Homeಮುಖಪುಟಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

- Advertisement -
- Advertisement -

ಛತ್ತೀಸ್‌ಘಡ ರಾಜ್ಯದ ಬಸ್ತಾರ್ ಜಿಲ್ಲೆಯ ಬಿಜಾಪುರದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೂರಾರು ಸಹಾಯಕ ಕಾನ್‌ಸ್ಟೆಬಲ್‌ಗಳು ಡಿಸೆಂಬರ್ 8ರಂದು ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ರಾಜ್ಯ ಸರ್ಕಾರದ ವಿರುದ್ಧ‍ ಪ್ರತಿಭಟನೆ ನಡೆಸಿದ್ದಾರೆ.

ದೀರ್ಘಕಾಲದ ಬೇಡಿಕೆಗಳಾದ ಪೊಲೀಸ್ ಪಡೆಗಳಲ್ಲಿ ಖಾಯಂಗೊಳಿಸುವಿಕೆ, ಸಂಬಳ ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕಾಗಿ ಒತ್ತಾಯಿಸಿ ಪೊಲೀಸ್ ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ.

ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಪೊಲೀಸ್ ಪ್ರಧಾನ ಕಚೇರಿಗೆ ಘೇರಾವ್ ಹಾಕಲು (ಮುತ್ತಿಗೆ ಹಾಕಲು) ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ತಡೆದಿದ್ದಾರೆ. ಹೋರಾಟದ ಭಾಗವಾಗಿದ್ದ ಕೆಲವು ಮಹಿಳೆಯರು, “ನಮ್ಮ ಮೇಲೆ ದೌರ್ಜನ್ಯ ನಡೆಸಲಾಗಿದೆ, ಪೊಲೀಸರು ಥಳಿಸಿದ್ದಾರೆ. ನಮ್ಮ ಬಟ್ಟೆಗಳನ್ನು ಹರಿದಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಮಹಿಳೆಯರು, ಮಕ್ಕಳು ಮತ್ತು ಗಂಡಸರನ್ನು ರಾಯ್‌ಪುರದ ಸಪ್ರೆ ಶಾಲೆಯಲ್ಲಿರುವ ತಾತ್ಕಾಲಿಕ ಜೈಲಿನಲ್ಲಿ ಇರಿಸಲಾಗಿತ್ತು.

ತಮ್ಮ ಕುಟುಂಬದವರ ಮೇಲಾದ ಈ ದೌರ್ಜನ್ಯದಿಂದ ಕುಪಿತರಾದ ಬಿಜಾಪುರದ ಕುಟ್ರು, ಪೊಲೀಸ್ ಲೈನ್, ಮಿರ್ತೂರು, ಗಂಗಾಳೂರು ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾದ ಸಹಾಯಕ ಕಾನ್‌ಸ್ಟೇಬಲ್‌ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಸಹಾಯಕ ಕಾನ್‌ಸ್ಟೇಬಲ್‌ಗಳು ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿರುವುದು… (PC: The Wire)

ಇದನ್ನೂ ಓದಿರಿ: ಆತ್ಮಚರಿತ್ರೆಯಲ್ಲಿ ‘ಅಯೋಧ್ಯೆ ತೀರ್ಪು ಆಚರಣೆ’ ಶಿರ್ಷಿಕೆ; ವಿವಾದದ ನಂತರ ‘ಅದು ಆಚರಣೆಯಲ್ಲ’ ಎಂದ ನಿವೃತ್ತ ಸಿಜೆಐ ರಂಜನ್ ಗೊಗೊಯ್


ಪ್ರತಿಭಟನಾಕಾರರಲ್ಲಿ ಒಬ್ಬರಾದ ರಮೇಶ ಕೊಸರೆ ಮಾತನಾಡಿ, “ನನ್ನನ್ನು ಸಹಾಯಕ ಕಾನ್‌ಸ್ಟೆಬಲ್ ಆಗಿ ನಿಯೋಜಿಸಲಾಗಿದೆ. ನನ್ನ ಕುಟುಂಬ ಸದಸ್ಯರು ರಾಯ್‌ಪುರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಆದರೆ ರಾಜಧಾನಿಯಿಂದ 28 ಕಿಮೀ ಮುಂದಿರುವ ಅಭನ್‌ಪುರದಲ್ಲಿ ಅವರನ್ನು ತಡೆದು ಥಳಿಸಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ಇರಿಸಿದ್ದ ಕೊಠಡಿಗಳಲ್ಲಿ ದೀಪಗಳನ್ನು ಆಫ್ ಮಾಡಲಾಯಿತು. ಮಹಿಳೆಯರ ಮೇಲೆ ವಾರ್ಡನ್‌ಗಳು ಹಲ್ಲೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ಬಸ್ತಾರ್‌ ಪ್ರದೇಶವು ನಕ್ಸಲ್‌ ಚಟುವಟಿಕೆಗಳಿಗೆ ಪ್ರಸಿದ್ಧವಾಗಿದೆ. ನಕ್ಸಲ್ ಚಟುವಟಿಕೆ ಹೆಚ್ಚಿರುವ ಕಾಡುಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣಾಪಾಯವಿದ್ದರೂ ಸೇವೆ ಸಲ್ಲಿಸಲಾಗುತ್ತಿದೆ” ಎಂದು ಸಹಾಯಕ ಕಾನ್‌ಸ್ಟೆಬಲ್‌ಗಳು ಹೇಳುತ್ತಿದ್ದಾರೆ. ಆದರೆ ಪ್ರತಿಯಾಗಿ ಬಹಳ ಕಡಿಮೆ ವೇತನವನ್ನು ನೀಡಲಾಗುತ್ತದೆ. ವೇತನ ಹೆಚ್ಚಿಸಿ, ಸಕಾಲಿಕ ಬಡ್ತಿ ನೀಡಬೇಕಿದೆ. ಛತ್ತೀಸ್‌ಗಢದಲ್ಲಿ ಸಹಾಯಕ ಕಾನ್‌ಸ್ಟೇಬಲ್‌ಗಳಿಗೆ ತಿಂಗಳಿಗೆ 15,000 ರೂ., ರಹಸ್ಯ ಪಡೆಗಳು ಅಥವಾ ಪೊಲೀಸ್ ಮಾಹಿತಿದಾರರಿಗೆ 12,000 ರೂ. ಮತ್ತು ಗೃಹ ರಕ್ಷಕರಿಗೆ ತಿಂಗಳಿಗೆ 13,000 ರೂ. ನೀಡಲಾಗುತ್ತಿದೆ ಎಂಬುದು ಪ್ರತಿಭಟನೆಗೆ ಕಾರಣ.

ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಸಲುವಾಗಿ, 2003 ಮತ್ತು 2018ರ ನಡುವೆ ಅಧಿಕಾರದಲ್ಲಿದ್ದ ಬಿಜೆಪಿ ನೇತೃತ್ವದ ರಮಣ್ ಸಿಂಗ್ ಸರ್ಕಾರವು ಬಸ್ತಾರ್‌ನಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ (ಎಸ್‌ಪಿಒ) ಸೇವೆ ಸಲ್ಲಿಸಲು ಅನೇಕ ಯುವಕರನ್ನು ನೇಮಿಸಿಕೊಂಡಿತು. ಇವರಲ್ಲಿ ಹೆಚ್ಚಿನವರು ಶರಣಾದ ಮಾವೋವಾದಿಗಳಾಗಿದ್ದರು. ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಎಸ್‌ಪಿಒಗಳನ್ನು ಸಹಾಯಕ ಕಾನ್‌ಸ್ಟೆಬಲ್‌ಗಳಾಗಿ ಮಾಡಲಾಯಿತು.

ಆದರೆ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ ಎಸ್‌ಪಿಒಗಳು, ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರ ನೀಡಿದರು. ಈಗ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂಬುದು ಪ್ರತಿಭಟನೆಯ ಹಿಂದಿನ ಆಕ್ರೋಶವಾಗಿದೆ.


ಇದನ್ನೂ ಓದಿರಿ: ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...