Homeಮುಖಪುಟಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸೋನಿಯಾ ಗಾಂಧಿಯವರ ವಾಗ್ದಾಳಿ ಬಳಿಕ ವಿವಾದಾತ್ಮಕ ಪ್ರಶ್ನೆಯನ್ನು ಕೈಬಿಟ್ಟ ಸಿಬಿಎಸ್‌ಇ

- Advertisement -
- Advertisement -

ಸ್ತ್ರಿ ದ್ವೇಷದಿಂದ ಕೂಡಿದ ಪ್ರಶ್ನೆಯನ್ನು 10ನೇ ತರಗತಿ ಇಂಗ್ಲಿಷ್ ಪರೀಕ್ಷೆಯಲ್ಲಿ ಸಿಬಿಎಸ್‌ಇ (ಸೆಂಟ್ರಲ್‌ ಬೋರ್ಡ್ ಆಫ್‌ ಸೆಕೆಂಡರಿ ಎಜುಕೇಷನ್‌) ಕೇಳಿದ್ದು ವಿವಾದಕ್ಕೆ ಕಾರಣವಾಗಿದೆ. ವಿವಾದವು ಸಂಸತ್ತಿನಲ್ಲಿ ಮಾರ್ಧನಿಸಿದ್ದು ಸಿಬಿಎಸ್‌ಇ ಪ್ರಮಾದವನ್ನು ಒಪ್ಪಿಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸಂಸತ್ತಿನಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಬಳಿಕ, “ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದ ಪ್ಯಾಸೇಜ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಹೀಗಾಗಿ ಈ ಪ್ಯಾಸೇಜ್ ಕೈಬಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳಿಗೆ ಪೂರ್ಣ ಅಂಕಗಳನ್ನು ನೀಡಲಾಗುತ್ತದೆ” ಎಂದು ಸಿಬಿಎಸ್‌ಇ ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಾಕ್ಯದಲ್ಲಿ ‘ಹೆಂಡತಿಯ ವಿಮೋಚನೆ ಮಕ್ಕಳ ಮೇಲಿನ ಪೋಷಕರ ಅಧಿಕಾರವನ್ನು ನಾಶಪಡಿಸಿತು’, ‘ಗಂಡನ ಮಾರ್ಗವನ್ನು ಒಪ್ಪಿಕೊಂಡರೆ ಮಾತ್ರ ತಾಯಿ, ಕಿರಿಯರ ಮೇಲೆ ವಿಧೇಯತೆಯನ್ನು ಹೊಂದಬಹುದು’ ಎಂಬ ವಾಕ್ಯಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

“ಪುರುಷನನ್ನು ಆತನ ಸ್ಥಾನದಿಂದ ಕೆಳಗಿಳಿಸಿ ಹೆಂಡತಿ ಮತ್ತು ತಾಯಿ ತನ್ನನ್ನು ತಾನೇ ವಂಚನೆ ಮಾಡಿಕೊಂಡರು”, ಇನ್ನೊಂದು ಭಾಗದಲ್ಲಿ, “ಸ್ವಾತಂತ್ರ್ಯವನ್ನು ಗಳಿಸುವುದು ವಿವಿಧ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಗೆ ಮುಖ್ಯ ಕಾರಣ”, “ಹೆಂಡತಿಯರು ತಮ್ಮ ಗಂಡನನ್ನು ಅನುಸರಿಸುವುದನ್ನು ನಿಲ್ಲಿಸಿದರು. ಹೀಗಾಗಿ ಮಕ್ಕಳು ಮತ್ತು ಸೇವಕರು ಅಶಿಸ್ತು ಪಾಲಿಸುತ್ತಿದ್ದಾರೆ” ಎಂಬ ಸಾಲುಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

ಈ ರೀತಿಯ ವಾಕ್ಯಗಳನ್ನು ಸಂಸತ್ತಿನಲ್ಲಿ ವಿವಿಧ ಪಕ್ಷಗಳು ಪ್ರಶ್ನಿಸಿದ್ದು, “ಇದು ಕಠಿಣ ಸ್ತ್ರೀದ್ವೇಷ” ಮತ್ತು “ಅಸಹ್ಯ” ಎಂದು ಪ್ರತಿಪಾದಿಸಿದವು.

ಕಾಂಗ್ರೆಸ್ ನೇತೃತ್ವದಲ್ಲಿ, ಡಿಎಂಕೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸದಸ್ಯರು ಲೋಕಸಭೆಯಲ್ಲಿ ಈ ವಿಷಯವಾಗಿ ಸಭಾ ತ್ಯಾಗ ಮಾಡಿದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಪ್ರಚಂಡ ಸ್ತ್ರೀದ್ವೇಷ” ಎಂದು ಬಣ್ಣಿಸಿದರು. “ನರೇಂದ್ರ ಮೋದಿ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಕ್ಷೇಪಾರ್ಹ ಪ್ರಶ್ನೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು, ಗಂಭೀರ ಲೋಪಕ್ಕೆ ಕಾರಣವಾದವರ ಮೇಲೆ ಪರಿಶೀಲನೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್‌ ಮಾಡಿದ್ದು ಸಿಬಿಎಸ್‌ಇ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಘಟನೆಯನ್ನು “ಅಸಹ್ಯಕರ” ಎಂದು ಬಣ್ಣಿಸಿರುವ ಅವರು “ಯುವಜನರ ನೈತಿಕತೆ ಮತ್ತು ಭವಿಷ್ಯವನ್ನು ಹತ್ತಿಕ್ಕುವ ಆರ್‌ಎಸ್‌ಎಸ್-ಬಿಜೆಪಿ ತಂತ್ರವಿದು” ಎಂದು ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಈ ಬೆಳವಣಿಗೆಯನ್ನು ಪ್ರಶ್ನಿಸಿದ್ದಾರೆ. “ನಂಬಲಾಗುತ್ತಿಲ್ಲ! ನಾವು ನಿಜವಾಗಿಯೂ ಮಕ್ಕಳಿಗೆ ಈ ಪ್ರೇರಣೆಯನ್ನು ಕಲಿಸುತ್ತಿದ್ದೇವೆಯೇ? ಸ್ಪಷ್ಟವಾಗಿ ಬಿಜೆಪಿ ಸರ್ಕಾರವು ಮಹಿಳೆಯರ ಮೇಲಿನ ಈ ಹಿಮ್ಮುಖ ದೃಷ್ಟಿಕೋನಗಳನ್ನು ಅನುಮೋದಿಸುತ್ತದೆ, ಇಲ್ಲದಿದ್ದರೆ ಅವರು CBSE ಪಠ್ಯಕ್ರಮದಲ್ಲಿ ಏಕೆ ಕಾಣಿಸಿಕೊಳ್ಳುತ್ತಾರೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿರಿ: ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...