Homeಮುಖಪುಟಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಪಂಡಿತರನ್ನು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಬಿಜೆಪಿ ಮತಬ್ಯಾಂಕ್‌ ಆಗಿ ಬಳಸಿದೆ ಹೊರತು, ಅವರಿಗಾಗಿ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಬಿಜೆಪಿ ಕಾಶ್ಮೀರಿ ಪಂಡಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿದೆ ಹೊರತು ಅವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರು ಅಧ್ಯಕ್ಷರಾಗಿರುವ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ)ನ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದಂತೆ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದ ಬಳಿಕ ಅವರು ಮಾತನಾಡಿದ್ದಾರೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತ್ ನಿರ್ಗಮನದ ಸಮಯದಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದಿದ್ದಕ್ಕಾಗಿ ಫಾರೂಕ್ ಅಬ್ದುಲ್ಲಾ ಅವರು ಕಾಶ್ಮೀರಿ ಪಂಡಿತರಲ್ಲಿ ಕ್ಷಮೆಯಾಚಿಸಿದರು.

“ಎನ್‌ಸಿ ಆಡಳಿತದ ಅವಧಿಯಲ್ಲಿ ಕಾಶ್ಮೀರಕ್ಕೆ ಪಂಡಿತ್ ಸಮುದಾಯ ವಾಪಸ್‌ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಆದರೆ ಕೆಲವು ವಿಚಾರಗಳು ಪಂಡಿತರ ಹತ್ಯಾಕಾಂಡ ನಡೆಯಲು ಕಾರಣವಾಗಿ ಇಡೀ ಪ್ರಕ್ರಿಯೆಯನ್ನು ಹಾಳುಮಾಡಿದವು” ಎಂದು ಅವರು ವಿಷಾದಿಸಿದ್ದಾರೆ.

“ವಲಸೆಯ ನಂತರ ಕಾಶ್ಮೀರಿ ಪಂಡಿತರು ಬಹಳಷ್ಟು ಕಷ್ಟ ಅನುಭವಿಸಿದ್ದಾರೆ. ಪಂಡಿತ ಸಮುದಾಯದ ನೋವು ಲೆಕ್ಕಕ್ಕೆ ಇಡಲಾರದಷ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಹಿಂದೂ-ಮುಸ್ಲಿಂ ವಿಭಜಕ ಶಕ್ತಿಗಳು’

“ಕೆಲವು ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದವು. ಪಂಡಿತರು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಕಣಿವೆಯಿಂದ ಹೊರಹಾಕಿದ ನಂತರ ಕಾಶ್ಮೀರವನ್ನು ಪಡೆಯಬಹುದೆಂದು ಅವರು ಭಾವಿಸಿದ್ದರು. ಆದರೆ ಅವರು ಎಂದಿಗೂ ತಮ್ಮ ಕೆಟ್ಟ ಗುರಿಯನ್ನು ಸಾಧಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮುವಿನ ಜನರನ್ನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಸಮುದಾಯಗಳು ಈಗ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದ್ವೇಷವನ್ನು ಪ್ರೀತಿಯಿಂದ ಬದಲಾಯಿಸಲು ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ನಾವೆಲ್ಲರೂ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸಬೇಕು, ಜಮ್ಮು ಕಾಶ್ಮೀರವನ್ನು ಉಳಿಸಲು ಪ್ರಯತ್ನಿಸಬೇಕು. ನಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಅವರು ಎಚ್ಚರಿಸಿದ್ದಾರೆ.

“ನಾವು ರಾಜಕಾರಣಿಗಳು, ನಮ್ಮ ಸ್ವಂತ ಲಾಭಕ್ಕಾಗಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇವೆ. ಜನರು ಕೋಮುವಾದಿ ಶಕ್ತಿಗಳಿಗೆ ಲಾಭ ಪಡೆಯಲು ಅವಕಾಶ ನೀಡಬಾರದು ಮತ್ತು ಒಗ್ಗಟ್ಟಿನಿಂದ ಮುನ್ನುಗ್ಗಿ ವಿಭಜಿಸುವವರ ನೀಚ ತಂತ್ರಗಳನ್ನು ಸೋಲಿಸಬೇಕು” ಎಂದಿರುವ ಅವರು, “ಕಾಶ್ಮೀರಿ ಪಂಡಿತರು ಕಣಿವೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಲ್ಪಸಂಖ್ಯಾತ ಘಟಕದ ನಿರ್ಣಯಗಳು: ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಕಾಶ್ಮೀರಿ ಹಿಂದೂ ದೇವಾಲಯದ ಸಂರಕ್ಷಣಾ ಮಸೂದೆಯ ಅಂಗೀಕಾರ, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಗಾಗಿ ಸಮಗ್ರ ಪ್ಯಾಕೇಜ್.


ಇದನ್ನೂ ಓದಿರಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...