯರು ಬಳಸುವ ಭಾಷೆಯನ್ನು ಅಶುದ್ಧ ಎನ್ನುವಂತಹದ್ದು ಫ್ಯಾಸಿಸ್ಟ್‌ ಮನೋಭಾವ. ಇದನ್ನು ಯಾವಾಗಲೂ ವಿರೋಧಿಸಬೇಕು. ಸಂಸ್ಕೃತದಿಂದ ಬಂದಿರುವ ಪದಗಳೇ ಶುದ್ಧ ಕನ್ನಡ (ಅಚ್ಚ ಕನ್ನಡ), ನಮ್ಮ ಆಡುಮಾತಿನ ಭಾಷೆಯನ್ನು ಅಶುದ್ಧ ಕನ್ನಡ ಎನ್ನುವ ಕಡೆಗೆ ಇರುವ ಇವರು ಹೋಗುತ್ತಾರೆ ಅನಿಸುತ್ತದೆ.


ಇದನ್ನೂ ಓದಿರಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ


ಭಾಷಾ ಜಾಯಮಾನದ ಅರಿವಿರಲಿ: ಬಂಜಗೆರೆ

ಜನ ಬಳಸುವ ಒಂದು ಭಾಷೆ ಇರುತ್ತದೆ. ಆ ಭಾಷೆ ಯಾವ್ಯಾವ ಶಬ್ದಗಳನ್ನು ತನ್ನೊಳಗೆ ಒಳಗೊಳ್ಳುತ್ತದೆಯೋ ಅದೆಲ್ಲವೂ ಕೂಡ ಬಳಸುತ್ತಾ ಬಳಸುತ್ತಾ ಭಾಷೆಯ ಜಾಯಮಾನಕ್ಕೆ ಬಂದು ಬಿಡುತ್ತವೆ. ಕೆಲವು ಅಕ್ಷರಸ್ಥರು ಕನ್ನಡಕ್ಕೆ ಕೃತಕವಾಗಿ ಇಂಗ್ಲಿಷ್ ಭಾಷೆಯ ಶಬ್ದಗಳನ್ನು ಸೇರಿಸುತ್ತಿರುತ್ತಾರೆ. ಅದು ಜನಸಾಮಾನ್ಯರ ಕ್ರಮ ಅಲ್ಲ. ಜನಸಾಮಾನ್ಯರು ಮಾತನಾಡುವಾಗ ಕೆಲವು ಉರ್ದು ಪದ, ಪಾರ್ಸಿ ಪದ, ಕೆಲವು ಇಂಗ್ಲಿಷ್ ಪದ ಸೇರಬಹುದು.

ಸಾಮಾನ್ಯವಾಗಿ ಎರವಲು ತೆಗೆದುಕೊಂಡಾಗ ಅವರು ಕನ್ನಡದ ಜಾಯಮಾನಕ್ಕೆ ಆ ಪದವನ್ನು ಒಗ್ಗಿಸಿಬಿಡುತ್ತಾರೆ. ತತ್ಸಮವೋ, ತದ್ಭವವೋ ಆಗಿಬಿಡುತ್ತದೆ. ಬಸ್ಸು, ಕಾರು ಇದಕ್ಕೆ ಉದಾಹರಣೆಗಳು. ಆದರೆ ಕೃತಕವಾಗಿ, ವಿಪರೀತ ಇಂಗ್ಲಿಷ್‌ ಪದಗಳನ್ನು ಸೇರಿಸಿ ಮಾತನಾಡುವುದು ಕನ್ನಡ ಜಾಯಮಾನವಲ್ಲ. ಈ ವಿವೇಕವನ್ನು ನಾವು ಇಟ್ಟುಕೊಳ್ಳಬೇಕು.

ಬಂಜಗೆರೆ ಜಯಪ್ರಕಾಶ್‌

ಸರಿ-ತಪ್ಪು ಇದೆ, ಶುದ್ಧ-ಅಶುದ್ಧ ಇಲ್ಲ: ಭಾಷಾತಜ್ಞ ರಂಗನಾಥ್‌ ಕಂಟನಕುಂಟೆ

ಭಾಷೆ ಒಳಗೆ ಶುದ್ಧ, ಅಶುದ್ಧ ಎಂಬುದು ತಪ್ಪು ಕಲ್ಪನೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದರೆ ಭಾಷೆಯಲ್ಲಿ ಸರಿ, ತಪ್ಪು ಎಂಬುದಿದೆ. ಉದಾಹರಣೆಗೆ ‘ತಿಮ್ಮ’ ಎಂಬುದನ್ನು ‘ತಮ್ಮ’ ಎಂದು ಬರೆಯಲು ಬರುವುದಿಲ್ಲ. ವ್ಯಾಕರಣದಲ್ಲಿ ಅದು ತಪ್ಪಾಗುತ್ತದೆ. ಶುದ್ಧ, ಅಶುದ್ಧ ಎಂದು ಬಂದಾಗ ಅಲ್ಪಪ್ರಾಣ, ಮಹಾಪ್ರಾಣದ ಪ್ರಶ್ನೆ ಬರುತ್ತದೆ. ‘ಶುದ್ಧ’ ಎಂದು ಕರೆಯಬೇಕಾ, ‘ಶುದ್ದ’ ಎಂದು ಕರೆಯಬೇಕಾ ಎಂಬ ಪ್ರಶ್ನೆ ಬರುತ್ತದೆ. ‘ಪ್ರಕಾಸ’ ಎಂದು ಕರೆಯಬೇಕಾ, ‘ಪ್ರಕಾಶ’ ಎಂದು ಕರೆಯಬೇಕಾ ಎಂಬ ಪ್ರಶ್ನೆ ಬರುತ್ತದೆ.

ರಂಗನಾಥ್ ಕಂಟನಕುಂಟೆ

ಕನ್ನಡದಲ್ಲಿ ‘ಪ್ರಕಾಸ,’ ‘ಪ್ರಕಾಶ’ ಎರಡೂ ಬಳಕೆಯಲ್ಲಿವೆ. ಮಳವಳ್ಳಿ, ಮಂಡ್ಯ ರಾಮನಗರ, ಚೆನ್ನಪಟ್ಟಣ ಈ ಭಾಗದಲ್ಲಿ ಪ್ರಕಾಸ, ರಮೇಸ ಎನ್ನುತ್ತಾರೆ. ಇದನ್ನು ತಪ್ಪು ಎಂದು ಹೇಳಲು ಬರಲ್ಲ. ಅದು ಪ್ರಾದೇಶಿಕ ಗುರುತು. ನಮ್ಮಲ್ಲಿ ತಿಳಿವಳಿಕೆ ಇಲ್ಲದವರು ‘ಪ್ರಕಾಸ’ ಎಂದರೆ ನಗುತ್ತಾರೆ. ಹೀಗಾಗಿ ಶುದ್ಧ, ಅಶುದ್ಧ ಎನ್ನಲು ಬರುವುದಿಲ್ಲ. ವ್ಯಾಕರಣ ಮೂಲ ನಿಯಮಗಳನ್ನು ಉಲ್ಲಂಘಿಸಲು ಆಗಲ್ಲ.

ಬಸ್ಸು, ರೈಲು, ಕಾರು, ಕಂಪ್ಯೂಟರ್ ಈ ರೀತಿ ಈ ಪದಗಳನ್ನು ಕನ್ನಡದ್ದಾಗಿಯೇ ಬಳಸುತ್ತೇವೆ. ಈ ರೀತಿ ಬಳಸುವುದರಿಂದ ಕನ್ನಡ ಕೆಟ್ಟು ಹೋಯಿತು ಎಂದು ಕೆಲವರು ಹೇಳುತ್ತಾರೆ. ಹಾಗೆ ಹೇಳಲು ಸಾಧ್ಯವಿಲ್ಲ. ಎಲ್ಲ ಕಾಲದಲ್ಲೂ, ಎಲ್ಲ ಭಾಷೆಯಲ್ಲೂ ಕೊಡುಕೊಳುಗೆ ನಡೆಯುತ್ತಲೇ ಇರುತ್ತದೆ. ಹಿಂದಿಯಲ್ಲಿರುವ ಶೇ. 75ರಷ್ಟು ಪದಗಳು ಸಂಸ್ಕೃತದ್ದಾಗಿವೆ. ಸಂಸ್ಕೃತದಲ್ಲಿರುವ ಪದಗಳು ಪಾಕೃತ, ಪಾಳಿ ಇತ್ಯಾದಿ ಭಾಷೆಗಳದ್ದು. ಇಂಗ್ಲಿಷ್‌ನಲ್ಲಿರುವ ಪದಗಳು ಹೆಚ್ಚಿನವು ಲ್ಯಾಟೀನ್‌, ಗ್ರೀಕ್‌ ಭಾಷೆಯದ್ದಾಗಿವೆ.

‘ಅ’ಕಾರ, ‘ಹ’ ಜಾರ ತಾರತಮ್ಯ ಸಂಸ್ಕೃತದ ಸೃಷ್ಟಿ

ಕಸಾಪ ಅಧ್ಯಕ್ಷರ ಹೇಳಿಕೆಗೆ ತಿರುಗೇಟು ನೀಡಿರುವ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡ ಹನಕೆರೆ ಅಭಿಗೌಡ ಅವರು, ” ಕನ್ನಡದಲ್ಲಿ ‘ಹ’ ಅನ್ನುವುದೆ ಇಲ್ಲ , ಇದನ್ನು ಕುತಂತ್ರ ಸಂಸ್ಕ್ರುತ ದವರು ತುರುಕಿದ್ದಾರೆ. ಕಾಲಕಾಲಕ್ಕೆ ನುಡಿ ಸುದಾರಣೆ ಯೆಸರಲ್ಲಿ ದ್ರಾವಿಡರ ನುಡಿ ಕನ್ನಡ ಓದಲು ಬರೆಯಲು ಕಶ್ಟವಾಗುವಂತೆ ಕುತಂತ್ರದಿಂದ ಸಂಸ್ಕ್ರುತ ಯೇರಲಾಗಿದೆ ತುರುಕಲಾಗಿದೆ. ಈಗಲೂ ನಡೆಯುತಿದೆ. ಅಲ್ಪಪ್ರಾಣ ಮಾಪ್ರಾಣ, ‘ಅ’ ಕಾರ , ‘ಹ’ ಕಾರ ಎಂಬ ತಾರತಮ್ಯ ಸ್ರುಶ್ಟಿಸಲಾಗಿದೆ. ಸಂಸ್ಕ್ರುತ ದ ಮೂಲ ಗುಣವೆ ತಾರತಮ್ಯ ಸ್ರುಶ್ಟಿಸುವುದು. ಕನ್ನಡದಲ್ಲಿರುವುದು 33 ಅಕ್ಶರಗಳು ಮಾತ್ರ (ಅ ಆ ಇ ಈ ಉ ಊ ಎ ಏ ಐ ಒ ಓ ಔ ಅಂ. ಕ ಗ ಚ ಜ. ಟ ಡ ಣ. ತ ದ ನ. ಪ ಬ ಮ. ಯ ರ ಲ ವ ಶ ಸ ಳ). ನಮ್ಮ ಬರವಣಿಗೆಯಲ್ಲಿ ತಾರತಮ್ಯ ಬಿಟ್ಟು ಮತ್ತು ಸಾದ್ಯವಾದಶ್ಟು ಸಂಸ್ಕ್ರುತ ಯಿಂದಿ ಪದಗಳ ಬಿಟ್ಟು ಬರೆದಿದ್ದೇವೆ, ನೀವು ಇದೇ ರೀತಿ ಬರೆಯಿರಿ” ಎಂದು ತಿಳಿಸಿದ್ದಾರೆ. ಜೊತೆಗೆ ಮಹಾಪ್ರಾಣ ಬಳಕೆಯನ್ನು ಅವರು ತಮ್ಮ ಪೋಸ್ಟ್‌ನಲ್ಲಿ ಬಳಸುವುದನ್ನು ನಿಲ್ಲಿಸಿದ್ದಾರೆ.

ಹನಕೆರೆ ಅಭಿಗೌಡ

ಇದನ್ನೂ ಓದಿರಿ: ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...