Homeಮುಖಪುಟದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

ದೆಹಲಿ ಗಡಿ ಬಿಟ್ಟು ತೆರಳಲು ಮನಸ್ಸಾಗುತ್ತಿಲ್ಲ: ರೈತರ ಭಾವನಾತ್ಮಕ ಮಾತುಗಳು

- Advertisement -
- Advertisement -

ರೈತ ಹೋರಾಟಕ್ಕೆ ಜಯವಾಗಲಿ, ರೈತರ ಐಕ್ಯತೆ ಚಿರಾಯುವಾಗಲಿ ಎಂದು ಮೊಳಗುತ್ತಿರುವ ಘೋಷಣೆಗಳು, ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು, ಒಬ್ಬರನ್ನೊಬ್ಬರ ಆಲಂಗಿಸುತ್ತಾ ಅಭಿನಂದಿಸುತ್ತಿರುವ ಚಿತ್ರಗಳು….. ಇದು ದೆಹಲಿ ಗಡಿಗಳಲ್ಲಿ ಇತ್ತೀಚೆಗೆ ಕಾಣಬರುತ್ತಿರುವ ದೃಶ್ಯಗಳು

ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ಗುರುವಾರ ತೆರೆ ಬಿದ್ದಿದೆ. ಜನರು ತಮ್ಮ ಹಳ್ಳಿಗಳತ್ತಾ ಸಾಗಲು, ಟೆಂಟ್‌ಗಳನ್ನು ಬಿಚ್ಚುತ್ತಿದ್ದಾರೆ. ಸದಾ ಜನರಿಂದ ಗಿಜುಗುಡುತ್ತಿದ್ದ ರಸ್ತೆಗಳು ಬರಿದಾಗುತ್ತಿವೆ, ಹಳ್ಳಿಗಳಾಗಿ ಬದಲಾಗಿದ್ದ ದೆಹಲಿ ಗಡಿಗಳು, ಪುನಃ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಎಂಎಸ್‌ಪಿ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ನಾಯಕರು  ಪ್ರಸ್ತುತ ರೈತ ಹೋರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನಾಕಾರರು ಟ್ಯ್ರಾಕ್ಟರ್‌ಗಳ ಮೇಲೆ ಹತ್ತಿ ನೃತ್ಯ ಮಾಡುವುದರೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ. 

ದೆಹಲಿ ಗಡಿಗಳಲ್ಲಿ ಹೋರಾಟ ಆರಂಭದಿಂದಲೂ ಭಾಗವಹಿಸಿರುವ ಪಂಜಾಬ್‌ನ ರೋಪರ್‌ ಚಾರಿಯನ್‌ ಗ್ರಾಮದ ರವೀಂದರ್‌ ಸಿಂಗ್, ‘ಇದು ರೈತರ ಪರಿಶ್ರಮಕ್ಕೆ ಸಂದ ಗೆಲುವು. ನಮ್ಮ ಚಳವಳಿ  ಮುಗಿದಿಲ್ಲ. ಹೋರಾಟ ಮುಂದುವರಿಯಲಿದೆ. ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ನನಗೆ ಇಲ್ಲಿ ಅತೀವ ಪ್ರೀತಿ ಸಿಕ್ಕಿದೆ’ ಎನ್ನುತ ರೈತ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

2020ರ ನವೆಂಬರ್ 26ರಂದು ದೆಹಲಿ ಚಲೋದಲ್ಲಿ ನಾನು ಭಾಗವಹಿಸಿದ್ದೆ ಎನ್ನುವ ಅವರು, ‘ನಾವು ಪಂಜಾಬ್ನಿಂದ ಬರುವಾಗ ಲಾಠಿಚಾರ್ಜ್ನಲ್ಲಿ ನಾನು ಗಾಯಗೊಂಡಿದ್ದೆ. ನಾವು ನಮ್ಮ ಟ್ರಾಲಿಗಳಲ್ಲಿ ಹಲವಾರು ಬ್ಯಾರಿಕೇಡ್ಗಳನ್ನು ದಾಟುವಲ್ಲಿ ಯಶಸ್ವಿಯಾಗಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬುರಾರಿ ಮೈದಾನಕ್ಕೆ ಪ್ರವೇಶಿಸುವಂತೆ ಒತ್ತಾಯಿಸಿದರು. ಅದರ ನಂತರ ಬುರಾರಿಯಲ್ಲಿ ಎರಡು ತಿಂಗಳು ಮುತ್ತಿಗೆ ನಡೆಯಿತು. ಪೊಲೀಸರು ನನ್ನ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದರು’ಎಂದರು.

ಗುರುವಾರ ಬೆಳಿಗ್ಗೆ ತನ್ನ ತಾತ್ಕಾಲಿಕ ಟೆಂಟ್‌ನಿಂದ ಟಾರ್ಪಾಲಿನ್ ಮತ್ತು ಥರ್ಮಾಕೋಲ್ ಶೀಟ್‌ಗಳನ್ನು  ಕಿತ್ತುಹಾಕಿದ ಜಲಂಧರ್‌ನ ಶಾದಿಪುರದ 25 ವರ್ಷದ ದಿಲ್ಬರ್ ಸಿಂಗ್, ‘ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ದಿನವೇ ವಿಜಯವನ್ನು ಸಾಧಿಸಲಾಯಿತು. ಸರ್ಕಾರವು ರೈತರ ಉಳಿದ ಹಕ್ಕೊತ್ತಾಯಗಳನ್ನು ಔಪಚಾರಿಕವಾಗಿ ಸ್ವೀಕರಿಸಬೇಕು ಎಂದು ನಾವು ಕಾಯುತ್ತಿದ್ದೆವು. ಅಲ್ಲಿಂದೀಚೆಗೆ ಸಂಭ್ರಮದ ವಾತಾವರಣವಿದೆ’ ಎಂದರು.

ಕಿಸಾನ್ ಯೂನಿಯನ್‌ನ ಸದಸ್ಯರು ಮತ್ತು ಫೆಬ್ರವರಿಯಿಂದ ಸಿಂಘುವಿನಲ್ಲಿ ಸ್ಥಾಪಿಸಲಾದ ಸಮುದಾಯ ಅಡುಗೆಮನೆಯಲ್ಲಿ ಸ್ವಯಂಸೇವಕರಾಗಿರುವ ಪಟಿಯಾಲಾದ ಖಾಂಗ್ ಗ್ರಾಮದ 70 ವರ್ಷದ ಜಸ್ವೀರ್‌ ಕೌರ್‌ ಕೀರ್ತಿ ಕಳೆದ ಒಂದು ವರ್ಷದಿಂದ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಒಕ್ಕೂಟದ ಸದಸ್ಯರೊಬ್ಬರು ಆಂದೋಲನವನ್ನು ಅಮಾನತುಗೊಳಿಸುವ ಸಂಯುಕ್ತ ಕಿಸಾನ್‌ ಮೋರ್ಚಾದನ ನಿರ್ಧಾರವನ್ನು ತಿಳಿಸಿದಾಗ ಅವರು ‘ಲಂಗರ್ ಸೇವೆ’ ಮಾಡುತ್ತಿದ್ದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ‘ನನಗೆ ಹಿಂತಿರುಗಬೇಕು ಎನಿಸುತ್ತಿಲ್ಲ. ಕಳೆದ ವರ್ಷ ನಮ್ಮ ಗ್ರಾಮದ ಜನರೊಂದಿಗೆ ಇಲ್ಲಿಗೆ ಬಂದಿದ್ದೆ. ಆಂದೋಲನ ಇಷ್ಟು ದಿನ ಇರುತ್ತದೆ ಎಂದು ನಾನು ಊಹಿಸಿರಲಿಲ್ಲ. ಆರಂಭದಲ್ಲಿ, ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ರಸ್ತೆಗಳಲ್ಲಿ ಕುಳಿತುಕೊಳ್ಳಲು, ಆರಾಮದಾಯಕ ಜೀವನದಿಂದ ಈ ಪರಿಸ್ಥಿತಿಗೆ ಹೊಂದಿಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಜನವರಿ 26 ರ ಘಟನೆಯ ಸಂದರ್ಭದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಬಹುದೆಂಬ ಭಯವಿತ್ತು. ಅದರೆ ಅದು ಈಗ ಮಾಯವಾಗಿದೆ. ರೈತ ಹೋರಾಟದ ಗೆಲುವಿಗಾಗಿ ಬಹಳಷ್ಟು ರೈತರು ಪ್ರಾಣತೆತ್ತಿದ್ದಾರೆ’ ಎಂದು ಹೇಳಿದರು.

‘ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಮ್ಮ ಭೂಮಿ ಮತ್ತು ಹಕ್ಕುಗಳ ಹೋರಾಟ ಈ ಎಲ್ಲಾ ಕಷ್ಟಗಳಿಗಿಂತ ದೊಡ್ಡದಾಗಿದೆ. ನಾನು ಇನ್ನೂ ನನ್ನ ಸಾಮಾನುಗಳನ್ನು ಪ್ಯಾಕ್ ಮಾಡಿಲ್ಲ. ನಾವು ಶನಿವಾರದಂದು ಲಂಗರ್ನಲ್ಲಿ ಕೊನೆಯ ಬಾರಿಗೆ ಎಲ್ಲರಿಗೂ ಸೇವೆ ಸಲ್ಲಿಸಿದ ನಂತರ ಹೊರಡುತ್ತೇವೆ’ ಎಂದು ಕೌರ್ ಹೇಳಿದರು.

ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಅಂಗೀಕಾರ ದೊರೆತಿತ್ತು. ಇದರ ನಂತರವೂ ಪ್ರತಿಭಟನೆ ಮುಂದುವರೆಸಿದ್ದ ರೈತರು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧ ಗೊಳಿಸಬೇಕು, ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬುದನ್ನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದರು. ಗುರುವಾರ ಕೇಂದ್ರ ಸರ್ಕಾರವು ರೈತರ ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ್ದು, ಸಂಯುಕ್ತ ಕಿಸಾನ್ ಮೋರ್ಚಾವು ರೈತ ಹೋರಾಟವನ್ನು ಹಿಂಪಡೆಯುವುದಾಗಿ ನಿನ್ನೆ ನಿರ್ಧರಿಸಿದೆ.


ಇದನ್ನೂ ಓದಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...