Homeಆರೋಗ್ಯಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

- Advertisement -
- Advertisement -

ಡಿಕಂಪೆನ್ಸೇಟೆಡ್ ಸಿರೋಸಿಸ್ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ತನ್ನ ತಂದೆಯನ್ನು ಉಳಿಸಿಕೊಳ್ಳಲು, 21 ವರ್ಷದ ಯುವತಿಯೊಬ್ಬಳು ತನ್ನ ಅರ್ಧ ಯಕೃತ್ (ಲಿವರ್) ಅನ್ನು ಕಸಿ ಮಾಡಿಸಿ, ತಂದೆಗೆ ಅಳವಡಿಸಿರುವ ಮಾನವೀಯ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. 

“ಅಧಿಕ ರಕ್ತದೊತ್ತಡದಿಂದಾಗಿ ನನ್ನ ತಂದೆಗೆ ಯಕೃತ್ತಿನ ವೈಫಲ್ಯವಾಗಿತ್ತು. ಅಲ್ಲದೆ, ಅವರು ಕಾಮಾಲೆ ಮತ್ತು ಹೊಟ್ಟೆಯಲ್ಲಿ ದ್ರವದ ಶೇಖರಣೆಯಿಂದ ಬಳಲುತ್ತಿದ್ದರು. ನನ್ನ ಯಕೃತ್ತನ್ನು ಕಸಿ ಮಾಡಿಸಿ ಅಳವಡಿಸುವುದರಿಂದ ನಾನು ನನ್ನ ತಂದೆಯನ್ನು ಬದುಕಿಸಿಕೊಳ್ಳಬಹುದು ಎಂದು ವೈದ್ಯರು ಹೇಳಿದರು. ಹಾಗೆಯೇ ಮಾಡಿದ್ದಕ್ಕೆ ನನಗೆ ಸಂಸತ ತಂದಿದೆ” ಎಂದು 21 ವರ್ಷದ ಯುವತಿ ವಾಣಿ ಹೇಳಿದ್ದಾರೆ.

52 ವರ್ಷದ ಆಕೆಯ ತಂದೆ ಎಂ ನೀಲಕಂಠೇಶ್ವರ ರಾವ್ ಅವರಿಗೆ ಒಂದು ವಾರದಲ್ಲಿ ಪ್ರತಿ ಸೆಷನ್‌ಗೆ 9 ರಿಂದ 10 ಲೀಟರ್ ದ್ರವವನ್ನು ಅವರ ಹೊಟ್ಟೆಯಿಂದ ಹೊರತೆಗೆಯಬೇಕಾಗಿತ್ತು. ಶಸ್ತ್ರಚಿಕಿತ್ಸೆಗೂ ಪೂರ್ವ ಅವಧಿಯಲ್ಲಿ 20 ರಿಂದ 25 ಸೆಷನ್‌ಗಳಲ್ಲಿ ದ್ರವನ್ನು ತೆಗೆಯಲಾಗಿತ್ತು. ಅದು ಅವರ ಮೂತ್ರಪಿಂಡದ ಕಾರ್ಯನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಅವರಿಗೆ ಆರೋಗ್ಯಕರ ಯಕೃತ್ತನ್ನು ಒದಗಿಸುವುದು ಪರಿಹಾರವಾಗಿತ್ತು. ವಾಣಿ ತನ್ನ ತಂದೆಯನ್ನು ಉಳಿಸಲು ತನ್ನ ಅರ್ಧದಷ್ಟು ಲಿವರ್ ದಾನ ಮಾಡಿದರು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಡಾ ಮೊಹಮ್ಮದ್ ನಯೀಮ್, ಡಾ ರವಿಶಂಕರ್ ಕಿಂಜರಾಪು ಮತ್ತು ಡಾ ರಾಜಕುಮಾರ್ ಅವರನ್ನೊಳಗೊಂಡ ತಂಡವು ವಾಣಿಯಿಂದ ಯಕೃತ್ತನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದೆ. ಬಳಿಕ, ಅಂಗಾಂಗ ಕೊಯ್ಲು ಮತ್ತು ಕಸಿ ಮಾಡುವ 14 ಗಂಟೆಗಳ ಪ್ರಕ್ರಿಯೆಯಲ್ಲಿ ಆಕೆಯ ತಂದೆಗೆ ಯಕೃತ್‌ ಅಳವಡಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಆರು ದಿನಗಳ ನಂತರ ವಾಣಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಡಾ ನಯೀಮ್ ಹೇಳಿದ್ದಾರೆ.

“ಲೈವ್ ಲಿವರ್ ಟ್ರಾನ್ಸ್‌ಪ್ಲಾಂಟೇಶನ್ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ಅದರ ಮೂಲಕ 50% ರಿಂದ 60% ಅಂಗವನ್ನು ದಾನಿಯಿಂದ ಕೊಯ್ಲು ಮಾಡಲಾಗುತ್ತದೆ ಮತ್ತು ರೋಗಿಗೆ ಅಳವಡಿಸಲಾಗುತ್ತದೆ. ರೋಗಿಯು ತೀವ್ರವಾಗಿ ಅಸ್ವಸ್ಥರಾಗಿದ್ದರಿಂದ ಶವದ ಯಕೃತ್ತಿನ ಕಸಿ ಮಾಡುವುದು ಬೇಡವೆಂದು ನಾವು ನಿರ್ಧರಿಸಿದೆವು. ಅದಕ್ಕಾಗಿ, ಬದುಕಿರುವ ವ್ಯಕ್ತಿಯಿಂದ ಯಕೃತ್‌ ಪಡೆಯಲಾಯಿತು. ವಾಣಿ ಅವರ ತಂದೆ ಆರು ವಾರಗಳಲ್ಲಿ ಸಾಮಾನ್ಯ ಜೀವನಕ್ಕೆ ಮರಳುತ್ತಾರೆ” ಎಂದು ವೈದ್ಯರು ಹೇಳಿದ್ದಾರೆ.

ದಾನಿ ಮತ್ತು ಸ್ವೀಕರಿಸುವವರ ಯಕೃತ್ತು ಮೂರರಿಂದ ನಾಲ್ಕು ವಾರಗಳಲ್ಲಿ ಸಾಮಾನ್ಯ ಗಾತ್ರದ 90% ಕ್ಕೆ ಬೆಳೆಯುತ್ತದೆ. “ಶಸ್ತ್ರಚಿಕಿತ್ಸಕರ ಪರಿಣಿತ ತಂಡಗಳು, ಸುಧಾರಿತ ತಂತ್ರಜ್ಞಾನ ಮತ್ತು ಪೆರಿಆಪರೇಟಿವ್ ಅವಧಿಯಲ್ಲಿ ಉತ್ತಮ ಆರೈಕೆ ಮಾಡುವುದರಿಂದ, ದಾನಿಗಳಿಗೆ ಅಪಾಯವು ಕಡಿಮೆಯಾಗಿದೆ” ಎಂದು ಡಾ ಕಿಂಜರಾಪು ಹೇಳಿದ್ದಾರೆ.

ಸರಾಸರಿ 1,00,000 ಭಾರತೀಯರು ಯಕೃತ್ತಿನ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ತಡವಾದ ರೋಗನಿರ್ಣಯವು 15% ರಿಂದ 20% ರಷ್ಟು ಸಾವಿಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 


ಇದನ್ನೂ ಓದಿ: ಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...