Homeಕರ್ನಾಟಕಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

ಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

- Advertisement -
- Advertisement -

ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾದ ಬೆನ್ನಲ್ಲೇ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಉದ್ಘಾಟಿಸಲಾಗಿದೆ.

ಈ ಮೀಡಿಯಾ ಫೋರಂನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಸಮೀವುಲ್ಲಾ ಬೆಲಗೂರು ಅವರು ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀಲ್, ಬಿ.ವಸಂತ ಈಶ್ವರಗೆರೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ, ಜಂಟಿ ಕಾರ್ಯದರ್ಶಿಗಳಾಗಿ ರಜನಿ ಹಾಗೂ ಮಾಲತೇಶ್ ಅರಸ್ ಹರ್ತಿಕೋಟೆ, ಖಜಾಂಚಿಯಾಗಿ ಸನತ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್.ರಾಘವೇಂದ್ರ, ಗೌರೀಶ್ ಅಕ್ಕಿ, ವಿಜಯ್ ಭರಮಸಾಗರ, ದರ್ಶನ್ ಆರಾಧ್ಯ, ಪ್ರವೀಣ್ ಏಕಾಂತ, ಅಮರ್ ಪ್ರಸಾದ್, ಅಂಕಿತಾ, ಹರೀಶ್ ಅರಸು ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಎರಡು ದಶಕಗಳ ಅನುಭವ ಇರುವಂತಹ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಕರ್ನಾಟಕ ಸ್ಟೇಟ್ ಡಿಜಿಟಲ್ ಮಿಡಿಯಾ ಫೋರಮ್ ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಡಿಜಿಟಲ್ ಮಾಧ್ಯಮ ಮಿತ್ರರನ್ನೂ ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ.

ನೂತನ ಅಧ್ಯಕ್ಷರಾದ ಸಮೀವುಲ್ಲಾ ಅವರು ಮಾತನಾಡಿ, “ಡಿಜಿಟಲ್ ಮೀಡಿಯಾ ಎಂಬುದು ಪ್ರತಿಯೊಬ್ಬರಿಗೂ ನವಯುಗಕ್ಕೆ ಅವಶ್ಯಕವಾಗಿದ್ದು, ಪ್ರಿಂಟ್ ಹಾಗೂ ಟಿವಿ ಮಾಧ್ಯಮಗಳಿಗಿಂತಲೂ ಪರಿಣಾಮಕಾರಿಯಾಗಿದೆ. ವೀಕ್ಷಕರು ಮತ್ತು ಓದುಗರನ್ನು ಹೆಚ್ಚು ತಲುಪಲು ತನ್ನದೇ ಆದ ಸಾಮರ್ಥ್ಯ ಹೊಂದಿದೆ. ಹೀಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಡಿಜಿಟಲ್ ಮಾಧ್ಯಮಗಳಿಗೆ ಒತ್ತು ನೀಡಿವೆ” ಎಂದರು.

ಪಕ್ಕದ ರಾಜ್ಯಗಳಾದ ಆಂದ್ರಪ್ರದೇಶ ಮತ್ತು ತಮಿಳು ನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಡಿಜಿಟಲ್ ಮಾಧ್ಯಮ ಒಕ್ಕೂಟ ಅಸ್ಥಿತ್ವದಲ್ಲಿವೆ. ಕರ್ನಾಟಕದಲ್ಲಿ ಡಿಜಿಟಲ್ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ನಮ್ಮ ಸಂಘಟನೆ ಮಾಧ್ಯಮ ಲೋಕದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವವರ ಹಿತಾಸಕ್ತಿ ಕಾಪಾಡಲು ಬದ್ದವಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಇದರ ಅಗತ್ಯತೆ ಎಂದಿಗಿಂತ ಈಗ ಹೆಚ್ಚಿದೆ. ಹೀಗಾಗಿ ಡಿಜಿಟಲ್ ಮಿಡಿಯಾ ಪೋರಮ್ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಪತ್ರಿಕೆ ಮತ್ತು ಮಾಧ್ಯಮಗಳಿಗೆ ನೀಡಿರುವಂತೆಯೇ ನಮಗೂ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ನೂರಾರು ಡಿಜಿಟಲ್ ಮಾಧ್ಯಮ ಪತ್ರಕರ್ತರು, ತಂತ್ರಜ್ಞರು ಹಾಜರಿದ್ದರು.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...