Homeಕರ್ನಾಟಕಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

"ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚರಿತ್ರೆಯನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರಧಾನಿ ಮೋದಿ ಅವರ ಕಾರ್ಯ ಸ್ವಾಗತ, ಅರ್ಹ. ಇಷ್ಟು ಬಹುದೊಡ್ಡ ಕಾರ್ಯಕ್ರಮದಲ್ಲಿ ಒಂದು ಲೋಪ ಆಗಿದೆ. ವಾರಣಾಸಿ ಜೀರ್ಣೋದ್ಧಾರ ಮಾಡಿದವರನ್ನು ಇಲ್ಲಿ ಮರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಾಜ ಮಹಾರಾಜರ ದಾಳಿಗೆ ಕಾಶಿ ತುತ್ತಾಗಿದ್ದು. ಅದನ್ನು  ಇಂದೂರಿನ ಮಹಾರಾಣಿ ಅಹಲ್ಯ ಬಾಯಿ ಔರ್ಕರ್ ರಕ್ಷಣೆ ಮಾಡಿದರು. ಯುದ್ದಕ್ಕೆ ಬದಲಾಗಿ ಬುದ್ದಿವಂತಿಕೆಯಿಂದ ಕಾಶಿ ವಿಶ್ವನಾಥ ದೇವಾಲಯ ಉಳಿಸಿದರು. ಮೊದಲ ಹಿಂದೂ ಧ್ವಜವನ್ನು ಹಾರಿಸಿದವರು ಅಹಲ್ಯ ಬಾಯಿ ಔರ್ಕರ್. ಅವರು ಯಾವಾಗಲೂ ಶಿವನ‌ ಹೆಸರಿನಲ್ಲೇ ಆಡಳಿತ ಮಾಡಿದವರು. ಅವರನ್ನು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮರೆತಿದ್ದಾರೆ. ಇದು ಚರಿತ್ರೆಯನ್ನು ಮರೆತಂತಾಗಿದೆ ಎಂದು ವಿಶ್ವನಾಥ್‌ ವಿಷಾದಿಸಿದ್ದಾರೆ.

ನೀವು ಚರಿತ್ರೆ ಮುಚ್ಚಿ ಹಾಕಲು ಹೊರಟಿದ್ದೀರಾ. ತಕ್ಷಣದಲ್ಲಿ ಆ ಸ್ಥಳದಲ್ಲಿ ಅಹಲ್ಯ ಬಾಯಿ ಔರ್ಕರ್ ಪ್ರತಿಮೆ ಸ್ಥಾಪಿಸಿ. ವಾರಣಾಸಿ ಏರ್ಪೋರ್ಟ್‌‌ಗೆ ಅಹಲ್ಯ ಬಾಯಿ ಔರ್ಕರ್ ಹೆಸರಿಡಿ ಎಂದು  ಎಂದು ಪ್ರಧಾನಿಯವರಲ್ಲಿ ಮನವಿ ಮಾಡಿರುವ ಅವರು, ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಮರಿಗೆ ಮೆಕ್ಕಾ ಇದ್ದಂತೆ ಹಿಂದೂಗಳಿಗೆ ಕಾಶಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಹಲ್ಯಾಬಾಯಿ ಕುರುಬ ಜನಾಂಗದವರು

ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿದ್ದೀರಾ? ಕುರುಬರು ನಿಮಗೆ ಅಪಥ್ಯವಾಗುತ್ತಿದ್ದಾರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ. ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ನಮ್ಮದು ಸಹ ದೊಡ್ಡ ಮಠ ಎಂದು ನೆನಪಿಸಿದ್ದಾರೆ.

ಹಾವೇರಿ ಕಲಬುರಗಿ ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್‌‌ಎಸ್‌ಎಸ್‌‌ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ. ಕುರುಬರು ಬೇಡವಾ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ತಮಗೆ ವಿಶ್ವನಾಥ್‌ ಎಂದು ಹೆಸರಿಟ್ಟ ಹಿನ್ನೆಲೆಯನ್ನು ನೆನೆಸಿಕೊಂಡಿರುವ ಅವರು, ಮಗು ಸಾವನ್ನಪ್ಪಬಾರದು ಅಂತಾ ನಮ್ಮಪ್ಪ ಹರಕೆ ಹೊತ್ತಿದ್ದರು.  ಕಾಶಿಗೆ ಹೋಗಿ ಹರಕೆ‌ ಹೊತ್ತು ನನ್ನ ಹೆಸರು ಇಟ್ಟರು. ಕಾಶಿಯಲ್ಲಿ ಮೋಕ್ಷ ಪಡೆಯಲು ಎಲ್ಲರು ಹಂಬಲಿಸುತ್ತಾರೆ. ಮುಸ್ಲಿಂರಿಗೆ ಮೆಕ್ಕಾ ಇದ್ದಂತೆ ಕ್ರೈಸ್ತರಿಗೆ ರೋಮ್ ಇದ್ದಂತೆ. ಹಿಂದೂಗಳಿಗೆ ಕಾಶಿ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...