Homeಮುಖಪುಟಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

- Advertisement -
- Advertisement -

ಭಾರತದ ಖ್ಯಾತ ಸ್ಟ್ಯಾಂಡಪ್‌ ಕಾಮೆಡಿಯನ್‌ಗಳಾದ ಕುನಾಲ್ ಕಮ್ರ ಮತ್ತು ಮುನಾವರ್ ಫಾರೂಕಿಯವರ ಹಲವಾರು ಶೋಗಳು ಬಲಪಂಥೀಯ ಹಿಂದುತ್ವ ಕಾರ್ಯಕರ್ತರ ಗಲಾಟೆಯಿಂದ ರದ್ದಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ “ಕುನಾಲ್, ಮುನಾವರ್ ನಾನು ನಿಮಗಾಗಿ ಭೋಪಾಲ್‌ನಲ್ಲಿ ಒಂದು ಶೋ ಏರ್ಪಡಿಸುತ್ತೇನೆ. ಅದರ ಎಲ್ಲಾ ಜವಾಬ್ದಾರಿ ನನ್ನದಾಗಿರುತ್ತದೆ. ಆದರೆ ನಿಮ್ಮ ಕಾಮಿಡಿಯ ವಿಷಯ ಕೇವಲ ದಿಗ್ವಿಜಯ್ ಸಿಂಗ್ ಆಗಿರಬೇಕು ಎಂಬುದು ನನ್ನ ಒಂದೇ ಷರತ್ತು” ಎಂದು ತಿಳಿಸಿದ್ದಾರೆ.

“ಈ ಪ್ರದರ್ಶನಕ್ಕೆ ಸಂಘಿಗಳು ಆಕ್ಷೇಪಿಸಬಾರದು!! ಭಯಪಡಬೇಡ ಬನ್ನಿ!! ನಿಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸಮಯವನ್ನು ನೀಡಿ. ನಿಮ್ಮ ಎಲ್ಲಾ ಷರತ್ತುಗಳನ್ನು ಸ್ವೀಕರಿಸಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದು, ಕುನಾಲ್ ಕ್ರಮರವರ ಬಿಬಿಸಿಯೊಂದಿಗಿನ ಸಂದರ್ಶನದ ವಿಡಿಯೋ ತುಣುಕು ಹಂಚಿಕೊಂಡಿದ್ದಾರೆ.

ಗುಜರಾತ್‌ನ ಸ್ಟ್ಯಾಂಡಪ್‌ ಕಾಮೆಡಿಯನ್‌ ಆದ ಮುನಾವರ್ ಫಾರೂಕಿಯವರ 12 ಶೋಗಳನ್ನು ಬಲಪಂಥೀಯರ ಬೆದರಿಕೆಯ ಕಾರಣ ನೀಡಿ ಪೊಲೀಸರು ರದ್ದುಪಡಿಸಿದ್ದರು. ಅದೇ ರೀತಿ ಡಿಸೆಂಬರ್ 1ರಿಂದ 19ರ ನಡುವೆ ಬೆಂಗಳೂರಿನ ಜೆಪಿ ನಗರದ ಸ್ಥಳವೊಂದರಲ್ಲಿ ‘ಕುನಾಲ್ ಕಮ್ರಾ ಲೈವ್’ ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಕಮ್ರಾ ಪ್ರದರ್ಶಿಸಲು ಸಜ್ಜಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆದ ನಂತರ ಅವರ ಶೋಗಳನ್ನು ಸಹ ರದ್ದುಪಡಿಸಲಾಗಿತ್ತು.

ಈ ಕುರಿತು ಬಿಬಿಸಿ ಸಂದರ್ಶನದಲ್ಲಿ ಮಾತನಾಡಿದ್ದ ಕುನಾಲ್ “ಬೆಂಗಳೂರು ನನಗೆ ಬಹುಮುಖ್ಯ ನಗರ. ನನ್ನ ವೈರಲ್ ವಿಡಿಯೋಗಳು ಬೆಂಗಳೂರಿನಲ್ಲಿ ಪ್ರದರ್ಶಿತವಾಗಿದ್ದವು. ಇದು ಲಿಬರಲ್‌ಗಳಿರುವ ನಗರವಾಗಿತ್ತು. ಆದರೆ ಮೊದಲ ಬಾರಿಗೆ ಇಲ್ಲಿ ನನ್ನ ಶೋ ರದ್ದುಗೊಂಡಿದೆ. ಯಾರ ಬಳಿ ಅಧಿಕಾರವಿರುತ್ತದೊ ಅವರಿಗೆ ನಗುವುದು ಸಹ ಇಷ್ಟವಾಗುವುದಿಲ್ಲ. ಅವರು ಎಷ್ಟು ಪ್ರದರ್ಶನ ರದ್ದುಗೊಳಿಸುತ್ತಾರೋ ನೋಡುತ್ತೇನೆ. ನಾನು ಹೆದರುವುದಿಲ್ಲ, ಶೋ ಮಾಡಿಯೇ ಮಾಡುತ್ತೇನೆ. ನೀವೆಷ್ಟು ರದ್ದುಗೊಳಿಸುತ್ತಿರಿ ನೋಡೋಬಿಡೋಣ” ಎಂದಿದ್ದರು.

ನನ್ನ ಶೋ ರದ್ದಾದ ವಿಷಯ ಕೇಳಿ ನಗುಬಂತು. ಏಕೆಂದರೆ 40-50 ಜನ ಕೂತು ಟಿಕೆಟ್ ಖರೀದಿಸಿ ಕಾಮಿಡಿ ಶೋ ನೋಡುತ್ತಾರೆ. ಆದರೆ ಶೋ ನೋಡಲು ಇಷ್ಟಪಡದವರು ಶೋ ನಡೆಯಬಾರದೆಂದು ಧಮಕಿ ಹಾಕುತ್ತಾರೆ. ಟಿಕೆಟ್ ಖರೀದಿಸಿ ಶೋ ನೋಡುವವರಿಗೆ, ಕಲಾವಿದರಿಗೆ ಸರ್ಕಾರ ರಕ್ಷಣೆ ನೀಡದೆ ನೋಡದವರ ಧಮಕಿಗೆ ಹೆದರುತ್ತದೆ ಎಂದರೆ ನಗದೇ ಇರಲು ಸಾಧ್ಯವೇ? ಎಂದು ಕಮ್ರ ಹೇಳಿದ್ದಾರೆ.

ಒಂದು ಕಡೆ ಪ್ರಧಾನಿಗಳು ಹೇಳುತ್ತಾರೆ, ದೇಶ ಬಹಳ ಗಂಭೀರವಾಗಿದೆ. ಹ್ಯೂಮರ್ ಎಂಬುದು ಕಾಣೆಯಾಗುತ್ತಿದೆ. ಜನ ನಗುತ್ತಿಲ್ಲ ಎಂದು. ಇನ್ನೊಂದು ಕಡೆ ಜನರನ್ನು ನಗಿಸಲು ಶೋ ಮಾಡಿದರೆ ಪ್ರಧಾನಿಗಳ ಅನುಯಾಯಿಗಳೇ ಅದನ್ನು ರದ್ದುಗೊಳಿಸುತ್ತಾರೆ. ಇವರ ಚುನಾವಣಾ ರ್ಯಾಲಿಗಳಲ್ಲಿನ ಭಾಷಣ ಕೇಳಲು ಜನರಿಗೆ ದುಡ್ಡು ಕೊಟ್ಟು ಕರೆತರುತ್ತಾರೆ. ಆದರೆ ದುಡ್ಡು ಕೊಟ್ಟು ನಮ್ಮ ಕಾಮಿಡಿ ಕೇಳಲು ಬರುವವರಿಗೆ ಬೆದರಿಕೆಯೊಡ್ಡಿ ಶೋ ಕ್ಯಾನ್ಸಲ್ ಮಾಡುತ್ತಾರೆ. ಇದಕ್ಕೆ ಏನನ್ನಬೇಕು ಎಂದು ಕುನಾಲ್ ಪ್ರಶ್ನಿಸಿದ್ದಾರೆ.

ಹಾಗಾಗಿ ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್ ತನ್ನ ಮೇಲೆ ಕಾಮಿಡಿ ಮಾಡಿ. ಆ ಶೋ ಏರ್ಪಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ.


ಇದನ್ನೂ ಓದಿ; ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...