Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...