Homeಮುಖಪುಟಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸೋನಿಯಾ ಗಾಂಧಿಯವರ ವಾಗ್ದಾಳಿ ಬಳಿಕ ವಿವಾದಾತ್ಮಕ ಪ್ರಶ್ನೆಯನ್ನು ಕೈಬಿಟ್ಟ ಸಿಬಿಎಸ್‌ಇ

- Advertisement -
- Advertisement -

ಸ್ತ್ರಿ ದ್ವೇಷದಿಂದ ಕೂಡಿದ ಪ್ರಶ್ನೆಯನ್ನು 10ನೇ ತರಗತಿ ಇಂಗ್ಲಿಷ್ ಪರೀಕ್ಷೆಯಲ್ಲಿ ಸಿಬಿಎಸ್‌ಇ (ಸೆಂಟ್ರಲ್‌ ಬೋರ್ಡ್ ಆಫ್‌ ಸೆಕೆಂಡರಿ ಎಜುಕೇಷನ್‌) ಕೇಳಿದ್ದು ವಿವಾದಕ್ಕೆ ಕಾರಣವಾಗಿದೆ. ವಿವಾದವು ಸಂಸತ್ತಿನಲ್ಲಿ ಮಾರ್ಧನಿಸಿದ್ದು ಸಿಬಿಎಸ್‌ಇ ಪ್ರಮಾದವನ್ನು ಒಪ್ಪಿಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸಂಸತ್ತಿನಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಬಳಿಕ, “ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದ ಪ್ಯಾಸೇಜ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಹೀಗಾಗಿ ಈ ಪ್ಯಾಸೇಜ್ ಕೈಬಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳಿಗೆ ಪೂರ್ಣ ಅಂಕಗಳನ್ನು ನೀಡಲಾಗುತ್ತದೆ” ಎಂದು ಸಿಬಿಎಸ್‌ಇ ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಾಕ್ಯದಲ್ಲಿ ‘ಹೆಂಡತಿಯ ವಿಮೋಚನೆ ಮಕ್ಕಳ ಮೇಲಿನ ಪೋಷಕರ ಅಧಿಕಾರವನ್ನು ನಾಶಪಡಿಸಿತು’, ‘ಗಂಡನ ಮಾರ್ಗವನ್ನು ಒಪ್ಪಿಕೊಂಡರೆ ಮಾತ್ರ ತಾಯಿ, ಕಿರಿಯರ ಮೇಲೆ ವಿಧೇಯತೆಯನ್ನು ಹೊಂದಬಹುದು’ ಎಂಬ ವಾಕ್ಯಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

“ಪುರುಷನನ್ನು ಆತನ ಸ್ಥಾನದಿಂದ ಕೆಳಗಿಳಿಸಿ ಹೆಂಡತಿ ಮತ್ತು ತಾಯಿ ತನ್ನನ್ನು ತಾನೇ ವಂಚನೆ ಮಾಡಿಕೊಂಡರು”, ಇನ್ನೊಂದು ಭಾಗದಲ್ಲಿ, “ಸ್ವಾತಂತ್ರ್ಯವನ್ನು ಗಳಿಸುವುದು ವಿವಿಧ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಗೆ ಮುಖ್ಯ ಕಾರಣ”, “ಹೆಂಡತಿಯರು ತಮ್ಮ ಗಂಡನನ್ನು ಅನುಸರಿಸುವುದನ್ನು ನಿಲ್ಲಿಸಿದರು. ಹೀಗಾಗಿ ಮಕ್ಕಳು ಮತ್ತು ಸೇವಕರು ಅಶಿಸ್ತು ಪಾಲಿಸುತ್ತಿದ್ದಾರೆ” ಎಂಬ ಸಾಲುಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

ಈ ರೀತಿಯ ವಾಕ್ಯಗಳನ್ನು ಸಂಸತ್ತಿನಲ್ಲಿ ವಿವಿಧ ಪಕ್ಷಗಳು ಪ್ರಶ್ನಿಸಿದ್ದು, “ಇದು ಕಠಿಣ ಸ್ತ್ರೀದ್ವೇಷ” ಮತ್ತು “ಅಸಹ್ಯ” ಎಂದು ಪ್ರತಿಪಾದಿಸಿದವು.

ಕಾಂಗ್ರೆಸ್ ನೇತೃತ್ವದಲ್ಲಿ, ಡಿಎಂಕೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸದಸ್ಯರು ಲೋಕಸಭೆಯಲ್ಲಿ ಈ ವಿಷಯವಾಗಿ ಸಭಾ ತ್ಯಾಗ ಮಾಡಿದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಪ್ರಚಂಡ ಸ್ತ್ರೀದ್ವೇಷ” ಎಂದು ಬಣ್ಣಿಸಿದರು. “ನರೇಂದ್ರ ಮೋದಿ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಕ್ಷೇಪಾರ್ಹ ಪ್ರಶ್ನೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು, ಗಂಭೀರ ಲೋಪಕ್ಕೆ ಕಾರಣವಾದವರ ಮೇಲೆ ಪರಿಶೀಲನೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್‌ ಮಾಡಿದ್ದು ಸಿಬಿಎಸ್‌ಇ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಘಟನೆಯನ್ನು “ಅಸಹ್ಯಕರ” ಎಂದು ಬಣ್ಣಿಸಿರುವ ಅವರು “ಯುವಜನರ ನೈತಿಕತೆ ಮತ್ತು ಭವಿಷ್ಯವನ್ನು ಹತ್ತಿಕ್ಕುವ ಆರ್‌ಎಸ್‌ಎಸ್-ಬಿಜೆಪಿ ತಂತ್ರವಿದು” ಎಂದು ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಈ ಬೆಳವಣಿಗೆಯನ್ನು ಪ್ರಶ್ನಿಸಿದ್ದಾರೆ. “ನಂಬಲಾಗುತ್ತಿಲ್ಲ! ನಾವು ನಿಜವಾಗಿಯೂ ಮಕ್ಕಳಿಗೆ ಈ ಪ್ರೇರಣೆಯನ್ನು ಕಲಿಸುತ್ತಿದ್ದೇವೆಯೇ? ಸ್ಪಷ್ಟವಾಗಿ ಬಿಜೆಪಿ ಸರ್ಕಾರವು ಮಹಿಳೆಯರ ಮೇಲಿನ ಈ ಹಿಮ್ಮುಖ ದೃಷ್ಟಿಕೋನಗಳನ್ನು ಅನುಮೋದಿಸುತ್ತದೆ, ಇಲ್ಲದಿದ್ದರೆ ಅವರು CBSE ಪಠ್ಯಕ್ರಮದಲ್ಲಿ ಏಕೆ ಕಾಣಿಸಿಕೊಳ್ಳುತ್ತಾರೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿರಿ: ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...