Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...