Homeಮುಖಪುಟಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ವಿಸ್ತರಣೆ ವಿರುದ್ಧ ಸುಪ್ರಿಂ ಮೆಟ್ಟಿಲೇರಿದ ಪಂಜಾಬ್

ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ವಿಸ್ತರಣೆ ವಿರುದ್ಧ ಸುಪ್ರಿಂ ಮೆಟ್ಟಿಲೇರಿದ ಪಂಜಾಬ್

- Advertisement -
- Advertisement -

ಗಡಿ ಭದ್ರತಾ ಪಡೆಯ ವ್ಯಾಪ್ತಿಯನ್ನು 15ರಿಂದ 50 ಕಿ.ಮೀವರೆಗೆ ವಿಸ್ತರಿಸುವ ಕೇಂದ್ರದ ಇತ್ತೀಚಿನ ಅಧಿಸೂಚನೆಯ ವಿರುದ್ಧ ಪಂಜಾಬ್ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿಯ ವಿಸ್ತರಣೆಯನ್ನು ಪ್ರಶ್ನಿಸಿದ ಮೊದಲ ರಾಜ್ಯ ಪಂಜಾಬ್‌ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಧು ಶ್ಲಾಘಿಸಿದ್ದಾರೆ.

“ಸಂವಿಧಾನದಲ್ಲಿ ಅಡಕವಾಗಿರುವ ತತ್ವಗಳನ್ನು ಉಳಿಸಿಕೊಳ್ಳಲು ಅಂದರೆ ಫೆಡರಲ್ ರಚನೆ, ರಾಜ್ಯಗಳ ಸ್ವಾಯತ್ತತೆಯನ್ನು ಉಳಿಸಿಕೊಳ್ಳುವ ಹೋರಾಟ ಆರಂಭವಾಗಿದೆ. ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನೋಟಿಸ್ ನೀಡಲಾಗಿದೆ” ಎಂದು ಸಿಧು ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್‌ನಲ್ಲಿ ಗೃಹ ವ್ಯವಹಾರಗಳ ಸಚಿವಾಲಯವು ಬಿಎಸ್‌ಎಫ್‌ನ ಅಧಿಕಾರ ವ್ಯಾಪ್ತಿಯನ್ನು ತಿದ್ದುಪಡಿ ಮಾಡಿತು. ಅಕ್ಟೋಬರ್ 11, 2021ರಿಂದ ಜಾರಿಗೆ ಅಧಿಸೂಚನೆ ಹೊರಡಿಸಲಾಗಿತ್ತು. “ಭಾರತ-ಪಾಕಿಸ್ತಾನ, ಭಾರತ-ಬಾಂಗ್ಲಾದೇಶ ಗಡಿಗಳ ಉದ್ದಕ್ಕೂ ಭಾರತದೊಳಗಿನ 50 ಕಿ.ಮೀ. ವ್ಯಾಪ್ತಿಯಲ್ಲಿ ಬಿಎಸ್‌ಎಫ್ ಶೋಧಗಳನ್ನು ನಡೆಸಬಹುದು, ಶಂಕಿತರನ್ನು ಬಂಧಿಸಬಹುದು” ಎಂದು ತಿದ್ದುಪಡಿ ಮಾಡಲಾಗಿತ್ತು.

ಈ ತಿದ್ದುಪಡಿಯಿಂದ ಅಧಿಕಾರ ಪಡೆದ ಬಿಎಸ್‌ಎಫ್‌ ಈಗ ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ತನ್ನ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಬಹುದಾಗಿದೆ. ಐದು ಈಶಾನ್ಯ ರಾಜ್ಯಗಳಲ್ಲಿ (ಮಣಿಪುರ, ಮಿಜೋರಾಂ, ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ) ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು 20 ಕಿ.ಮೀ. ಮೊಟಕುಗೊಳಿಸಲಾಗಿದೆ. ರಾಜಸ್ಥಾನದಲ್ಲಿ ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

“ಕೇಂದ್ರ ಸರ್ಕಾರವು ಗಡಿ ವಿಸ್ತರಣೆಯನ್ನು ನಿರ್ದಿಷ್ಟಪಡಿಸುವ ‘ವೇಳಾಪಟ್ಟಿ’ಯನ್ನು ಪರಿಷ್ಕರಿಸಿದೆ. ಬಿಎಸ್‌ಎಫ್‌ ಪಾಸ್‌ಪೋರ್ಟ್ ಕಾಯಿದೆ, ಎನ್‌ಡಿಪಿಎಸ್‌ ಕಾಯಿದೆ, ಕಸ್ಟಮ್ಸ್ ಕಾಯಿದೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ನಂತಹ ಕಾಯಿದೆಗಳ ಅಡಿಯಲ್ಲಿ ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಗುಜರಾತ್, ರಾಜಸ್ಥಾನ, ಪಂಜಾಬ್, ಬಂಗಾಳ ಮತ್ತು ಅಸ್ಸಾಂ ಭಾಗಗಳು ಒಳಪಡಲಿವೆ” ಎಂದು ಗೃಹ ಸಚಿವಾಲಯ ಹೇಳಿದೆ.

ಗಡಿ ಭದ್ರತಾ ಪಡೆ ಕಾಯಿದೆ, 1968ರ ಸೆಕ್ಷನ್ 139ರ ಅಡಿಯಲ್ಲಿ, ಕಾಲಕಾಲಕ್ಕೆ ಪ್ರದೇಶ ಮತ್ತು ಪಡೆಗಳ ವ್ಯಾಪ್ತಿಯನ್ನು ತಿಳಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ.


ಇದನ್ನೂ ಓದಿರಿ: ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...