Homeಕರ್ನಾಟಕಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

ಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

- Advertisement -
- Advertisement -

“ಶೋಷಿತರ ಅತ್ಯಂತ ಪ್ರಬಲ‌ ಮಿತ್ರ ಅವರದ್ದೇ ಆದ ಸಂಘಟನೆ” ಎಂದು ಜೈಭೀಮ್‌ ಸಿನೆಮಾಕ್ಕೆ ಪ್ರೇರಣೆಯಾದ, ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಹೇಳಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನ್ಯಾಯಾಂಗ ಏನು ಮಾಡಲು ಸಾಧ್ಯವಾಗುತ್ತದೆ? ಸಮಾಜ ಬದಲಾಗಬೇಕಲ್ಲವೇ ಎಂದು ಅನೇಕರು ನಮ್ಮನ್ನು ಕೇಳುತ್ತಾರೆ. ಸಮಾಜ ಬದಲಾಗುವವರೆಗೆ ಶೋಷಿತರಿಗೆ ನ್ಯಾಯ ಬೇಕಲ್ಲವೇ? ಶೋಷಿತರು ಬದುಕಬೇಕಲ್ಲವೇ? ಪ್ರತಿದಿನ ಅವರು ಜೀವನ ಮಾಡಬೇಕಾದರೆ ನ್ಯಾಯಾಂಗ ರಕ್ಷಣೆ ನೀಡಬೇಕು. ಒಬ್ಬ ಸರಿಯಾದ ವಕೀಲ, ಒಬ್ಬ ದಿಟ್ಟತನ ಇರುವ ನ್ಯಾಯಾಧೀಶ, ಒಬ್ಬ ಸರಿಯಾದ ಅಧಿಕಾರಿ ಅಂತಹ ಬದಲಾವಣೆಗಳನ್ನು ತರಬಲ್ಲರು. ಆ ಶಕ್ತಿ ಅವರಿಗೆ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಜ ಬದಲಾಗುವವರೆಗೆ ಶೋಷಿತರು ಬದಕಬೇಕಾದ ರೀತಿಯಲ್ಲಿ ನ್ಯಾಯಾಂಗ ಇರಬೇಕು. ಭಾರತದೊಳಗೆ ಶೋಷಿತರ ಸ್ಥಿತಿ ಏನು ಎಂಬುದನ್ನು ನಾನು, ನಾಗಮೋಹನ್ ದಾಸ್ ಥರದವರು ನೋಡಿದ್ದೇವೆ. ‘ಜೈ ಭೀಮ್‌’ ಥರದ ಸಿನೆಮಾಗಳಿಂದ ಲಾಕಪ್‌ ಡೆತ್‌ಗಳು ನಿಂತು ಹೋಗುವುದಿಲ್ಲ. ಆದರೆ ಸಿನೆಮಾ ನೋಡಿದ ಜನರು ಎಚ್ಚೆತ್ತುಕೊಂಡು ಸಂಘಟಿತರಾದಾಗ ಖಂಡಿತ ಇಂತಹ ಘಟನೆಗಳು ನಿಲ್ಲುತ್ತವೆ. ಜೈ ಭೀಮ್‌ ಸಿನೆಮಾ ಬಂದ ಮೇಲೆ ಸಾಕಷ್ಟು ಕಡೆ ಜನರು ಸಂಘಟಿತರಾಗುತ್ತಿದ್ದಾರೆ. ಅನೇಕ ಆದಿವಾಸಿ ಗುಂಪುಗಳು ಸಂಘಟನೆ ಮಾಡಿಕೊಂಡು ಹೋರಾಟಕ್ಕೆ ಇಳಿಯುತ್ತಿರುವುದನ್ನು ನಾವು ಕೇಳಿದ್ದೇವೆ ಎಂದರು.

ಇದನ್ನೂ ಓದಿರಿ: ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಬ್ರಿಟಿಷರ ಕಾಲದಲ್ಲಿ ಸಾರ್ವಜನಿಕರನ್ನು ಅಪರಾಧಿಗಳೆಂದು ಬಿಂಬಿಸುವ ಕಾನೂನುಗಳು ಜಾರಿಯಾದವು. ಅನೇಕ ಬುಡಕಟ್ಟು ಸಮುದಾಯಗಳನ್ನು ಕ್ರಿಮಿನಲ್‌ಗಳು ಎಂದು ಪಟ್ಟಿ ಮಾಡಲಾಯಿತು. ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋದರೂ ಟ್ರೈಬ್‌ಗಳನ್ನು ಕ್ರಿಮಿನಲ್‌ಗಳಾಗಿ ನೋಡುವ ಮನಸ್ಥಿತಿ ಮಾತ್ರ ಪೊಲೀಸರಲ್ಲಿ ಇನ್ನೂ ಹಾಗೇ ಇದೆ ಎಂದು ವಿಷಾದಿಸಿದರು.

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿದರು.

ಇಂದು ಪೊಲೀಸರು ಒಂದು ಚಾರ್ಜ್‌‌ಶೀಟ್‌ ಅಥವಾ ದೂರು ಬರೆದರೆ ಅದರ ಮೇಲೆ ‘ಕೆ.ಆರ್‌.’, ‘ಐ.ಆರ್‌.’ ಎಂದು ಬರೆಯುತ್ತಾರೆ. ಕೆ.ಆರ್‌. ಎಂದರೆ- ಕೊರಗ, ಐ.ಆರ್‌. ಎಂದರೆ ಇರುಳಿಗ ಎಂದರ್ಥ. ಪೊಲೀಸರ ಮನಸ್ಸಿನಲ್ಲಿರುವ ಪೂರ್ವಗ್ರಹದಿಂದಾಗಿ ಹೆಸರಿನ ಮುಂದೆ ಹೀಗೆ ಬರೆಯಲಾಗುತ್ತಿದೆ. ಹೆಸರಿನ ಮುಂದಿನ ಇನ್ಶಿಯಲ್‌ ನೋಡಿದ ತಕ್ಷಣ ಅಧಿಕಾರಿಗಳು, ಈ ಜನರನ್ನು ಅಪರಾಧಿಗಳು ಎಂದು ಮೊದಲೇ ತೀರ್ಮಾನ ಮಾಡಿಬಿಡುತ್ತಾರೆ. ಅಲ್ಲೇ ತೀರ್ಪು ಕೊಟ್ಟು, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಂತೆ ಶಿಕ್ಷೆಗೊಳಪಡಿಸುವುದನ್ನು ನೋಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಬುಡಕಟ್ಟು ಸಮುದಾಯಗಳನ್ನು ಬ್ರಿಟೀಷರು ‘ಕ್ರಿಮಿನಲ್ ಟ್ರೈಬ್’ ಗಳೆಂದು ಗುರುತಿಸುವ ಕಾಯ್ದೆ‌ಮಾಡಿದರು. ಇದನ್ನು ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸಿದರೂ ಸ್ವಾತಂತ್ರ್ಯ ಬರುವವರೆಗೂ ಆ ಕಾನೂನು ಹಾಗೇ ಇತ್ತು.‌ 1947ರ ನಂತರ ಕಾಂಗ್ರೆಸ್‌ ಆ ಕಾಯ್ದೆಯನ್ನು ವಾಪಾಸ್ ತೆಗೆದುಕೊಂಡಿತು, ಆದರೆ ಪೊಲೀಸರ ದೃಷ್ಟಿಕೋನ ಬದಲಾಗಲಿಲ್ಲ. ಈಗಲೂ ಬುಡಕಟ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದು, ಎನ್ ಕೌಂಟರ್ ಮಾಡುವುದು, ಲಾಕಪ್‌ಗಳಲ್ಲಿ ಹಿಂಸಿಸುವುದು ಮತ್ತು ಕೊಲ್ಲುವುದು ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳಿದರು.

ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಬೇಕಾಗಿದೆ. ಆ ಬದಲಾವಣೆಗಾಗಿ ಜನರನ್ನು ಬದಲಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ನಾನು ಮತ್ತು ನಾಗಮೋಹನ್ ದಾಸ್ ಥರದ ನಿವೃತ್ತ ನ್ಯಾಯಾಧೀಶರು ನಿಜವಾದ ಅಧಿಕಾರವನ್ನು ಈಗ ಹೊಂದಿಲ್ಲ. ಆದರೂ ಪರಿಣಾಮಕಾರಿಯಾದ ಒಂದು ಅಧಿಕಾರ ನಮಗಿದೆ. ನಾವು ಜನರ ಮುಂದೆ ಹೋಗಬಹುದು, ಈ ನ್ಯಾಯಾಂಗ ಜನರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಬಿಚ್ಚಿಡಬಹುದು. ನ್ಯಾಯಾಂಗ ಬದಲಿಸಲಾಗದ್ದನ್ನು ಜನರು ಬದಲಿಸಬಲ್ಲರು. ಹೀಗಾಗಿ ಶೋಷಿತರನ್ನು ಎಚ್ಚರಿಸಬೇಕು ಎಂಬ ಕಾರಣಕ್ಕಾಗಿ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂದರು. ಈ ದೇಶದ ಶೋಷಿತರಿಗೆ ಶಿಕ್ಷಣ ಎನ್ನುವುದು ಖಂಡಿತವಾಗಿಯೂ ಬಿಡುಗಡೆಯ ಹಾದಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಸ್ಟೀಸ್‌ ನಾಗಮೋಹನ ದಾಸ್ ಮಾತನಾಡಿ, “ಭಾರತ ಗಣರಾಜ್ಯವಾದ ಬಳಿಕ ನಾವು ಒಂದಿಷ್ಟು ಸಾಧನೆಯನ್ನು ಮಾಡಿದ್ದೇವೆ. ಆದರೆ ಇಂದು ಹಲವು ಸಮಸ್ಯೆಗಳು, ಸವಾಲುಗಳು ನಮ್ಮನ್ನು ಕಾಡುತ್ತಿವೆ. ನಾವೆಲ್ಲ ಹೋರಾಟ ಮಾಡಿದಾಗ ಮೂಢನಂಬಿಕೆಗಳ ನಿಷೇಧ ಕಾಯ್ದೆ ಜಾರಿಗೆ ಬಂತು. ಆದರೆ ಒಂದೇ ಒಂದು ಪ್ರಕರಣ ದಾಖಲಾಗಲಿಲ್ಲ. ಚುನಾವಣೆಯಲ್ಲಿ ಜಾತಿ, ಹಣ, ಧರ್ಮದ ಪ್ರಭಾವವನ್ನು ಯಾವ ರೀತಿ ಮುಕ್ತ ಮಾಡಬೇಕು? ಜನಪ್ರತಿನಿಧಿಗಳು ತಮಗೆ ಇಷ್ಟಬಂದಾಗ ರಾಜೀನಾಮೆ ಕೊಟ್ಟು ಉಪಚುನಾವಣೆಯನ್ನು ನಮ್ಮ ಮೇಲೆ ಏರುವಂತಹ ಸಂದರ್ಭದಲ್ಲಿ ಏನು ಮಾಡಬೇಕು? ಪರಿಹಾರ ಏನು ಎಂಬುದನ್ನು ಪುಸ್ತಕದಲ್ಲಿ ಪ್ರಸ್ತಾಪ ಮಾಡಿದ್ದೇನೆ” ಎಂದು ತಿಳಿಸಿದರು.

ಚಿಂತಕರಾದ ಬಿ.ಟಿ ಲಲಿತಾ ನಾಯಕ್, ಮಾವಳ್ಳಿ ಶಂಕರ್, ರಾಜಶೇಖರ್ ಮೂರ್ತಿ, ಗೋಪಾಲಕೃಷ್ಣ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಜರಿದ್ದರು.


ಇದನ್ನೂ ಓದಿರಿ: ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...