Homeಕರ್ನಾಟಕಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

"ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚರಿತ್ರೆಯನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರಧಾನಿ ಮೋದಿ ಅವರ ಕಾರ್ಯ ಸ್ವಾಗತ, ಅರ್ಹ. ಇಷ್ಟು ಬಹುದೊಡ್ಡ ಕಾರ್ಯಕ್ರಮದಲ್ಲಿ ಒಂದು ಲೋಪ ಆಗಿದೆ. ವಾರಣಾಸಿ ಜೀರ್ಣೋದ್ಧಾರ ಮಾಡಿದವರನ್ನು ಇಲ್ಲಿ ಮರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಾಜ ಮಹಾರಾಜರ ದಾಳಿಗೆ ಕಾಶಿ ತುತ್ತಾಗಿದ್ದು. ಅದನ್ನು  ಇಂದೂರಿನ ಮಹಾರಾಣಿ ಅಹಲ್ಯ ಬಾಯಿ ಔರ್ಕರ್ ರಕ್ಷಣೆ ಮಾಡಿದರು. ಯುದ್ದಕ್ಕೆ ಬದಲಾಗಿ ಬುದ್ದಿವಂತಿಕೆಯಿಂದ ಕಾಶಿ ವಿಶ್ವನಾಥ ದೇವಾಲಯ ಉಳಿಸಿದರು. ಮೊದಲ ಹಿಂದೂ ಧ್ವಜವನ್ನು ಹಾರಿಸಿದವರು ಅಹಲ್ಯ ಬಾಯಿ ಔರ್ಕರ್. ಅವರು ಯಾವಾಗಲೂ ಶಿವನ‌ ಹೆಸರಿನಲ್ಲೇ ಆಡಳಿತ ಮಾಡಿದವರು. ಅವರನ್ನು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮರೆತಿದ್ದಾರೆ. ಇದು ಚರಿತ್ರೆಯನ್ನು ಮರೆತಂತಾಗಿದೆ ಎಂದು ವಿಶ್ವನಾಥ್‌ ವಿಷಾದಿಸಿದ್ದಾರೆ.

ನೀವು ಚರಿತ್ರೆ ಮುಚ್ಚಿ ಹಾಕಲು ಹೊರಟಿದ್ದೀರಾ. ತಕ್ಷಣದಲ್ಲಿ ಆ ಸ್ಥಳದಲ್ಲಿ ಅಹಲ್ಯ ಬಾಯಿ ಔರ್ಕರ್ ಪ್ರತಿಮೆ ಸ್ಥಾಪಿಸಿ. ವಾರಣಾಸಿ ಏರ್ಪೋರ್ಟ್‌‌ಗೆ ಅಹಲ್ಯ ಬಾಯಿ ಔರ್ಕರ್ ಹೆಸರಿಡಿ ಎಂದು  ಎಂದು ಪ್ರಧಾನಿಯವರಲ್ಲಿ ಮನವಿ ಮಾಡಿರುವ ಅವರು, ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಮರಿಗೆ ಮೆಕ್ಕಾ ಇದ್ದಂತೆ ಹಿಂದೂಗಳಿಗೆ ಕಾಶಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಹಲ್ಯಾಬಾಯಿ ಕುರುಬ ಜನಾಂಗದವರು

ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿದ್ದೀರಾ? ಕುರುಬರು ನಿಮಗೆ ಅಪಥ್ಯವಾಗುತ್ತಿದ್ದಾರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ. ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ನಮ್ಮದು ಸಹ ದೊಡ್ಡ ಮಠ ಎಂದು ನೆನಪಿಸಿದ್ದಾರೆ.

ಹಾವೇರಿ ಕಲಬುರಗಿ ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್‌‌ಎಸ್‌ಎಸ್‌‌ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ. ಕುರುಬರು ಬೇಡವಾ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ತಮಗೆ ವಿಶ್ವನಾಥ್‌ ಎಂದು ಹೆಸರಿಟ್ಟ ಹಿನ್ನೆಲೆಯನ್ನು ನೆನೆಸಿಕೊಂಡಿರುವ ಅವರು, ಮಗು ಸಾವನ್ನಪ್ಪಬಾರದು ಅಂತಾ ನಮ್ಮಪ್ಪ ಹರಕೆ ಹೊತ್ತಿದ್ದರು.  ಕಾಶಿಗೆ ಹೋಗಿ ಹರಕೆ‌ ಹೊತ್ತು ನನ್ನ ಹೆಸರು ಇಟ್ಟರು. ಕಾಶಿಯಲ್ಲಿ ಮೋಕ್ಷ ಪಡೆಯಲು ಎಲ್ಲರು ಹಂಬಲಿಸುತ್ತಾರೆ. ಮುಸ್ಲಿಂರಿಗೆ ಮೆಕ್ಕಾ ಇದ್ದಂತೆ ಕ್ರೈಸ್ತರಿಗೆ ರೋಮ್ ಇದ್ದಂತೆ. ಹಿಂದೂಗಳಿಗೆ ಕಾಶಿ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...