Homeಮುಖಪುಟಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

- Advertisement -
- Advertisement -

ಗುರುಗಾವ್‌ನಲ್ಲಿನ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ. ಈ ಮೊದಲು ಅಲ್ಲಿನ ಹಲವಾರು ಸ್ಥಳಗಳಲ್ಲಿ ನಮಾಜ್ ಮಾಡಲು ಸ್ಥಳೀಯ ಆಡಳಿತ ಅವಕಾಶ ಮಾಡಿಕೊಟ್ಟಿದ್ದನ್ನು ವಾಪಸ್ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತಿ ಶುಕ್ರವಾರ ಗುರುಗಾವ್‌ನ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಹಿಂದಿನಿಂದಲೂ ಮುಸ್ಲಿಮರು ನಮಾಜ್ ಮಾಡುತ್ತಾ ಬಂದಿದ್ದರು. ಆದರೆ ಹಿಂದುತ್ವ ಸಂಘಟನೆಗಳ ಆಕ್ಷೇಪ ಮತ್ತು ತಡೆಯಿಂದಾಗಿ ಕೆಲ ತಿಂಗಳುಗಳಿಂದ ಇಲ್ಲಿ ನಮಾಜ್ ಮಾಡಲು ಅಡ್ಡಿಪಡಿಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಟ್ಟರ್ “ಈ ಸಮಸ್ಯೆಯನ್ನು ಬಗೆಹರಿಸುವಂತೆ ಡೆಪ್ಯುಟಿ ಕಮಿಷನರ್ ಮತ್ತು ಪೊಲೀಸರಿಗೆ ಸೂಚಿಸಿದ್ದೇನೆ. ಎಲ್ಲರೂ ತಮ್ಮ ಸ್ವಂತ ಸ್ಥಳಗಳಲ್ಲಿ ಪ್ರಾರ್ಥನೆ, ಪೂಜೆ, ನಮಾಜ್ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಧಾರ್ಮಿಕ ಕೇಂದ್ರಗಳನ್ನು ಅದಕ್ಕಾಗಿಯೇ ಸ್ಥಾಪಿಸಿದ್ದು ಅಲ್ಲಿಯೇ ಹೋಗಿ ಪ್ರಾರ್ಥನೆ ಮಾಡತಕ್ಕದ್ದು. ಆದರೆ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಹಿಂದುತ್ವ ಸಂಘಟನೆಗಳು ಮುಸ್ಲಿಮರ ಪ್ರ್ರಾರ್ಥನೆಗೆ ಅಡ್ಡಿಪಡಿಸುತ್ತಿವೆ. ಸೆಕ್ಟರ್ 37 ರ ಸೈಟ್‌ನಲ್ಲಿ ಡಿಸೆಂಬರ್ 10 ರಂದು ಸಹ ಪ್ರಾರ್ಥನೆಗೆ ಅಡ್ಡಿಪಡಿಸಲಾಗಿದೆ. ಅಲ್ಲಿಗೆ ದೊಡ್ಡ ದೊಡ್ಡ ಲಾರಿಗಳು ಮತ್ತು ವಾಹನಗಳನ್ನು ತಂದು ನಿಲ್ಲಿಸಿದ್ದಲ್ಲದೆ ಜೈಶ್ರೀರಾಂ ಘೋಷಣೆ ಕೂಗಲಾಗಿದೆ. ಇಲ್ಲಿ ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಜನರಲ್ ಬಿಪಿನ್ ರಾವತ್‌ರವರ ಸ್ಮರಣಾ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದ್ದಾರೆ.

2018 ರಲ್ಲಿ ಇದೇ ರೀತಿಯ ಘರ್ಷಣೆಯಾಗಿ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದ ನಡೆದು ಸೆಕ್ಟರ್ 37 ನಲ್ಲಿರುವ ಮೈದಾನವು ನಮಾಜ್‌ಗಾಗಿ ಮೀಸಲಿಡಲಾಗಿತ್ತು. ಅಂದು ಗೊತ್ತು ಪಡಿಸಲಾಗಿದ್ದ 29 ಸೈಟ್‌ಗಳಲ್ಲಿ ಇದೂ ಒಂದಾಗಿದೆ.

ಗುರ್ಗಾಂವ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹದಲ್ಲಿ ಗುರುಗ್ರಾಮ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (ಜಿಎಂಡಿಎ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಟ್ಟರ್‌ರವರು, “ನಮಾಜ್‌ಗೆ ಅನುಮತಿ ನೀಡಬೇಕಾದ ಹಲವಾರು ಸ್ಥಳಗಳನ್ನು ಅವರು (ಮುಸ್ಲಿಂ ಸಮುದಾಯ) ಹೊಂದಿದ್ದಾರೆಂದು ಹೇಳಿದ್ದಾರೆ. ಅವರ ಕೆಲವು ಆಸ್ತಿಗಳು ಅಥವಾ ವಕ್ಫ್ ಬೋರ್ಡ್ ಅಡಿಯಲ್ಲಿ ಇರುವ ಆಸ್ತಿಗಳನ್ನು ಅತಿಕ್ರಮಿಸಲಾಗಿದೆ … ಅವು ವಾಪಸ್ ಅವರಿಗೆ ಹೇಗೆ ಲಭ್ಯವಾಗುವಂತೆ ಮಾಡಬಹುದು ಎಂಬುದನ್ನು ಚರ್ಚಿಸಲಾಗುತ್ತಿದೆ ಅಥವಾ ಅವರು ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಸಮುದಾಯದವರೊಂದಿಗೆ ಚರ್ಚಿಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು. ಬಹಿರಂಗವಾಗಿ ನಮಾಜ್ ಮಾಡುವುದರಿಂದ ಅಹಿತಕರ ಘಟನೆಗಳು ನಡೆಯುತ್ತವೆ, ನಾವು ಈ ಘರ್ಷಣೆಯನ್ನು ಮುಂದುವರಿಸಲು ಬಿಡುವುದಿಲ್ಲ. ಹಾಗಾಗಿ ಈ ಹಿಂದೆ ನಮಾಜ್‌ಗೆ ನೀಡಿದ್ದ ಅನುಮತಿಗಳನ್ನು ವಾಸಪ್ ಪಡೆದಿದ್ದೇವೆ. ಹೊಸದಾಗಿ ಮಾತುಕತೆ ನಡೆಯುತ್ತದೆ” ಎಂದು ಹೇಳಿದ್ದಾರೆ.

ನಮಾಜ್‌ಗೆ ಅಡ್ಡಿ ಹಿನ್ನೆಲೆಯಲ್ಲಿ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ. ಬಹಳಷ್ಟು ಮುಸ್ಲಿಮರು ಅಲ್ಲಿ ಪ್ರಾರ್ಥನೆ ಸಹ ಸಲ್ಲಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...