Homeಮುಖಪುಟ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಸಮುದಾಯವು ಅತ್ಯಂತ ಶೋಷಿತ ಜನಾಂಗವಾಗಿದೆ. ಈ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿರುವ ವಿಡಿಯೊ ವೈರಲ್ ಆಗಿದೆ. ನರಿಕ್ಕುರವ ಸಮುದಾಯ ಪದೇ ಪದೇ ಅವಮಾನಕ್ಕೊಳಗಾಗುತ್ತಿರುವ ಘಟನೆಗಳು ತಮಿಳುನಾಡಿನಲ್ಲಿ ನಡೆಯುತ್ತಲೇ ಇವೆ.

- Advertisement -
- Advertisement -

ನರಿಕ್ಕುರವ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (ಟಿಎನ್‌‌ಎಸ್‌ಟಿಸಿ) ಸಿಬ್ಬಂದಿ ಈ ದುಷ್ಕೃತ್ಯ ನಡೆಸಿದ್ದು, ಸಿಬ್ಬಂದಿಯನ್ನು ಅಮಾನತು ಮಾಡಿದೆ.

ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ಮಗು ಸೇರಿದಂತೆ ಕುಟುಂಬವನ್ನು ನಾಗರಕೋಯಿಲ್‌ನಲ್ಲಿ ಕೆಳಗಿಳಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಲ್ಲಿಯೂರು ಮಾರ್ಗವಾಗಿ ತಿರುನಲ್ವೇಲಿಗೆ ತೆರಳುತ್ತಿದ್ದ ಬಸ್‌ ಹತ್ತಲು ಯತ್ನಿಸಿದ ಕುಟುಂಬವನ್ನು ಅವಮಾನಿಸಲಾಗಿದೆ. ವಡಸ್ಸೆರಿ ಬಸ್ ನಿಲ್ದಾಣದಲ್ಲಿ ಅವರು ಬಸ್‌ನಿಂದ ಇಳಿಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ. ವಯಸ್ಸಾಯದ ಮುದುಕರೊಬ್ಬರು ಕೋಲು ಹಿಡಿದು ಕೆಳಗಿಳಿಯುತ್ತಾರೆ. ಬಸ್‌ನಿಂದ ಕೆಳಗಿಳಿಸಿದಾಗ ಮಗು ಅಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜೊತೆಗೆ ಒಬ್ಬ ಮಹಿಳೆಯೂ ಇದ್ದಾರೆ.

ಬಸ್ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬಸ್ ನಿಲ್ಲಿಸಿ ಮಗು ಸೇರಿದಂತೆ ಕುಟುಂಬದವರನ್ನು ಕೆಳಗಿಳಿಸಲಾಗಿದೆ. ಅಲ್ಲದೇ ಅವರ ಸಾಮಾನುಗಳನ್ನು ಬಸ್ಸಿನಿಂದ ಹೊರಗೆ ಎಸೆಯಲಾಗಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋ ಆಧರಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಟಿಎನ್ಎಸ್‌‌ಟಿಸಿ ನಾಗರಕೋಯಿಲ್ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ತಿಳಿಸಿದ್ದಾರೆ.

ಎರಡನೇ ಘಟನೆ: ತಮಿಳುನಾಡಿನಲ್ಲಿ ಈ ವಾರ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಕೊಲಾಚೆಲ್‌ನಲ್ಲಿ ಒಣಮೀನು ಮಾರಾಟ ಮಾಡುತ್ತಿದ್ದ ವೃದ್ಧ ಮಹಿಳೆಯನ್ನು ಬಲವಂತವಾಗಿ ಬಸ್‌ನಿಂದ ಹೊರಹಾಕಿದ್ದಕ್ಕಾಗಿ ಟಿಎನ್‌ಎಸ್‌ಟಿಸಿ ಬಸ್‌ನ ಚಾಲಕ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬಳಿಕ ಹಿರಿಯ ಟಿಎನ್‌ಎಸ್‌ಟಿಸಿ ಅಧಿಕಾರಿಯೊಬ್ಬರು ಮಹಿಳೆಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿತ್ತು.


ಇದನ್ನೂ ಓದಿರಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?


ನರಿಕ್ಕುರವ ಸಮುದಾಯದ ಮಹಿಳೆಗೆ ಊಟ ನಿರಾಕರಣೆ

ನರಿಕ್ಕುರವ ಸಮುದಾಯದ ಮಹಿಳೆಗೆ ದೇವಸ್ಥಾನದಲ್ಲಿ ಊಟ ನಿರಾಕರಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನರಿಕ್ಕುರವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಸಮಾನತೆ ಸಾರಿದ್ದರು.

ಅಕ್ಟೋಬರ್ 29ರಂದು ಸಚಿವ ಪಿ.ಕೆ.ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್.ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಅಶ್ವಿನಿಯವರ ನರಿಕ್ಕುರವ ಅಲೆಮಾರಿ ಸಮುದಾತದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿತ್ತು.

ಮಹಿಳೆಯನ್ನು ಭೇಟಿಯಾಗಿದ್ದ ಸಿಎಂ ಸ್ಟಾಲಿನ್‌

ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದ್ದರು.

ಜನಪ್ರತಿನಿಧಿಗಳು ಇಷ್ಟೆಲ್ಲ ಕ್ರಮಗಳನ್ನು ಜರುಗಿಸುತ್ತಿದ್ದರೂ ನರಿಕ್ಕುರವ ಸಮುದಾಯ ಮತ್ತೆ ಮತ್ತೆ ಅವಮಾನಕ್ಕೆ ಒಳಗಾಗುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ.


ಇದನ್ನೂ ಓದಿರಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...