Homeಮುಖಪುಟಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಭಾರತ- ಬಾಂಗ್ಲಾ ನಡುವಿನ ಗಡಿಗಳನ್ನು ಮೀರಿದ ಅಫ್ಸಾನಾ ಬೀಬಿ-ಶೇಖ್ ರಫೀಕುಲ್‌ ಪ್ರೇಮಕಥನವಿದು... 26 ವರ್ಷಗಳ ದಾಂಪತ್ಯಕ್ಕೆ ಯಾವ ಪುರಾವೆ ಬೇಕು?

- Advertisement -
- Advertisement -

ನಾನು ಅವನನ್ನು ಮಾತ್ರ ಮದುವೆಯಾಗುತ್ತೇನೆ ಎಂದು ಹೇಳಿದ್ದ ಅಫ್ಸಾನಾ ಬೀಬಿ ಅವರಿಗೆ ಆಗ ಆಕೆಗೆ ಕೇವಲ 14 ವರ್ಷ. ಇಂದು, ಅವರು ಶೇಖ್ ರಫೀಕುಲ್ ಜೊತೆ 26 ವರ್ಷಗಳ ವೈವಾಹಿಕ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಗೋಲಾ ಎಂಬ ಗಡಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. “ನಾವು ಎರಡು ವಿಭಿನ್ನ ದೇಶಗಳಿಗೆ ಸೇರಿದವರಾಗಿರುವುದರಿಂದ ನಮ್ಮಿಬ್ಬರ ಪೋಷಕರು ನಮ್ಮ ಮದುವೆಯನ್ನು ವಿರೋಧಿಸಿದ್ದರು” ಎಂದು ಅವರು ನೆನಪಿಸಿಕೊಳ್ಳುತ್ತಾರೆ.

ಅವರ ಒಂದು ಅಂತಸ್ತಿನ ಮನೆಯ ಮೇಲೆ ಕುಳಿತು ಮೆಲುಕು ಹಾಕುತ್ತಿದ್ದ ಅವರಿಗೆ, ದೂರದ ಬಿಸಿಲಿನಲ್ಲಿ ಕಾಣುವ ತಾಜಾ, ಹಳದಿ ಸಾಸಿವೆ ಹೊಲಗಳು. ಅದರ ಮಧ್ಯೆ ಕಾಡುವ ವಿರೋಧ ಮತ್ತು ಅಸಮ್ಮತಿಯ ಮಂದ ನೆನಪುಗಳು.

50 ವರ್ಷದ ರಫೀಕುಲ್ ಅವರು ಸುಮಾರು 31 ವರ್ಷಗಳ ಹಿಂದೆ ಅಫ್ಸಾನಾ ಅವರೊಂದಿಗೆ ಭಾರತದಲ್ಲಿ ಬದುಕಲೆಂದು ತಮ್ಮ ಕುಟುಂಬ ಮತ್ತು ದೇಶವನ್ನು (ಬಾಂಗ್ಲಾದೇಶ) ತೊರೆದಿದ್ದರು. “ಮೊದಲ ನೋಟದ ಪ್ರೀತಿಯದು. ಅವಳನ್ನು ಮದುವೆಯಾಗುವುದು ನನ್ನ ಜೀವನದ ಪ್ರಮುಖ ನಿರ್ಧಾರವಾಗಿತ್ತು. ನಾನು ದೇಶತೊರೆದಿದ್ದಕ್ಕಾಗಿ ಒಂದು ದಿನವೂ ವಿಷಾದಿಸುವುದಿಲ್ಲ” ಎಂದು ರಫೀಕುಲ್ ಹೇಳುತ್ತಾರೆ.

ಭಾರತ-ಬಾಂಗ್ಲಾದೇಶ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಲಾಲ್ಗೋಲಾ ಹಳ್ಳಿಯಲ್ಲಿ ಈ ದಂಪತಿಗಳು ಮತ್ತು ಅವರ ನಾಲ್ಕು ಮಕ್ಕಳು ವಾಸಿಸುತ್ತಿದ್ದಾರೆ. ಗಡಿಯಲ್ಲಿರುವ ಮುಳ್ಳುತಂತಿಯ ಬೇಲಿಗಳ ಆಚೆಯೇ ರಫೀಕುಲ್ ಬೆಳೆದದ್ದು, ಗಡಿಯಲ್ಲೇ ಹರಿಯುವ ಪದ್ಮಾ ನದಿಯು ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿದೆ.

“ಆಗ, 90ರ ದಶಕದಲ್ಲಿ, ಇದು ಅಂದಾಜಿನ ಗಡಿಯಾಗಿತ್ತು. ಯಾವುದೇ ಬೇಲಿ ಇರಲಿಲ್ಲ. ಎರಡೂ ಕಡೆ ಜನರ ಸಂಚಾರ ಸಾಮಾನ್ಯವಾಗಿತ್ತು” ಎಂದು ರಫೀಕುಲ್ ನೆನಪಿಸಿಕೊಳ್ಳುತ್ತಾರೆ. ಕೆಲಸ ಸಿಗುವ ನಿರೀಕ್ಷೆಯಲ್ಲಿ ಲಾಲ್ಗೊಲಾಗೆ ತೆರಳಲು ಅವರು ಉದ್ದೇಶಿಸಿದ್ದರು. ಆದರೆ ಅವರು ಕೋಲ್ಕತ್ತಾಗೆ ಬಂದರು. ಅವರು ತಮ್ಮ ಮನೆಗೆ ಮರಳಲು ಹಣ ಸಂಪಾದಿಸಲು ಸೀಲ್ದಾ ರೈಲು ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬೇಕಾಗಿತ್ತು.

ಆದರೆ, ಅವರಿಚ್ಚಿಸಿದ್ದ ಉದ್ಯೋಗ ಅಲ್ಲಿ ದೊರೆಯಲಿಲ್ಲ. ಹೀಗಾಗಿ ಅವರು ಮುರ್ಷಿದಾಬಾದ್‌ಗೆ ಮರಳಿದರು. ಐದು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರು. ಆಗ ಅವರು ಅಫ್ಸಾನಾ ಅವರ ಸಹೋದರರ ಗೆಳೆಯನಾಗಿದ್ದರು. ನಂತರ, ರಫೀಕುಲ್ ಅವರು ಅಫ್ಸಾನಾರನ್ನು ಮೊದಲ ಬಾರಿಗೆ ಭೇಟಿ ಮಾಡಿದರು. ಅದೂ, ಅವರ ಮನೆಯಲ್ಲೇ. ಆದರೆ, ಅವರ ಪ್ರೀತಿಯಿಂದ ಮದುವೆಯವರೆಗಿನ ಪ್ರಯಾಣವು ಸುಲಭವಾಗಿರಲಿಲ್ಲ.

“ರಫೀಕುಲ್ ಅವರ ತಂದೆ ನಮ್ಮ ಮದುವೆಯನ್ನು ಒಪ್ಪಲಿಲ್ಲ. ನನ್ನ ಪೋಷಕರು ಮತ್ತು ಸಹೋದರರೂ ಕೂಡ ಇದಕ್ಕೆ ವಿರುದ್ಧವಾಗಿದ್ದರು. ಏಕೆಂದರೆ, ಎರಡೂ ದೇಶಗಳ ಗಡಿಯಲ್ಲಿ ಬೇಲಿಗಳು ಬಂದರೆ ಏನಾಗುತ್ತದೆ ಎಂದು ಅವರು ಭಯಪಟ್ಟಿದ್ದರು” ಎಂದು 40 ವರ್ಷದ ಅಫ್ಸಾನಾ ಹೇಳುತ್ತಾರೆ.

ಆದರೂ ಅವರು ಹೇಗೂ ಮದುವೆಯಾದರು. ರಫೀಕುಲ್ ಅವರು ಕುಟುಂಬವನ್ನು, ಬಾಂಗ್ಲಾವನ್ನು ತೊರೆದು ಭಾರತದಲ್ಲಿ ಅಫ್ಸಾನಾ ಜೊತೆ ನೆಲೆಸಲು ಅತ್ಯಂತ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡರು. “ನನ್ನ ಮಾವನ ಮನೆಯವರು ನಮಗೆ ಅವರ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಿಕೊಟ್ಟರು. ಅಲ್ಲದೆ, ಸಣ್ಣ ಜಮೀನನ್ನು ಖರೀದಿಸಲು ನಮಗೆ ಸಹಾಯ ಮಾಡಿದರು. ನಾವು ನೆಲೆ ನಿಲ್ಲಲು ಅವರು ಸಹಕರಿಸಿದರು” ಎಂದು ರಫೀಕುಲ್ ಹೇಳುತ್ತಾರೆ.

ರಫೀಕುಲ್ ಅವರು ಬಾಂಗ್ಲಾದೇಶದಲ್ಲಿ ಅವರ ಹೆತ್ತವರು ಮತ್ತು ನಾಲ್ಕು ಸಹೋದರಿಯರೊಂದಿಗೆ ವಾಸವಾಗಿದ್ದರು. ಅವರು ಬಾಂಗ್ಲಾ ತೊರೆದು ಬಂದ ನಂತರ, ಕಳೆದ ಎರಡು ದಶಕಗಳಲ್ಲಿ ಒಮ್ಮೆ ಮಾತ್ರ ಮನೆಗೆ ಹೋಗಿಬಂದಿದ್ದಾರೆ. ಅದು ಕೇವಲ ಒಂದು ದಿನಕ್ಕಾಗಿ ಮಾತ್ರ. “ಸುಮಾರು 10 ವರ್ಷಗಳ ಹಿಂದೆ, ನನ್ನ ತಾಯಿ ಇನ್ನಿಲ್ಲ ಎಂಬ ಸುದ್ದಿ ಬಂದಿತ್ತು. ಆಗ ಗಡಿ ಪ್ರವೇಶಕ್ಕೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದ ನಂತರ ಭಾರತೀಯರಿಗೆ ಬಾಂಗ್ಲಾದೇಶಕ್ಕೆ ಒಂದು ದಿನ ಭೇಟಿ ನೀಡಲು ಅವಕಾಶವನ್ನು ಗಡಿ ಭದ್ರತಾ ಪಡೆ ನೀಡುತ್ತಿತ್ತು” ಎಂದು ಅವರು ಹೇಳುತ್ತಾರೆ.

ದಂಪತಿಗಳ ಜೀವನವು ಸರಾಗವಾಗಿ ಸಾಗುತ್ತಿದೆ. ಅವರ ಹಿರಿಯ ಮಗ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಮಗಳ ಮದುವೆಯಾಗಿದೆ. ಅವರ ಇನ್ನಿಬ್ಬರು ಹೆಣ್ಣು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ.

ಆದರೆ, ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಲು ಮುಂದಾದಾಗ ರಫೀಕುಲ್‌ಗೆ ಅನಿಶ್ಚಿತತೆ ಎದುರಾಗಿದೆ. ರಫೀಕುಲ್ ಈಗ ತನ್ನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. “ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ನನ್ನ ಬಳಿ ಎಲ್ಲಾ ಭಾರತೀಯ ದಾಖಲೆಗಳು ಮತ್ತು ಕಾಗದಗಳಿವೆ. ನನ್ನ ಹೆಂಡತಿ ಮಕ್ಕಳಿಗಿಂತ ನನ್ನನ್ನು ಈ ದೇಶದವನಾಗಿಸುವ ದಾಖಲೆ ಬೇರೊಂದಿಲ್ಲ. ಅವು ನನ್ನ ಪ್ರಮುಖ ದಾಖಲೆಗಳಾಗಿವೆ” ಎನ್ನುತ್ತಾರೆ ರಫೀಕುಲ್.

“ನಾನು ಅವನನ್ನು ತೊರೆಯಲು ಎಂದಿಗೂ ಅನುಮತಿಸುವುದಿಲ್ಲ. ನನ್ನ ಮತ್ತು ನನ್ನ ಮಕ್ಕಳ ಬಗ್ಗೆ ಅವರಿಗೆ ಜವಾಬ್ದಾರಿ ಇದೆ. ನಾನು ಭಾರತದಲ್ಲಿ ಅವರೊಂದಿಗೆ ನನ್ನ ಜೀವನವನ್ನು ಕಟ್ಟಿಕೊಂಡಿದ್ದೇನೆ. ಯಾರೂ ಅವರನ್ನು ನಮ್ಮಿಂದ ದೂರ ಮಾಡಲು ಸಾಧ್ಯವಿಲ್ಲ” ಎಂದು ಅಫ್ಸಾನಾ ಹೇಳುತ್ತಾರೆ.

ಮೂಲ: ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...