Homeಮುಖಪುಟಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

ಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಹೋರಾಟದ ಸಂದರ್ಭದಲ್ಲಿ “ಪೊಲೀಸರು ಜರುಗಿಸಿದ ಕ್ರಮಗಳಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ” ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

ರೈತರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳನ್ನು ಜಾರಿಗೊಳಿಸಲು ಕ್ರಮ ವಹಿಸಲಾಗುವುದು ಎಂದು ಕೇಂದ್ರ ಸರ್ಕಾರ ಲಿಖಿತವಾಗಿ ಭರವಸೆ ನೀಡಿದ ಬಳಿಕ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹೋರಾಟವನ್ನು ಗುರುವಾರ ಹಿಂಪಡೆದಿದೆ.

ಶುಕ್ರವಾರ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, “ರೈತ ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ನೀಡಬೇಕಾದದ್ದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ” ಎಂದು ತಿಳಿಸಿದ್ದಾರೆ.

ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. “ಪ್ರತಿಭಟನೆಯ ಸಂದರ್ಭದಲ್ಲಿ ಸಾವಿಗೀಡಾದ ರೈತರ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಕೇಂದ್ರ ಸರ್ಕಾರ ಜೂನ್‌ನಲ್ಲಿ ಸಂಸತ್ತಿನಲ್ಲಿ ಹೇಳಿತ್ತು.

ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಈಗ ಪ್ರತಿಕ್ರಿಯಿಸಿದ್ದಾರೆ.

ರೈತರ ಪ್ರತಿಭಟನೆಯ ವೇಳೆ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಜೀವನೋಪಾಯ ಮತ್ತು ಆರ್ಥಿಕ ಪರಿಹಾರವನ್ನು ನೀಡಲು ಸರ್ಕಾರ ಚಿಂತಿಸಿದೆಯೇ ಎಂದು ಸದಸ್ಯರು ಪ್ರಶ್ನಿಸಿದ್ದಾರೆ. ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾವಿಗೀಡಾದ ರೈತರ ಬಗ್ಗೆ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ದನಿ ಎತ್ತುತ್ತಲೇ ಇವೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು, ಕೋವಿಡ್-19 ಮತ್ತು ವ್ಯತಿರಿಕ್ತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಿ ಹೋರಾಟ ನಡೆಸಿದ್ದರು. ನವೆಂಬರ್ 2020ರ ಅಂತ್ಯದಿಂದ ದೆಹಲಿಯ ಗಡಿಯಲ್ಲಿ ಹೋರಾಟ ನಡೆಸಿದರು. ಪ್ರತಿಭಟನೆಯ ಸಂದರ್ಭದಲ್ಲಿ 700 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ಎಸ್‌ಕೆಎಂ ಹೇಳಿದೆ.

“ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿಂದೆ ‘ಶ್ರೀಮಂತ ರೈತರು’ ಹೆಚ್ಚಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನವು ನೀಡಿದ ವರದಿ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿತ್ತು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದವರು ಸರಾಸರಿ 2.94 ಎಕರೆಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುತ್ತಿರಲಿಲ್ಲ. ಅವರೆಲ್ಲರೂ ಸಣ್ಣ ಮಟ್ಟದ ರೈತರಾಗಿದ್ದರು” ಎಂದು ‘ದಿ ವೈರ್‌’ ವರದಿ ಮಾಡಿತ್ತು.

ಎಂಎಸ್‌ಪಿ ಕುರಿತ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ತೋಮರ್, “ಶೂನ್ಯ ಬಜೆಟ್ ಆಧಾರಿತ ಕೃಷಿಯನ್ನು ಉತ್ತೇಜಿಸಲು, ದೇಶದ ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಬೆಳೆ ಮಾದರಿಯನ್ನು ಬದಲಾಯಿಸಲು, ಎಂಎಸ್‌ಪಿಯನ್ನು ಹೆಚ್ಚು ಪರಿಣಾಮಕಾರಿ ಹಾಗೂ ಪಾರದರ್ಶಕಗೊಳಿಸಲು ಸಮಿತಿಯನ್ನು ರಚಿಸಲಾಗುತ್ತಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿರಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...