Homeಮುಖಪುಟಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ಪಂಡಿತರನ್ನು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಬಿಜೆಪಿ ಮತಬ್ಯಾಂಕ್‌ ಆಗಿ ಬಳಸಿದೆ ಹೊರತು, ಅವರಿಗಾಗಿ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಬಿಜೆಪಿ ಕಾಶ್ಮೀರಿ ಪಂಡಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿದೆ ಹೊರತು ಅವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರು ಅಧ್ಯಕ್ಷರಾಗಿರುವ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ)ನ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದಂತೆ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದ ಬಳಿಕ ಅವರು ಮಾತನಾಡಿದ್ದಾರೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತ್ ನಿರ್ಗಮನದ ಸಮಯದಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದಿದ್ದಕ್ಕಾಗಿ ಫಾರೂಕ್ ಅಬ್ದುಲ್ಲಾ ಅವರು ಕಾಶ್ಮೀರಿ ಪಂಡಿತರಲ್ಲಿ ಕ್ಷಮೆಯಾಚಿಸಿದರು.

“ಎನ್‌ಸಿ ಆಡಳಿತದ ಅವಧಿಯಲ್ಲಿ ಕಾಶ್ಮೀರಕ್ಕೆ ಪಂಡಿತ್ ಸಮುದಾಯ ವಾಪಸ್‌ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಆದರೆ ಕೆಲವು ವಿಚಾರಗಳು ಪಂಡಿತರ ಹತ್ಯಾಕಾಂಡ ನಡೆಯಲು ಕಾರಣವಾಗಿ ಇಡೀ ಪ್ರಕ್ರಿಯೆಯನ್ನು ಹಾಳುಮಾಡಿದವು” ಎಂದು ಅವರು ವಿಷಾದಿಸಿದ್ದಾರೆ.

“ವಲಸೆಯ ನಂತರ ಕಾಶ್ಮೀರಿ ಪಂಡಿತರು ಬಹಳಷ್ಟು ಕಷ್ಟ ಅನುಭವಿಸಿದ್ದಾರೆ. ಪಂಡಿತ ಸಮುದಾಯದ ನೋವು ಲೆಕ್ಕಕ್ಕೆ ಇಡಲಾರದಷ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಹಿಂದೂ-ಮುಸ್ಲಿಂ ವಿಭಜಕ ಶಕ್ತಿಗಳು’

“ಕೆಲವು ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದವು. ಪಂಡಿತರು ಕಾಶ್ಮೀರ ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರತು ಮುಸ್ಲಿಮರಲ್ಲ. ಪಂಡಿತರನ್ನು ಕಣಿವೆಯಿಂದ ಹೊರಹಾಕಿದ ನಂತರ ಕಾಶ್ಮೀರವನ್ನು ಪಡೆಯಬಹುದೆಂದು ಅವರು ಭಾವಿಸಿದ್ದರು. ಆದರೆ ಅವರು ಎಂದಿಗೂ ತಮ್ಮ ಕೆಟ್ಟ ಗುರಿಯನ್ನು ಸಾಧಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮುವಿನ ಜನರನ್ನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಸಮುದಾಯಗಳು ಈಗ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದ್ವೇಷವನ್ನು ಪ್ರೀತಿಯಿಂದ ಬದಲಾಯಿಸಲು ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ನಾವೆಲ್ಲರೂ ನಮ್ಮ ಮನಸ್ಸನ್ನು ಸ್ವಚ್ಛಗೊಳಿಸಬೇಕು, ಜಮ್ಮು ಕಾಶ್ಮೀರವನ್ನು ಉಳಿಸಲು ಪ್ರಯತ್ನಿಸಬೇಕು. ನಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಅವರು ಎಚ್ಚರಿಸಿದ್ದಾರೆ.

“ನಾವು ರಾಜಕಾರಣಿಗಳು, ನಮ್ಮ ಸ್ವಂತ ಲಾಭಕ್ಕಾಗಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇವೆ. ಜನರು ಕೋಮುವಾದಿ ಶಕ್ತಿಗಳಿಗೆ ಲಾಭ ಪಡೆಯಲು ಅವಕಾಶ ನೀಡಬಾರದು ಮತ್ತು ಒಗ್ಗಟ್ಟಿನಿಂದ ಮುನ್ನುಗ್ಗಿ ವಿಭಜಿಸುವವರ ನೀಚ ತಂತ್ರಗಳನ್ನು ಸೋಲಿಸಬೇಕು” ಎಂದಿರುವ ಅವರು, “ಕಾಶ್ಮೀರಿ ಪಂಡಿತರು ಕಣಿವೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಲ್ಪಸಂಖ್ಯಾತ ಘಟಕದ ನಿರ್ಣಯಗಳು: ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಕಾಶ್ಮೀರಿ ಹಿಂದೂ ದೇವಾಲಯದ ಸಂರಕ್ಷಣಾ ಮಸೂದೆಯ ಅಂಗೀಕಾರ, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿಗಾಗಿ ಸಮಗ್ರ ಪ್ಯಾಕೇಜ್.


ಇದನ್ನೂ ಓದಿರಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...