Homeಮುಖಪುಟಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

ಭಾರತ- ಬಾಂಗ್ಲಾ ನಡುವಿನ ಗಡಿಗಳನ್ನು ಮೀರಿದ ಅಫ್ಸಾನಾ ಬೀಬಿ-ಶೇಖ್ ರಫೀಕುಲ್‌ ಪ್ರೇಮಕಥನವಿದು... 26 ವರ್ಷಗಳ ದಾಂಪತ್ಯಕ್ಕೆ ಯಾವ ಪುರಾವೆ ಬೇಕು?

- Advertisement -
- Advertisement -

ನಾನು ಅವನನ್ನು ಮಾತ್ರ ಮದುವೆಯಾಗುತ್ತೇನೆ ಎಂದು ಹೇಳಿದ್ದ ಅಫ್ಸಾನಾ ಬೀಬಿ ಅವರಿಗೆ ಆಗ ಆಕೆಗೆ ಕೇವಲ 14 ವರ್ಷ. ಇಂದು, ಅವರು ಶೇಖ್ ರಫೀಕುಲ್ ಜೊತೆ 26 ವರ್ಷಗಳ ವೈವಾಹಿಕ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಗೋಲಾ ಎಂಬ ಗಡಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. “ನಾವು ಎರಡು ವಿಭಿನ್ನ ದೇಶಗಳಿಗೆ ಸೇರಿದವರಾಗಿರುವುದರಿಂದ ನಮ್ಮಿಬ್ಬರ ಪೋಷಕರು ನಮ್ಮ ಮದುವೆಯನ್ನು ವಿರೋಧಿಸಿದ್ದರು” ಎಂದು ಅವರು ನೆನಪಿಸಿಕೊಳ್ಳುತ್ತಾರೆ.

ಅವರ ಒಂದು ಅಂತಸ್ತಿನ ಮನೆಯ ಮೇಲೆ ಕುಳಿತು ಮೆಲುಕು ಹಾಕುತ್ತಿದ್ದ ಅವರಿಗೆ, ದೂರದ ಬಿಸಿಲಿನಲ್ಲಿ ಕಾಣುವ ತಾಜಾ, ಹಳದಿ ಸಾಸಿವೆ ಹೊಲಗಳು. ಅದರ ಮಧ್ಯೆ ಕಾಡುವ ವಿರೋಧ ಮತ್ತು ಅಸಮ್ಮತಿಯ ಮಂದ ನೆನಪುಗಳು.

50 ವರ್ಷದ ರಫೀಕುಲ್ ಅವರು ಸುಮಾರು 31 ವರ್ಷಗಳ ಹಿಂದೆ ಅಫ್ಸಾನಾ ಅವರೊಂದಿಗೆ ಭಾರತದಲ್ಲಿ ಬದುಕಲೆಂದು ತಮ್ಮ ಕುಟುಂಬ ಮತ್ತು ದೇಶವನ್ನು (ಬಾಂಗ್ಲಾದೇಶ) ತೊರೆದಿದ್ದರು. “ಮೊದಲ ನೋಟದ ಪ್ರೀತಿಯದು. ಅವಳನ್ನು ಮದುವೆಯಾಗುವುದು ನನ್ನ ಜೀವನದ ಪ್ರಮುಖ ನಿರ್ಧಾರವಾಗಿತ್ತು. ನಾನು ದೇಶತೊರೆದಿದ್ದಕ್ಕಾಗಿ ಒಂದು ದಿನವೂ ವಿಷಾದಿಸುವುದಿಲ್ಲ” ಎಂದು ರಫೀಕುಲ್ ಹೇಳುತ್ತಾರೆ.

ಭಾರತ-ಬಾಂಗ್ಲಾದೇಶ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಲಾಲ್ಗೋಲಾ ಹಳ್ಳಿಯಲ್ಲಿ ಈ ದಂಪತಿಗಳು ಮತ್ತು ಅವರ ನಾಲ್ಕು ಮಕ್ಕಳು ವಾಸಿಸುತ್ತಿದ್ದಾರೆ. ಗಡಿಯಲ್ಲಿರುವ ಮುಳ್ಳುತಂತಿಯ ಬೇಲಿಗಳ ಆಚೆಯೇ ರಫೀಕುಲ್ ಬೆಳೆದದ್ದು, ಗಡಿಯಲ್ಲೇ ಹರಿಯುವ ಪದ್ಮಾ ನದಿಯು ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿದೆ.

“ಆಗ, 90ರ ದಶಕದಲ್ಲಿ, ಇದು ಅಂದಾಜಿನ ಗಡಿಯಾಗಿತ್ತು. ಯಾವುದೇ ಬೇಲಿ ಇರಲಿಲ್ಲ. ಎರಡೂ ಕಡೆ ಜನರ ಸಂಚಾರ ಸಾಮಾನ್ಯವಾಗಿತ್ತು” ಎಂದು ರಫೀಕುಲ್ ನೆನಪಿಸಿಕೊಳ್ಳುತ್ತಾರೆ. ಕೆಲಸ ಸಿಗುವ ನಿರೀಕ್ಷೆಯಲ್ಲಿ ಲಾಲ್ಗೊಲಾಗೆ ತೆರಳಲು ಅವರು ಉದ್ದೇಶಿಸಿದ್ದರು. ಆದರೆ ಅವರು ಕೋಲ್ಕತ್ತಾಗೆ ಬಂದರು. ಅವರು ತಮ್ಮ ಮನೆಗೆ ಮರಳಲು ಹಣ ಸಂಪಾದಿಸಲು ಸೀಲ್ದಾ ರೈಲು ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬೇಕಾಗಿತ್ತು.

ಆದರೆ, ಅವರಿಚ್ಚಿಸಿದ್ದ ಉದ್ಯೋಗ ಅಲ್ಲಿ ದೊರೆಯಲಿಲ್ಲ. ಹೀಗಾಗಿ ಅವರು ಮುರ್ಷಿದಾಬಾದ್‌ಗೆ ಮರಳಿದರು. ಐದು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರು. ಆಗ ಅವರು ಅಫ್ಸಾನಾ ಅವರ ಸಹೋದರರ ಗೆಳೆಯನಾಗಿದ್ದರು. ನಂತರ, ರಫೀಕುಲ್ ಅವರು ಅಫ್ಸಾನಾರನ್ನು ಮೊದಲ ಬಾರಿಗೆ ಭೇಟಿ ಮಾಡಿದರು. ಅದೂ, ಅವರ ಮನೆಯಲ್ಲೇ. ಆದರೆ, ಅವರ ಪ್ರೀತಿಯಿಂದ ಮದುವೆಯವರೆಗಿನ ಪ್ರಯಾಣವು ಸುಲಭವಾಗಿರಲಿಲ್ಲ.

“ರಫೀಕುಲ್ ಅವರ ತಂದೆ ನಮ್ಮ ಮದುವೆಯನ್ನು ಒಪ್ಪಲಿಲ್ಲ. ನನ್ನ ಪೋಷಕರು ಮತ್ತು ಸಹೋದರರೂ ಕೂಡ ಇದಕ್ಕೆ ವಿರುದ್ಧವಾಗಿದ್ದರು. ಏಕೆಂದರೆ, ಎರಡೂ ದೇಶಗಳ ಗಡಿಯಲ್ಲಿ ಬೇಲಿಗಳು ಬಂದರೆ ಏನಾಗುತ್ತದೆ ಎಂದು ಅವರು ಭಯಪಟ್ಟಿದ್ದರು” ಎಂದು 40 ವರ್ಷದ ಅಫ್ಸಾನಾ ಹೇಳುತ್ತಾರೆ.

ಆದರೂ ಅವರು ಹೇಗೂ ಮದುವೆಯಾದರು. ರಫೀಕುಲ್ ಅವರು ಕುಟುಂಬವನ್ನು, ಬಾಂಗ್ಲಾವನ್ನು ತೊರೆದು ಭಾರತದಲ್ಲಿ ಅಫ್ಸಾನಾ ಜೊತೆ ನೆಲೆಸಲು ಅತ್ಯಂತ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡರು. “ನನ್ನ ಮಾವನ ಮನೆಯವರು ನಮಗೆ ಅವರ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಿಕೊಟ್ಟರು. ಅಲ್ಲದೆ, ಸಣ್ಣ ಜಮೀನನ್ನು ಖರೀದಿಸಲು ನಮಗೆ ಸಹಾಯ ಮಾಡಿದರು. ನಾವು ನೆಲೆ ನಿಲ್ಲಲು ಅವರು ಸಹಕರಿಸಿದರು” ಎಂದು ರಫೀಕುಲ್ ಹೇಳುತ್ತಾರೆ.

ರಫೀಕುಲ್ ಅವರು ಬಾಂಗ್ಲಾದೇಶದಲ್ಲಿ ಅವರ ಹೆತ್ತವರು ಮತ್ತು ನಾಲ್ಕು ಸಹೋದರಿಯರೊಂದಿಗೆ ವಾಸವಾಗಿದ್ದರು. ಅವರು ಬಾಂಗ್ಲಾ ತೊರೆದು ಬಂದ ನಂತರ, ಕಳೆದ ಎರಡು ದಶಕಗಳಲ್ಲಿ ಒಮ್ಮೆ ಮಾತ್ರ ಮನೆಗೆ ಹೋಗಿಬಂದಿದ್ದಾರೆ. ಅದು ಕೇವಲ ಒಂದು ದಿನಕ್ಕಾಗಿ ಮಾತ್ರ. “ಸುಮಾರು 10 ವರ್ಷಗಳ ಹಿಂದೆ, ನನ್ನ ತಾಯಿ ಇನ್ನಿಲ್ಲ ಎಂಬ ಸುದ್ದಿ ಬಂದಿತ್ತು. ಆಗ ಗಡಿ ಪ್ರವೇಶಕ್ಕೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದ ನಂತರ ಭಾರತೀಯರಿಗೆ ಬಾಂಗ್ಲಾದೇಶಕ್ಕೆ ಒಂದು ದಿನ ಭೇಟಿ ನೀಡಲು ಅವಕಾಶವನ್ನು ಗಡಿ ಭದ್ರತಾ ಪಡೆ ನೀಡುತ್ತಿತ್ತು” ಎಂದು ಅವರು ಹೇಳುತ್ತಾರೆ.

ದಂಪತಿಗಳ ಜೀವನವು ಸರಾಗವಾಗಿ ಸಾಗುತ್ತಿದೆ. ಅವರ ಹಿರಿಯ ಮಗ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಮಗಳ ಮದುವೆಯಾಗಿದೆ. ಅವರ ಇನ್ನಿಬ್ಬರು ಹೆಣ್ಣು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ.

ಆದರೆ, ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೊಳಿಸಲು ಮುಂದಾದಾಗ ರಫೀಕುಲ್‌ಗೆ ಅನಿಶ್ಚಿತತೆ ಎದುರಾಗಿದೆ. ರಫೀಕುಲ್ ಈಗ ತನ್ನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. “ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ನನ್ನ ಬಳಿ ಎಲ್ಲಾ ಭಾರತೀಯ ದಾಖಲೆಗಳು ಮತ್ತು ಕಾಗದಗಳಿವೆ. ನನ್ನ ಹೆಂಡತಿ ಮಕ್ಕಳಿಗಿಂತ ನನ್ನನ್ನು ಈ ದೇಶದವನಾಗಿಸುವ ದಾಖಲೆ ಬೇರೊಂದಿಲ್ಲ. ಅವು ನನ್ನ ಪ್ರಮುಖ ದಾಖಲೆಗಳಾಗಿವೆ” ಎನ್ನುತ್ತಾರೆ ರಫೀಕುಲ್.

“ನಾನು ಅವನನ್ನು ತೊರೆಯಲು ಎಂದಿಗೂ ಅನುಮತಿಸುವುದಿಲ್ಲ. ನನ್ನ ಮತ್ತು ನನ್ನ ಮಕ್ಕಳ ಬಗ್ಗೆ ಅವರಿಗೆ ಜವಾಬ್ದಾರಿ ಇದೆ. ನಾನು ಭಾರತದಲ್ಲಿ ಅವರೊಂದಿಗೆ ನನ್ನ ಜೀವನವನ್ನು ಕಟ್ಟಿಕೊಂಡಿದ್ದೇನೆ. ಯಾರೂ ಅವರನ್ನು ನಮ್ಮಿಂದ ದೂರ ಮಾಡಲು ಸಾಧ್ಯವಿಲ್ಲ” ಎಂದು ಅಫ್ಸಾನಾ ಹೇಳುತ್ತಾರೆ.

ಮೂಲ: ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...