Homeಮುಖಪುಟಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ದೋಷ ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ ಎನ್ನುತ್ತಾರೆ ಸಂದೀಫ್ ಸಿಂಗ್

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ ಒಂದು ವರ್ಷಕ್ಕೂ ಹೆಚ್ಚು ದಿನಗಳಿಂದ ಹಗಲು ರಾತ್ರಿ ಎನ್ನದೆ, ದೆಹಲಿ ಗಡಿಗಳಲ್ಲಿನ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಅಧಿಕೃತ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ದೆಹಲಿಯ ಗಡಿಗಳಲ್ಲಿ ಭದ್ರವಾಗಿ ಕೂತಿದ್ದ ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಎಲ್ಲಾ ಹಕ್ಕೊತ್ತಾಗಳನ್ನು ಒಕ್ಕೂಟ ಸರ್ಕಾರ ಒಪ್ಪಿಕೊಂಡಿದೆ. ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿರುವ ರೈತರು ಸಂಭ್ರಮದ ವಿಜಯೀ ಮೆರವಣಿಗೆ ಮೂಲಕ ತಮ್ಮ ಸ್ವಗ್ರಾಮಗಳನ್ನು ತಲುಪುತ್ತಿದ್ದಾರೆ. ಈ ವಿಜಯಕ್ಕೆ ಲಕ್ಷಾಂತರ ಜನರ ಕೊಡುಗೆಯಿದೆ. ಅಂತಯೇ ಸಂದೀಪ್ ಸಿಂಗ್ ತಮ್ಮ ವೇಗವಾದ, ವಸ್ತುನಿಷ್ಠ ವರದಿಗಾರಿಗೆ ಮೂಲಕ ರೈತ ಹೋರಾಟದ ಅಸಲಿ ವಿಷಯಗಳು ಪ್ರಪಂಚ ತಲುಪವಂತೆ ಮಾಡುವ ಮೂಲಕ ಹೋರಾಟದ ಭಾಗವಾಗಿದ್ದರು.

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ರೈತ ಹೋರಾಟವನ್ನು ವರದಿ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ ಒಂದು ವರ್ಷದಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ, ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“2020ರ ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಮೊದಲು ನಾಲ್ಕು ತಿಂಗಳು ಒಮ್ಮೆಯೂ ರಜೆ ತೆಗೆದುಕೊಳ್ಳಲಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಇಂದು ಸಹ ಸಂದೀಪ್ ಸಿಂಗ್ ರೈತರ ಫತೇ ಮಾರ್ಚ್ ಅನ್ನು ವರದಿ ಮಾಡಿದ್ದಾರೆ. ಅದಕ್ಕಾಗಿ ಪಂಜಾಬಿನ ಅವರ ಸ್ನೇಹಿತರೊಬ್ಬರು ರೈತರು ಮನೆಗೆ ಬರುತ್ತಿದ್ದಾರೆ. ನೀನು ಯಾವಾಗ ಬರುತ್ತೀ ಸಂದೀಪ್ ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಸಂದೀಪ್‌ರವರ ಈ ಒಂದು ವರ್ಷದ ಶ್ರಮಕ್ಕೆ ಅಭಿನಂದನೆ ಸಲ್ಲಿಸಲೇಬೇಕು.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತರ ವಿಜಯೀ ಮೆರವಣಿಗೆ ಆರಂಭ: ವಿಡಿಯೋ – ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...