Homeಮುಖಪುಟಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸೋನಿಯಾ ಗಾಂಧಿಯವರ ವಾಗ್ದಾಳಿ ಬಳಿಕ ವಿವಾದಾತ್ಮಕ ಪ್ರಶ್ನೆಯನ್ನು ಕೈಬಿಟ್ಟ ಸಿಬಿಎಸ್‌ಇ

- Advertisement -
- Advertisement -

ಸ್ತ್ರಿ ದ್ವೇಷದಿಂದ ಕೂಡಿದ ಪ್ರಶ್ನೆಯನ್ನು 10ನೇ ತರಗತಿ ಇಂಗ್ಲಿಷ್ ಪರೀಕ್ಷೆಯಲ್ಲಿ ಸಿಬಿಎಸ್‌ಇ (ಸೆಂಟ್ರಲ್‌ ಬೋರ್ಡ್ ಆಫ್‌ ಸೆಕೆಂಡರಿ ಎಜುಕೇಷನ್‌) ಕೇಳಿದ್ದು ವಿವಾದಕ್ಕೆ ಕಾರಣವಾಗಿದೆ. ವಿವಾದವು ಸಂಸತ್ತಿನಲ್ಲಿ ಮಾರ್ಧನಿಸಿದ್ದು ಸಿಬಿಎಸ್‌ಇ ಪ್ರಮಾದವನ್ನು ಒಪ್ಪಿಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸಂಸತ್ತಿನಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಬಳಿಕ, “ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದ ಪ್ಯಾಸೇಜ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಹೀಗಾಗಿ ಈ ಪ್ಯಾಸೇಜ್ ಕೈಬಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳಿಗೆ ಪೂರ್ಣ ಅಂಕಗಳನ್ನು ನೀಡಲಾಗುತ್ತದೆ” ಎಂದು ಸಿಬಿಎಸ್‌ಇ ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಾಕ್ಯದಲ್ಲಿ ‘ಹೆಂಡತಿಯ ವಿಮೋಚನೆ ಮಕ್ಕಳ ಮೇಲಿನ ಪೋಷಕರ ಅಧಿಕಾರವನ್ನು ನಾಶಪಡಿಸಿತು’, ‘ಗಂಡನ ಮಾರ್ಗವನ್ನು ಒಪ್ಪಿಕೊಂಡರೆ ಮಾತ್ರ ತಾಯಿ, ಕಿರಿಯರ ಮೇಲೆ ವಿಧೇಯತೆಯನ್ನು ಹೊಂದಬಹುದು’ ಎಂಬ ವಾಕ್ಯಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

“ಪುರುಷನನ್ನು ಆತನ ಸ್ಥಾನದಿಂದ ಕೆಳಗಿಳಿಸಿ ಹೆಂಡತಿ ಮತ್ತು ತಾಯಿ ತನ್ನನ್ನು ತಾನೇ ವಂಚನೆ ಮಾಡಿಕೊಂಡರು”, ಇನ್ನೊಂದು ಭಾಗದಲ್ಲಿ, “ಸ್ವಾತಂತ್ರ್ಯವನ್ನು ಗಳಿಸುವುದು ವಿವಿಧ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಗೆ ಮುಖ್ಯ ಕಾರಣ”, “ಹೆಂಡತಿಯರು ತಮ್ಮ ಗಂಡನನ್ನು ಅನುಸರಿಸುವುದನ್ನು ನಿಲ್ಲಿಸಿದರು. ಹೀಗಾಗಿ ಮಕ್ಕಳು ಮತ್ತು ಸೇವಕರು ಅಶಿಸ್ತು ಪಾಲಿಸುತ್ತಿದ್ದಾರೆ” ಎಂಬ ಸಾಲುಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

ಈ ರೀತಿಯ ವಾಕ್ಯಗಳನ್ನು ಸಂಸತ್ತಿನಲ್ಲಿ ವಿವಿಧ ಪಕ್ಷಗಳು ಪ್ರಶ್ನಿಸಿದ್ದು, “ಇದು ಕಠಿಣ ಸ್ತ್ರೀದ್ವೇಷ” ಮತ್ತು “ಅಸಹ್ಯ” ಎಂದು ಪ್ರತಿಪಾದಿಸಿದವು.

ಕಾಂಗ್ರೆಸ್ ನೇತೃತ್ವದಲ್ಲಿ, ಡಿಎಂಕೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸದಸ್ಯರು ಲೋಕಸಭೆಯಲ್ಲಿ ಈ ವಿಷಯವಾಗಿ ಸಭಾ ತ್ಯಾಗ ಮಾಡಿದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಪ್ರಚಂಡ ಸ್ತ್ರೀದ್ವೇಷ” ಎಂದು ಬಣ್ಣಿಸಿದರು. “ನರೇಂದ್ರ ಮೋದಿ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಕ್ಷೇಪಾರ್ಹ ಪ್ರಶ್ನೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು, ಗಂಭೀರ ಲೋಪಕ್ಕೆ ಕಾರಣವಾದವರ ಮೇಲೆ ಪರಿಶೀಲನೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್‌ ಮಾಡಿದ್ದು ಸಿಬಿಎಸ್‌ಇ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಘಟನೆಯನ್ನು “ಅಸಹ್ಯಕರ” ಎಂದು ಬಣ್ಣಿಸಿರುವ ಅವರು “ಯುವಜನರ ನೈತಿಕತೆ ಮತ್ತು ಭವಿಷ್ಯವನ್ನು ಹತ್ತಿಕ್ಕುವ ಆರ್‌ಎಸ್‌ಎಸ್-ಬಿಜೆಪಿ ತಂತ್ರವಿದು” ಎಂದು ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಈ ಬೆಳವಣಿಗೆಯನ್ನು ಪ್ರಶ್ನಿಸಿದ್ದಾರೆ. “ನಂಬಲಾಗುತ್ತಿಲ್ಲ! ನಾವು ನಿಜವಾಗಿಯೂ ಮಕ್ಕಳಿಗೆ ಈ ಪ್ರೇರಣೆಯನ್ನು ಕಲಿಸುತ್ತಿದ್ದೇವೆಯೇ? ಸ್ಪಷ್ಟವಾಗಿ ಬಿಜೆಪಿ ಸರ್ಕಾರವು ಮಹಿಳೆಯರ ಮೇಲಿನ ಈ ಹಿಮ್ಮುಖ ದೃಷ್ಟಿಕೋನಗಳನ್ನು ಅನುಮೋದಿಸುತ್ತದೆ, ಇಲ್ಲದಿದ್ದರೆ ಅವರು CBSE ಪಠ್ಯಕ್ರಮದಲ್ಲಿ ಏಕೆ ಕಾಣಿಸಿಕೊಳ್ಳುತ್ತಾರೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿರಿ: ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...